Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ತಾರ್‌ಪುರ ಯೋಜನೆ: ಭಾರತ- ಪಾಕ್...

ಕರ್ತಾರ್‌ಪುರ ಯೋಜನೆ: ಭಾರತ- ಪಾಕ್ ಜಂಟಿಸಭೆಗೆ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ3 July 2019 9:37 AM IST
share
ಕರ್ತಾರ್‌ಪುರ ಯೋಜನೆ: ಭಾರತ- ಪಾಕ್ ಜಂಟಿಸಭೆಗೆ ಮುಹೂರ್ತ

ಇಸ್ಲಾಮಾಬಾದ್, ಜು.3: ಕರ್ತಾರ್‌ಪುರ ಯೋಜನೆಯನ್ನು ನವೆಂಬರ್ ಒಳಗಾಗಿ ಪೂರ್ಣಗೊಳಿಸುವಂತೆ ಭಾರತ ಪಾಕಿಸ್ತಾನಕ್ಕೆ ಗಡುವು ನೀಡಿದೆ. ಈ ಮೂಲಕ ಸಿಕ್ಖ್ ಸಮುದಾಯದವರು ಪಾಕಿಸ್ತಾನದ ನರ್ವಾಲ್ ಜಿಲ್ಲೆಯ ದರ್ಬಾರ್ ಸಾಹಿಬ್‌ನಲ್ಲಿ ಗುರುನಾನಕ್ ಅವರ 550ನೇ ಜಯಂತಿಯ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರ ಒತ್ತಾಯಿಸಿದೆ. ಈ ಹಿನ್ನೆಯಲ್ಲಿ ಜುಲೈ 11 ಮತ್ತು ಜುಲೈ 14ರಂದು ಕಾರಿಡಾರ್ ಯೋಜನೆಯನ್ನು ಅಂತಿಮಪಡಿಸುವ ಬಗ್ಗೆ ಚರ್ಚಿಸಲು ಉಭಯ ದೇಶಗಳ ಜಂಟಿ ಕಾರ್ಯದರ್ಶಿ ಮಟ್ಟದ ಸಭೆ ನಡೆಸುವ ಪ್ರಸ್ತಾವವನ್ನು ಮುಂದಿಟ್ಟಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ.

ಪ್ರಯಾಣಿಕರ ಟರ್ಮಿನಲ್, ಚತುಷ್ಪಥ ಹೆದ್ದಾರಿ ಮತ್ತು ರಾವಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿ ಭಾರತದ ಕಡೆಯಿಂದ ಪ್ರಗತಿಯಲ್ಲಿದ್ದು, ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ ಮಾತ್ರವಲ್ಲದೆ ಭಾರತೀಯ ಮೂಲದ ವ್ಯಕ್ತಿಗಳಿಗೆ (ಪಿಐಒ) ಕೂಡಾ ಐತಿಹಾಸಿಕ ಮಂದಿರಕ್ಕೆ ಭೇಟಿ ನೀಡಲು ಅವಕಾಶ ನೀಡಬೇಕು ಎಂದು ಭಾರತವು ಪಾಕಿಸ್ತಾನವನ್ನು ಒತ್ತಾಯಿಸಿದೆ. ಸದ್ಯ ಪಾಕಿಸ್ತಾನ ಸರ್ಕಾರ ಭಾರತದ ಪಾಸ್‌ಪೋರ್ಟ್ ಹೊಂದಿರುವವರಿಗೆ ಮಾತ್ರ ಈ ಅವಕಾಶ ನೀಡಿದ್ದು, ಪಿಐಒಗಳು ಪಾಕಿಸ್ತಾನದ ಯಾತ್ರಾ ವೀಸಾ ಪಡೆಯಬೇಕು ಎಂದು ಹೇಳಿದೆ.

ಯಾತ್ರಿಗಳು ಕರ್ತಾರ್‌ಪುರ ಮಂದಿರಕ್ಕೆ ಯಾವುದೇ ಪರವಾನಿಗೆ ಪಡೆಯದೇ ಹಾಗೂ ಹೆಚ್ಚುವರಿ ಶುಲ್ಕ ಪಾವತಿಸದೇ ಪಾದಯಾತ್ರೆಯಲ್ಲಿ ತೆರಳಲೂ ಅವಕಾಶ ನೀಡಬೇಕು ಎನ್ನುವುದು ಭಾರತದ ಮತ್ತೊಂದು ಬೇಡಿಕೆ. ಈ ಪ್ರದೇಶ ದೇರಾ ಬಾಬಾ ನಾನಕ್‌ನ ಪಶ್ಚಿಮಕ್ಕೆ ಅಂತಾರಾಷ್ಟ್ರೀಯ ಗಡಿಯಿಂದ ಐದು ಕಿಲೋಮೀಟರ್ ದೂರದಲ್ಲಿದೆ.

ಕರ್ತಾರ್‌ಪುರದಲ್ಲಿರುವ ದರ್ಬಾರ್‌ಸಾಹಿಬ್‌ಗೆ ಭೇಟಿ ನೀಡುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ರಾವಿ ನದಿಗೆ ಅಡ್ಡಲಾಗಿ 200-300 ಮೀಟರ್ ಉದ್ದದ ಸೇತುವೆ ನಿರ್ಮಾಣಕ್ಕೆ ಭಾರತ ಮುಂದಾಗಿದೆ. ವರ್ಷವಿಡೀ ಪ್ರತಿದಿನ 5 ಸಾವಿರ ಯಾತ್ರಿಗಳು ಈ ಮಂದಿರಕ್ಕೆ ಭೇಟಿ ನೀಡಲು ಅವಕಾಶ ನೀಡಬೇಕು ಮತ್ತು ಗುರುನಾನಕ್ ಜಯಂತಿಯಂಥ ವಿಶೇಷ ಸಂದರ್ಭಗಳಲ್ಲಿ 15 ಸಾವಿರ ಮಂದಿ ಭೇಟಿ ನೀಡಲು ಅವಕಾಶ ನೀಡಬೇಕು ಎನ್ನುವುದು ಭಾರತದ ಆಗ್ರಹ. ಆದರೆ ಪಾಕಿಸ್ತಾನ ಸೀಮಿತ ದಿನಗಳಲ್ಲಿ 500-700 ಮಂದಿಯ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲು ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X