Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಕಲಚೇತನರಿಗೆ ಆರೋಗ್ಯ ಸೇವೆ: ಅಂಕಿ-ಅಂಶ...

ವಿಕಲಚೇತನರಿಗೆ ಆರೋಗ್ಯ ಸೇವೆ: ಅಂಕಿ-ಅಂಶ ಸಿದ್ಧಪಡಿಸಲು ಮೂರು ತಿಂಗಳು ಗಡುವು

ವಾರ್ತಾಭಾರತಿವಾರ್ತಾಭಾರತಿ3 July 2019 10:04 PM IST
share

ಬೆಂಗಳೂರು, ಜು. 3: ಬೆಂಗಳೂರು ನಗರ ಜಿಲ್ಲೆಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದಲ್ಲಿ ವಿಕಲಚೇತನರಿಗೆ ನೀಡಲಾಗಿರುವ ಸೌಲಭ್ಯಗಳು ಇನ್ನು ಮೂರು ತಿಂಗಳೊಳಗೆ ಸಮಗ್ರ ಅಂಕಿ-ಅಂಶ ಸಿದ್ಧಪಡಿಸಿ ಸಲ್ಲಿಸಬೇಕೆಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ಬಸವರಾಜು ಸೂಚಿಸಿದ್ದಾರೆ.

ಬುಧವಾರ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೈಗೊಂಡ ಪರಿಶೀಲನಾ ಭೇಟಿ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಬಾಲಾ ಸುರಕ್ಷಾ ಕಾರ್ಯಕ್ರಮದ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದರು, ಮುಖ್ಯವಾಗಿ 0-6, 6-12 ವಾರದ ಮಕ್ಕಳಿಗೆ ತಿಂಗಳಲ್ಲಿ ಎರಡು ಬಾರಿ ಆರೋಗ್ಯ ತಪಾಸಣೆ ನಡೆಸಬೇಕು. ಅದಕ್ಕೆ ಪೂರಕವಾದ ಔಷಧಗಳನ್ನು ನೀಡಬೇಕೆಂದು ತಿಳಿಸಿದರು. ಹಾಗೆಯೇ, ಎಲ್ಲ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ(ಸಿಡಿಪಿಒ)ಗಳು ಆಯಾ ತಾಲೂಕಿನಲ್ಲಿ ಪ್ರತಿ ತಿಂಗಳಿಗೊಮ್ಮೆ ವಿಕಲಚೇತನ ಮಕ್ಕಳ ಪೋಷಕರನ್ನು ಅರಿವು ಶಿಬಿರಗಳಿಗೆ ಕರೆತಂದು ಮಕ್ಕಳು ಆರೋಗ್ಯಕರವಾಗಿರಲು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಮತ್ತು ಶಾಲೆಗಳಿಗೆ ಮಕ್ಕಳ ಹಾಜರಾತಿ ಹಾಗೂ ಅಲ್ಲಿನ ಸೇವಾ ಗುಣಮಟ್ಟದ ಬಗ್ಗೆ ಪ್ರತಿ ತಿಂಗಳು ಪರಿಶೀಲಿಸಿ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಆಯಾ ಸರಕಾರಿ ಆಸ್ಪತ್ರೆಗಳಲ್ಲಿ ವಿಕಲಚೇತನ ಮಕ್ಕಳ ಪೋಷಕರನ್ನು ಸಭೆಗೆ ಕರೆದು ತಮ್ಮ ಮಕ್ಕಳ ಆರೈಕೆ ಬಗ್ಗೆ ಅವರಿಗೆ ಅರ್ಥವಾಗುವಂತೆ ಸರಳವಾಗಿ ವಿಡಿಯೋ ಪ್ರದರ್ಶನದ ಮೂಲಕ ಮಾಹಿತಿ ನೀಡಬೇಕು.

ಸರಕಾರಿ ನರ್ಸಿಂಗ್ ಕಾಲೇಜಿನ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ವಿಕಲಚೇತನರ ಶುಶ್ರೂಷೆ ಬಗ್ಗೆ ಹೆಚ್ಚಿನ ಅರಿವು ನೀಡಿ ಸಹಕರಿಸಬೇಕು. ಬೆಂಗಳೂರು ಮಹಾನಗರ ಪಾಲಿಕೆಯು ಮಕ್ಕಳಿಗೆ ಅನುಕೂಲವಾಗುವಂತೆ ಹೆಚ್ಚಿನ ಡೇಕೇರ್ ಕೇಂದ್ರಗಳನ್ನು ತೆರೆಯಬೇಕೆಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X