Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಬ್ಯಾಂಕ್ ಗಳನ್ನು ನಿರ್ಬಂಧಗಳಿಂದ...

ಸರಕಾರಿ ಬ್ಯಾಂಕ್ ಗಳನ್ನು ನಿರ್ಬಂಧಗಳಿಂದ ಮುಕ್ತಗೊಳಿಸಬೇಕು: ರಘುರಾಮ ರಾಜನ್

ವಾರ್ತಾಭಾರತಿವಾರ್ತಾಭಾರತಿ4 July 2019 9:13 PM IST
share
ಸರಕಾರಿ ಬ್ಯಾಂಕ್ ಗಳನ್ನು ನಿರ್ಬಂಧಗಳಿಂದ ಮುಕ್ತಗೊಳಿಸಬೇಕು: ರಘುರಾಮ ರಾಜನ್

ಹೊಸದಿಲ್ಲಿ,ಜು.4: ಸರಕಾರಿ ಸ್ವಾಮ್ಯದ ಬ್ಯಾಂಕುಗಳ ಮೇಲೆ ಹೇರಲಾಗಿರುವ ಕೆಲವು ನಿರ್ಬಂಧಗಳನ್ನು ಹಿಂದೆಗೆದುಕೊಂಡರೆ ಅವು ಉತ್ತಮವಾಗಿ ಕಾರ್ಯ ನಿರ್ವಹಿಸಬಹುದು,ಆದರೆ ಇಂತಹ ಸ್ವಾತಂತ್ರ್ಯವು ಸರಕಾರದಿಂದ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮಾಜಿ ಆರ್‌ಬಿಐ ಗವರ್ನರ್ ರಘುರಾಮ ರಾಜನ್ ಅವರು ಹೇಳಿದ್ದಾರೆ.

ಸರಕಾರಿ ಬ್ಯಾಂಕುಗಳ ಖಾಸಗೀಕರಣ ದಿವ್ಯೌಷಧ ಎನ್ನುವುದಕ್ಕೆ ಯಾವುದೇ ಗ್ಯಾರಂಟಿಯಿಲ್ಲ ಎಂದಿರುವ ಅವರು,ಖಾಸಗೀಕರಣ ಕುರಿತು ಹೆಚ್ಚಿನ ಚರ್ಚೆಯು ಸೈದ್ಧಾಂತಿಕ ನಿಲುವುಗಳನ್ನು ಆಧರಿಸಿರುವ ಅನಿಸಿಕೆಗಳಾಗಿ ರುವಂತಿದೆ ಎಂದಿದ್ದಾರೆ.

ತನ್ನೊಂದಿಗೆ ಸಹ ಆರ್ಥಿಕ ತಜ್ಞರಾದ ಅಭಿಜಿತ ಬ್ಯಾನರ್ಜಿ,ಗೀತಾ ಗೋಪಿನಾಥ ಮತ್ತು ಮಿಹಿರ ಎಸ್.ಶರ್ಮಾ ಅವರ ಸಂಪಾದಕತ್ವದ ‘‘ಆರ್ಥಿಕತೆಯ ಈಗಿನ ಅಗತ್ಯ’’ ಶೀರ್ಷಿಕೆಯ ಪುಸ್ತಕದಲ್ಲಿ ರಾಜನ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಕೆಲವು ಖಾಸಗಿ ಬ್ಯಾಂಕುಗಳ ಆಡಳಿತ ಕಳಪೆಯಾಗಿದೆ ಎಂದೂ ಹೇಳಿರುವ ಅವರು,ಪ್ರಾಯೋಗಿಕ ನೆಲೆಯಲ್ಲಿ ಒಂದೆರಡು ಮಧ್ಯಮ ಗಾತ್ರದ ಸರಕಾರಿ ಬ್ಯಾಂಕುಗಳ ಖಾಸಗೀಕರಣ ಮತ್ತು ಇತರ ಒಂದೆರಡು ಬ್ಯಾಂಕುಗಳಲ್ಲಿ ಸರಕಾರದ ಪಾಲು ಬಂಡವಾಳವನ್ನು ಶೇ.50ಕ್ಕೆ ತಗ್ಗಿಸಲು ಮತ್ತು ಇತರ ಬ್ಯಾಂಕುಗಳ ಆಡಳಿತ ಸುಧಾರಣೆಗೆ ಶ್ರಮಿಸಲು ಅವಕಾಶವಿದೆ ಎಂದಿದ್ದಾರೆ. ಇದರಿಂದಾಗಿ ಎಂದಿಗೂ ಮುಗಿಯದ ಚರ್ಚೆಯನ್ನು ಮುಂದುವರಿಸುವ ಬದಲು ವಾಸ್ತವದಲ್ಲಿ ನಾವು ಮುನ್ನಡೆಯಲು ಕೆಲವು ರುಜುವಾತುಗಳನ್ನು ಪಡೆಯಬಹುದು. ಖಾಸಗೀಕರಣ ಪ್ರಕ್ರಿಯೆ ನಡೆಯಲು ಕೆಲವು ರಾಜಕೀಯ ರಾಜಿಗಳು ಅಗತ್ಯವಾಗುತ್ತವೆ,ಆದರೆ ಎಲ್ಲಿಯವರೆಗೆ ನೂತನ ಖಾಸಗೀಕರಣಗೊಂಡ ಬ್ಯಾಂಕುಗಳು ರಾಜಕೀಯ ರಾಜಿಗಳ ಪರಿಣಾಮವಾಗಿ ತಮ್ಮ ಕಾರ್ಯಾಚರಣೆ ಸ್ವಾತಂತ್ರವನ್ನು ಕಳೆದುಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ಇದು ವೌಲಿಕ ಪ್ರಯೋಗವಾಗುತ್ತದೆ ಎಂದು ರಾಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೃಷಿಗೆ ಗಂಭೀರ ಗಮನದ ಅಗತ್ಯವಿದೆ ಎಂದು ಹೇಳಿರುವ ಆವರು,ಆದರೆ ಇದಕ್ಕೆ ಸಾಲಮನ್ನಾಗಳು ಮಾರ್ಗವಾಗಬಾರದು,ಅಂತಹ ಕ್ರಮಗಳು ಸಾಲ ಸಂಸ್ಕೃತಿಯನ್ನು ಹಾಳುಗೆಡವುತ್ತವೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X