Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪದವಿ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ:...

ಪದವಿ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ: ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ್

ಬೋಧಿಸದಿದ್ದರೆ ಕಾಲೇಜು ಮಾನ್ಯತೆ ನವೀಕರಣವಿಲ್ಲವೆಂಬ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ3 July 2019 9:48 PM IST
share
ಪದವಿ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ: ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ್

ಬೆಂಗಳೂರು, ಜು.3: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ಎಲ್ಲ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಯೋಗ ತರಗತಿಗಳನ್ನು ನಡೆಸಬೇಕೆಂದು ಬೆಂಗಳೂರು ವಿವಿ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ. 

ಬುಧವಾರ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಗದ ಜೊತೆ ಜೊತೆಯಲ್ಲಿ ಘನ ತ್ಯಾಜ್ಯ ನಿರ್ವಹಣೆ, ಸಿವಿಕ್ ಸ್ಟಡಿ, ವಾಯುಮಾಲಿನ್ಯ ನಿಯಂತ್ರಣ ಮತ್ತು ಜಲ ಸಂರಕ್ಷಣೆ ವಿಚಾರಗಳನ್ನು ವಾರಕ್ಕೆ 1 ಗಂಟೆ ಕಡ್ಡಾಯವಾಗಿ ಬೋಧನೆ ಮಾಡಬೇಕು. ಬೋಧನೆ ಮಾಡದಿದ್ದರೆ, ಅಂತಹ ಕಾಲೇಜಿನ ಮಾನ್ಯತೆ ನವೀಕರಿಸುವುದಿಲ್ಲವೆಂದು ಎಚ್ಚರಿಕೆ ನೀಡಿದರು.

276 ಕಾಲೇಜುಗಳು ಬೆಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿದ್ದು, ಆರೋಗ್ಯದ ದೃಷ್ಟಿಯಿಂದ ಯೋಗ ತರಗತಿಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಪಠ್ಯಕ್ರಮ ಹೇಗಿರಬೇಕು ಎಂಬುವುದರ ಬಗ್ಗೆ ಶೀಘ್ರದಲ್ಲೇ ಕಾಲೇಜುಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಶೀಘ್ರ ವೌಲ್ಯಮಾಪನ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಜತೆಗೂಡಿ ಬೆಂಗಳೂರಿನಲ್ಲಿ 10 ಕಡೆ ವೌಲ್ಯಮಾಪನ ಕೇಂದ್ರ ಆರಂಭಿಸಲಾಗಿದೆ. ಇದಕ್ಕಾಗಿ ವಿವಿಯು ವಿಟಿಯುಗೆ 25 ಲಕ್ಷ ರೂ. ಪಾವತಿಸಬೇಕಿದೆ. ಈ ಹೊಸ ವ್ಯವಸ್ಥೆಯಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾದ 15 ದಿನಗಳಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಬಹುದಾಗಿದೆ ಎಂದು ವೇಣುಗೋಪಾಲ್ ಹೇಳಿದರು.

ಅದೇ ರೀತಿ, ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸರಬರಾಜಿನಲ್ಲಿ ವಿಳಂಬ, ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ತಂತ್ರಜ್ಞಾನ ಬಳಕೆ ಮಾಡಿಕೊಂಡು ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ರವಾನೆ ಮಾಡಲು ಚಿಂತಿಸಲಾಗಿದೆ ಎಂದರು.

ಆನ್‌ಲೈನ್‌ನಲ್ಲಿಯೇ ಅಂಕಪಟ್ಟಿ

ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ತಮ್ಮ ಅಂಕಪಟ್ಟಿ ಪಡೆಯುವ ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯ ತಂದಿದೆ. ಇದಕ್ಕಾಗಿ ನ್ಯಾಷನಲ್ ಅಕಾಡೆಮಿ ಡೆಪಾಸಿಟ್ರಿ(ಎನ್‌ಎಡಿ) ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. 2009ನೇ ಸಾಲಿನಿಂದ ಎಲ್ಲ ಅಂಕಪಟ್ಟಿಗಳನ್ನು ಈ ಎನ್‌ಎಡಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಮೊದಲು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಆನಂತರ ಆಧಾರ್ ಸಂಖ್ಯೆಯನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಮುದ್ರಣದ ಪ್ರತಿಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಬೆಂಗಳೂರು ವಿವಿ ಕುಲಪತಿ ಡಾ.ಕೆ. ಆರ್.ವೇಣುಗೋಪಾಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X