Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೇಸ್‌ಬುಕ್‌ನ 4 ಕಟ್ಟಡಗಳ ತೆರವಿಗೆ...

ಫೇಸ್‌ಬುಕ್‌ನ 4 ಕಟ್ಟಡಗಳ ತೆರವಿಗೆ ಕಾರಣವಾದ ಒಂದು ಪೊಟ್ಟಣ

ವಾರ್ತಾಭಾರತಿವಾರ್ತಾಭಾರತಿ2 July 2019 11:01 PM IST
share
ಫೇಸ್‌ಬುಕ್‌ನ 4 ಕಟ್ಟಡಗಳ ತೆರವಿಗೆ ಕಾರಣವಾದ ಒಂದು ಪೊಟ್ಟಣ

ಸಾನ್‌ಫ್ರಾನ್ಸಿಸ್ಕೊ, ಜು. 2: ನರಗಳ ದೌರ್ಬಲ್ಯಕ್ಕೆ ಕಾರಣವಾಗುವ ರಾಸಾಯನಿಕ ‘ಸಾರಿನ್’ನ ಪೊಟ್ಟಣವೊಂದು ಫೇಸ್‌ಬುಕ್ ಕಂಪೆನಿಯ ಸಿಲಿಕಾನ್ ವ್ಯಾಲಿ ಅಂಚೆ ಕಟ್ಟಡದಲ್ಲಿ ಪತ್ತೆಯಾದ ಬಳಿಕ, ಫೇಸ್‌ಬುಕ್ ಸೋಮವಾರ ತನ್ನ ನಾಲ್ಕು ಕಟ್ಟಡಗಳನ್ನು ತೆರವುಗೊಳಿಸಿದೆ ಹಾಗೂ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಟ್ಟಣದಲ್ಲಿದ್ದ ಪದಾರ್ಥವು ರಾಸಾಯನಿಕ ಎನ್ನುವುದು ಖಚಿತವಾದ ಬಳಿಕ ಸಾಮಾಜಿಕ ಮಾಧ್ಯಮ ದೈತ್ಯ ಈ ಕ್ರಮ ತೆಗೆದುಕೊಂಡಿದೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಶಂಕಿತ ಪೊಟ್ಟಣದ ಸಂಪರ್ಕಕ್ಕೆ ಬಂದ ಜನರು, ಸಾರಿನ್ ರಾಸಾಯನಿಕಕ್ಕೆ ಗುರಿಯಾದ ಯಾವುದೇ ಲಕ್ಷಣಗಳನ್ನು ತೋರಿಸಲಿಲ್ಲ ಎಂದು ಮೆನ್ಲೊ ಪಾರ್ಕ್ ನಗರದ ಫಯರ್ ಮಾರ್ಶಲ್ ಜಾನ್ ಜಾನ್ಸನ್ ಹೇಳಿದರು.

‘‘ಫೇಸ್‌ಬುಕ್ ಕಟ್ಟಡಕ್ಕೆ ಬರುವ ಎಲ್ಲ ಪೊಟ್ಟಣಗಳನ್ನು ತಪಾಸಣೆಗೊಳಪಡಿಸಲಾಗುತ್ತದೆ ಹಾಗೂ ತಪಾಸಣೆಯಲ್ಲಿ ಅದು ರಾಸಾಯನಿಕ ಎನ್ನುವುದು ಸಾಬೀತಾಗಿದೆ. ಹಾಗಾಗಿ, ಮಾದರಿ ವಿಧಾನಗಳಂತೆ ಅವರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಈಗ ನಾವು, ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ’’ ಎಂದರು.

‘ಬಿಳಿಯ ರಾಷ್ಟ್ರೀಯತೆ’ ನಿವಾರಿಸಲು ಹೆಚ್ಚಿನ ಕ್ರಮ: ಫೇಸ್‌ಬುಕ್

 ‘ಬಿಳಿಯ ರಾಷ್ಟ್ರೀಯತೆ’ ಮತ್ತು ‘ಬಿಳಿಯರ ಪ್ರತ್ಯೇಕತೆ’ಗಳನ್ನು ಉತ್ತೇಜಿಸುವ ಬರಹಗಳನ್ನು ನಿವಾರಿಸಲು ಹೊಸ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಫೇಸ್‌ಬುಕ್ ಸೋಮವಾರ ಹೇಳಿದೆ.

ಈ ಪಿಡುಗುಗಳನ್ನು ನಿವಾರಿಸಲು ಫೇಸ್‌ಬುಕ್ ತೆಗೆದುಕೊಂಡ ಕ್ರಮಗಳು ‘ತೀರಾ ಕಡಿಮೆ’ಯಾಗಿವೆ ಎಂಬುದಾಗಿ ಬಾಹ್ಯ ಪರಿಶೋಧನೆಯೊಂದು ಹೇಳಿದ ಬಳಿಕ ಫೇಸ್‌ಬುಕ್ ಈ ಪ್ರತಿಕ್ರಿಯೆ ನೀಡಿದೆ.

ಕೇವಲ ಈ ಪದಗಳನ್ನು ಹೊಗಳುವ, ಬೆಂಬಲಿಸುವ ಅಥವಾ ಪ್ರತಿನಿಧಿಸುವುದನ್ನು ನಿಷೇಧಿಸುವ ಫೇಸ್‌ಬುಕ್ ನೀತಿಯಿಂದ ಏನನ್ನೂ ಸಾಧಿಸಿದಂತಾಗುವುದಿಲ್ಲ ಎಂಬುದಾಗಿ ನಾಗರಿಕ ಹಕ್ಕುಗಳ ವಕೀಲೆ ಲಾರಾ ಮರ್ಫಿ ನೇತೃತ್ವದ ಪರಿಶೋಧನೆ ಅಭಿಪ್ರಾಯಪಟ್ಟಿದೆ.

‘‘ಇದರ ಪರಿಣಾಮವಾಗಿ, ಇದೇ ಹಾನಿಯನ್ನು ಉಂಟು ಮಾಡುವ ಬರಹಗಳು ಫೇಸ್‌ಬುಕ್‌ನಲ್ಲಿ ಉಳಿಯುವಂತಾಗಿದೆ’’ ಎಂದು ಪರಿಶೋಧನ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X