Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಬಳಿಕ ‘ಘೋಷಿತ ವಿದೇಶಿಯ’ರಿಗಾಗಿ...

ಅಸ್ಸಾಂ ಬಳಿಕ ‘ಘೋಷಿತ ವಿದೇಶಿಯ’ರಿಗಾಗಿ ಬಂಧನ ಕೇಂದ್ರ ಸ್ಥಾಪಿಸಲಿದೆ ಕರ್ನಾಟಕ

ವಾರ್ತಾಭಾರತಿವಾರ್ತಾಭಾರತಿ3 July 2019 10:09 PM IST
share
ಅಸ್ಸಾಂ ಬಳಿಕ ‘ಘೋಷಿತ ವಿದೇಶಿಯ’ರಿಗಾಗಿ ಬಂಧನ ಕೇಂದ್ರ ಸ್ಥಾಪಿಸಲಿದೆ ಕರ್ನಾಟಕ

ಹೊಸದಿಲ್ಲಿ, ಜು.3: ಮುಖ್ಯವಾಗಿ ಬಾಂಗ್ಲಾದೇಶಕ್ಕೆ ‘ಘೋಷಿತ ವಿದೇಶಿಯ’ರ ಗಡಿಪಾರು ಕುರಿತು ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಅಸ್ಸಾಮಿನ ಆರು ಬಂಧನ ಕೇಂದ್ರಗಳಲ್ಲಿ ಅವರ ವಿಸ್ತರಿತ ಬಂಧನ ಕುರಿತು ಅರ್ಜಿಯ ವಿಚಾರಣೆಯು ಈಗಾಗಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಇದೇ ವೇಳೆ ಕರ್ನಾಟಕವು ರಾಜ್ಯದಲ್ಲಿ ದಾಖಲೆಗಳಿಲ್ಲದೆ ನೆಲೆಸಿದ್ದಕ್ಕಾಗಿ ವಶಕ್ಕೆ ತೆಗೆದುಕೊಂಡಿರುವ ಅಕ್ರಮ ವಲಸಿಗರನ್ನು ಇರಿಸಲು ಬಂಧನ ಕೇಂದ್ರವೊಂದನ್ನು ಸ್ಥಾಪಿಸುತ್ತಿದೆ. ಇದರೊಂದಿಗೆ ಅಸ್ಸಾಂ ನಂತರ ಇಂತಹ ಕೇಂದ್ರವನ್ನು ಹೊಂದಿರುವ ಎರಡನೇ ರಾಜ್ಯವಾಗಲಿದೆ.

ಕರ್ನಾಟಕವು ಅಕ್ರಮ ವಲಸಿಗರನ್ನಿರಿಸಲು ಯಾವುದೇ ಬಂಧನ ಕೇಂದ್ರವನ್ನು ಸ್ಥಾಪಿಸುತ್ತಿದೆಯೇ ಎಂಬ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ (ಬಿಜೆಪಿ) ಅವರ ಪ್ರಶ್ನೆಗೆ ಮಂಗಳವಾರ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಸಹಾಯಕ ಗೃಹಸಚಿವ ನಿತ್ಯಾನಂದ ರಾಯ್ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ.

ತಾನು ಬಂಧನ ಕೇಂದ್ರ ಸ್ಥಾಪನೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವುದಾಗಿ ಕರ್ನಾಟಕ ಸರಕಾರವು ಕೇಂದ್ರಕ್ಕೆ ಮಾಹಿತಿಯನ್ನು ನೀಡಿದೆ. ಈ ಉದ್ದೇಶಕ್ಕಾಗಿ ಅಗತ್ಯ ಪೊಲೀಸ್ ಸಿಬ್ಬಂದಿ ಮತ್ತು ಇತರ ಮೂಲಸೌಕರ್ಯಗಳನ್ನು ಹಂಚಿಕೆ ಮಾಡಲಾಗಿದೆ ಮತ್ತು ಅಗತ್ಯ ಕಾಮಗಾರಿಯು ಪ್ರಗತಿಯಲ್ಲಿದೆ ಎಂದರು.

ಆದರೆ ಬಂಧನ ಕೇಂದ್ರ ಸ್ಥಾಪನೆಗಾಗಿ ಯಾವ ’ಇತರ ಮೂಲಸೌಕರ್ಯಗಳನ್ನು’ ಕರ್ನಾಟಕಕ್ಕೆ ಹಂಚಿಕೆ ಮಾಡಲಾಗಿದೆ ಎನ್ನುವುದನ್ನು ರಾಯ್ ತಿಳಿಸಲಿಲ್ಲ. ಬಂಧನ ಕೇಂದ್ರವು ಯಾವಾಗ ಸಿದ್ಧಗೊಳ್ಳಲಿದೆ ಮತ್ತು ಅದು ನಿಖರವಾಗಿ ಎಲ್ಲಿ ಸ್ಥಾಪನೆಯಾಗಲಿದೆ ಎಂಬ ಮೋಹನ್ ಪ್ರಶ್ನೆಗಳಿಗೂ ಅವರು ಉತ್ತರಿಸಲಿಲ್ಲ.

ಆದರೆ ಬೆಂಗಳೂರಿನ ನೆಲಮಂಗಲದಲ್ಲಿ ಬಂಧನ ಕೇಂದ್ರ ಸ್ಥಾಪನೆಯಾಗಲಿದೆ ಮತ್ತು 2019ರಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.

 ಮೋಹನ್ ಪ್ರಶ್ನೆಯು ದೇಶದಲ್ಲಿ ಮತ್ತು ಕರ್ನಾಟಕದಲ್ಲಿ ವಾಸವಿರುವ ಅಕ್ರಮ ವಲಸಿಗರ ಕುರಿತು ಏನಾದರೂ ಮಾಹಿತಿ ಲಭ್ಯವಿದೆಯೇ ಎನ್ನುವುದರ ಕುರಿತಾಗಿದ್ದರೆ, ರಾಯ್ ಅವರು ಕೇವಲ ‘ಅಕ್ರಮ ಬಾಂಗ್ಲಾದೇಶಿ ಪ್ರಜೆಗಳಿಗೆ ’ಸಂಬಂಧಿಸಿದ ಮಾಹಿತಿಯೊಂದಿಗೆ ಉತ್ತರಿಸಿದ್ದರು.

ದೇಶದಲ್ಲಿ ಅಕ್ರವಾಗಿ ನೆಲೆಸಿರುವ ವಲಸಿಗರ ಬಗ್ಗೆ ನಿಖರವಾದ ಮಾಹಿತಿ ಸರಕಾರದ ಬಳಿಯಿಲ್ಲ ಎಂದು ಒಪ್ಪಿಕೊಂಡ ಸಚಿವರು, ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ 143 ಪ್ರಕರಣಗಳು ದಾಖಲಾಗಿವೆ ಮತ್ತು 144 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ ಎಂದು ರಾಜ್ಯದ ಗೃಹಸಚಿವಾಲಯವು ನೀಡಿರುವ ಮಾಹಿತಿಯನ್ನು ಉಲ್ಲೇಖಿಸಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X