Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಕಟನೆ ನೀಡಿ ಕೈತೊಳೆದುಕೊಳ್ಳಬೇಡಿ:...

ಪ್ರಕಟನೆ ನೀಡಿ ಕೈತೊಳೆದುಕೊಳ್ಳಬೇಡಿ: ಎಬಿವಿಪಿಗೆ ಮಹೇಂದ್ರ ಕುಮಾರ್ ಚಾಟಿ

ಪುತ್ತೂರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ3 July 2019 9:08 PM IST
share
ಪ್ರಕಟನೆ ನೀಡಿ ಕೈತೊಳೆದುಕೊಳ್ಳಬೇಡಿ: ಎಬಿವಿಪಿಗೆ ಮಹೇಂದ್ರ ಕುಮಾರ್ ಚಾಟಿ

ಮಂಗಳೂರು, ಜು.3: ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿರುವ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿ ಸಂಘಟನೆ ಎಬಿವಿಪಿಗೆ ಮಹೇಂದ್ರ ಕುಮಾರ್ ಕುಟುಕಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಮಾಡಿರುವ ಅವರು, “ಪುತ್ತೂರಿನ ಕ್ರೌರ್ಯದ ವಿಚಾರದಲ್ಲಿ ಜಾತಿ ತರಬೇಡಿ. ಧರ್ಮ ತರಬೇಡಿ. ಕೇಸರಿ ತರಬೇಡಿ. ಹಸಿರು ತರಬೇಡಿ.. ನಿಜ ಈ ಮಾತುಗಳನ್ನು ಖಂಡಿತವಾಗಿಯೂ ನಾನು ಒಪ್ಪುತ್ತೇನೆ .ಆದರೆ ಈ ಮಾತುಗಳನ್ನು ಹೇಳುತ್ತಿರುವವರು ಆಡುತ್ತಿರುವವರು ಯಾರು ?, ಪ್ರತಿ ಘಟನೆಗೂ ಹಸಿರು ಎಳೆದು ತಂದವರು ಧರ್ಮದ ಬಣ್ಣ ಹಚ್ಚಿದವರು ಸಮಾಜವನ್ನು ಒಡೆದವರು ಇಂದು ಈ ಮಾತುಗಳನ್ನು ಆಡುತ್ತಿದ್ದಾರೆ ... ಇದೇ ಮಾನಸಿಕತೆ ಪ್ರತಿ ಘಟನೆಯಲ್ಲೂ ಇದ್ದರೆ ಇಂತಹ ಘಟನೆಗಳು ನಡೆಯುವುದೇ ಇಲ್ಲ ಸಮಾಜಕ್ಕೊಂದು ಜವಾಬ್ದಾರಿ ಬರುವ ರೀತಿ ಎಲ್ಲ ಸಂದರ್ಭಗಳಲ್ಲೂ ನಡೆದುಕೊಳ್ಳಬೇಕು”.

“ಈ ಘಟನೆಗೆ ಸಂಬಂಧಪಟ್ಟಂತೆ ಎಬಿವಿಪಿ ಪ್ರಕಟಣೆ ಹೊರಡಿಸಿದೆ. ನಿಮ್ಮದೇ ಸಂಘಟನೆಯ ಹುಡುಗರು ನಿಮ್ಮದೇ ಗರಡಿಯಲ್ಲಿ ಬೆಳೆದ ಹುಡುಗರು ನಿಮ್ಮದೇ ಶಾಖೆಗಳಲ್ಲಿ ಭಾಗವಹಿಸಿದ ಹುಡುಗರು ನಿಮ್ಮದೇ ಕಾರ್ಯಕ್ರಮಗಳಿಗೆ ಶಕ್ತಿ ತುಂಬಿಸಿದ ಹುಡುಗರು ನಿಮ್ಮ ಸಂಸ್ಕೃತಿಯಲ್ಲೇ ಪಳಗಿದ ಹುಡುಗರು ನಿಮ್ಮದೇ ಕೇಂದ್ರ ಬಿಂದು ಕಾಲೇಜಿನಲ್ಲಿ ಸಂಪೂರ್ಣ ಸಂಘಮಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹುಡುಗರು ಹೀನ ಕೃತ್ಯದಲ್ಲಿ ಭಾಗವಹಿಸಿದ ತಕ್ಷಣ ಪ್ರಕಟಣೆ ಹೊರಡಿಸಿ ಬಿಟ್ಟರೆ ಮುಗಿದು ಹೋಗುವುದಿಲ್ಲ ನಿಮ್ಮದೇ ಕಾಲೇಜಿನ ಮಗುವಿಗೆ ಅನ್ಯಾಯವಾಗಿದೆ. ಪೋಷಕರು ಎದೆ ಒಡೆದುಕೊಳ್ಳುತ್ತಿದ್ದಾರೆ. ನ್ಯಾಯ ಕೊಡಿ, ನ್ಯಾಯ ಸಿಗುವವರೆಗೆ ನಿಮ್ಮ ಕಾಲೇಜಿನಲ್ಲೂ ಸೇರಿದಂತೆ ಪ್ರತಿಯೊಂದು ಕಡೆಯೂ ಹೋರಾಟ ಮಾಡಿ, ಅದು ನಿಮ್ಮ ಜವಾಬ್ದಾರಿ, ಪ್ರಕಟಣೆ ಹೊರಡಿಸಿ ಕೈತೊಳೆದುಕೊಳ್ಳಬೇಡಿ”.

“ಆ ಹುಡುಗರಿಗೆ ಗಲ್ಲು ಶಿಕ್ಷೆ ಆಗುವವರೆಗೂ ನಿಮ್ಮ ಹೋರಾಟವಿರಲಿ, ಯಾಕೆಂದರೆ ಆ ಮಗು ನಿಮ್ಮ ಸಂಘಟನೆಯ ವಿದ್ಯಾರ್ಥಿನಿ ಸಂಘದ ಮಗು. ಈ ಕೃತ್ಯ ನಡೆಸಿದ ಆ ಯುವಕರಿಗೆ ಇಷ್ಟೊಂದು ಧೈರ್ಯ ಹೇಗೆ ಬಂತು ಎಂಬುದರ ಬಗ್ಗೆಯೂ ಅವಲೋಕನ ನಡೆಸಿ, ನಾವು ಸಂಘದ ಯುವಕರು ನಮ್ಮ ಹಿಂದೆ ಜನಪ್ರತಿನಿಧಿಗಳಿದ್ದಾರೆ ಶಕ್ತಿಯಿದೆ, ನಾವು ಏನನ್ನು ಬೇಕಾದರೂ ಜಯಿಸಬಲ್ಲವು ಎಂಬ ಮಾನಸಿಕತೆಯಿಂದ ಮೊದಲು ಹೊರತನ್ನಿ. ವಿದ್ಯಾರ್ಥಿ ಕಾರ್ಯಕರ್ತರನ್ನು ಮತ್ತು ಹೊರಗಿರುವ ನಿಮ್ಮ ಸಂಘಟನೆಯ ಎಲ್ಲ ಕಾರ್ಯಕರ್ತರನ್ನು ಈ ಮಾನಸಿಕತೆಯಿಂದ ಹೊರತರುವ ಪ್ರಯತ್ನ ಮಾಡಿ ಕೆಲಸ ಮಾಡಿ ....” ಎಂದಿದ್ದಾರೆ.

ಅವರ ಫೇಸ್ ಬುಕ್ ಪೋಸ್ಟ್ ಈ ಕೆಳಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X