ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರೀಶ್ ರಾವತ್ ರಾಜೀನಾಮೆ

ಹೊಸದಿಲ್ಲಿ, ಜು.4: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮರು ದಿನವೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹರೀಶ್ ರಾವತ್ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು ರಾವತ್ ರಾಜೀನಾಮೆ ಪತ್ರ ಸಲ್ಲಿಸಿದರು.
ರಾವತ್ ತವರು ರಾಜ್ಯ ಉತ್ತರಾಖಂಡದಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದ ಎಲ್ಲ 5 ಲೋಕಸಭಾ ಕ್ಷೇತ್ರಗಳಲ್ಲೂ ಸೋತಿತ್ತು. ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ರಾವತ್ ಸ್ವತಃ ನೈನಿತಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ಅಜಯ್ ಭಟ್ ವಿರುದ್ದ 3 ಲಕ್ಷ ಮತಗಳ ಅಂತರದಿಂದ ಸೋತಿದ್ದರು.
Next Story