Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 2020ರ ಅದಮಾರು ಪರ್ಯಾಯಕ್ಕೆ ಕಟ್ಟಿಗೆ...

2020ರ ಅದಮಾರು ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ4 July 2019 9:48 PM IST
share
2020ರ ಅದಮಾರು ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ

ಉಡುಪಿ, ಜು.4: ಮುಂದಿನ ವರ್ಷದ ಜನವರಿ 18ರಂದು ನಡೆಯುವ ಅದಮಾರು ಮಠ ಪರ್ಯಾಯೋತ್ಸವದ ಪೂರ್ವತಯಾರಿಯಲ್ಲಿ ಮೂರನೇ ಮುಹೂರ್ತವಾದ ಕಟ್ಟಿಗೆ ಮುಹೂರ್ತ ಇಂದು ಶ್ರೀಮಠದಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ನಡೆಯಿತು.

ಪರ್ಯಾಯ ನಡೆಯುವ ಒಂದು ವರ್ಷ ಮೊದಲೇ ಆರಂಭಗೊಳ್ಳುವ ಪೂರ್ವಭಾವಿ ಸಿದ್ಧತೆಗಳಲ್ಲಿ ಕಟ್ಟಿಗೆ ಮುಹೂರ್ತ ಮೂರನೇಯದು. ಇದಕ್ಕೆ ಮೊದಲು ಬಾಳೆ ಮುಹೂರ್ತ ಹಾಗೂ ಅಕ್ಕಿ ಮುಹೂರ್ತಗಳು ನಡೆದಿದ್ದು, ಪರ್ಯಾಯಕ್ಕೆ ಒಂದು ತಿಂಗಳು ಮೊದಲು ಮುಂದಿನ ಡಿಸೆಂಬರ್ ತಿಂಗಳಲ್ಲಿ ಕೊನೆಯದಾದ ಭತ್ತ ಮುಹೂರ್ತ ನಡೆಯಲಿದೆ.

ಪರ್ಯಾಯದ ಎರಡು ವರ್ಷಗಳ ಅವಧಿಯಲ್ಲಿ ನಡೆಯುವ ಅನ್ನ ದಾಸೋಹಕ್ಕಾಗಿ ಬೇಕಾದ ಕಟ್ಟಿಗೆಗಳನ್ನು ಸಂಗ್ರಹಿಸುವುದಕ್ಕಾಗಿ ಕಟ್ಟಿಗೆ ಮುಹೂರ್ತ ನಡೆಯುವ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ಸಂಗ್ರಹಿಸಿದ ಕಟ್ಟಿಗೆಗಳನ್ನು ಪರ್ಯಾಯಕ್ಕೆ ಮೊದಲು ಆಕರ್ಷಕ ರಥದ ರೀತಿಯಲ್ಲಿ ಸಜ್ಜುಗೊಳಿಸಲಾಗುತ್ತದೆ. ಈ ಕಟ್ಟಿಗೆ ರಥ ಉಡುಪಿಯ ಆಕರ್ಷಣೆ ಗಳಲ್ಲಿ ಒಂದಾಗಿರುತ್ತದೆ.

ಸಂಪ್ರದಾಯದಂತೆ ಗುರುವಾರ ಮುಂಜಾನೆ ಅದಮಾರು ಮಠದ ದಿವಾನ ರಾದ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ ಹಾಗೂ ಶಿಬರೂರು ವಾಸುದೇವ ಆಚಾರ್ಯರ ಪೌರೋಹಿತ್ಯದಲ್ಲಿ ಅದಮಾರು ಮಠದ ದೇವರಿಗೆ ಅನಂತರ ಮೆರವಣಿಗೆಯಲ್ಲಿ ತೆರಳಿ ಅನಂತೇಶ್ವರ, ಚಂದ್ರಮೌಳೀಶ್ವರ, ಶ್ರೀಕೃಷ್ಣ- ಮುಖ್ಯಪ್ರಾಣ ೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಅಲ್ಲಿಂದ ಶ್ರೀಮಠಕ್ಕೆ ಮರಳಿ ತಲೆಹೊರೆಯಲ್ಲಿ ಕಟ್ಟಿಗೆಯನ್ನು ಹೊತ್ತು ನಿಂತಿದ್ದ ಏಳು ಮುಂಡಾಲರೊಂದಿಗೆ ಮತ್ತೆ ಮೆರವಣಿಗೆಯ ಮೂಲಕ ಕೃಷ್ಣಮಠದ ಮಧ್ವಸರೋವರ ಈಶಾನ್ಯ ಭಾಗದಲ್ಲಿ ಎತ್ತರದ ಜಾಗದಲ್ಲಿರುವ ಕಟ್ಟಿಗೆ ಸಂಗ್ರಹಿಸುವ ಸ್ಥಳಕ್ಕೆ ಬರಲಾಯಿತು. ಅಲ್ಲಿ ಸಾಂಪ್ರದಾಯಿಕ ವಿಧಿವಿಧಾನ ಗಳೊಂದಿಗೆ ಕಟ್ಟಿಗೆ ಮುಹೂರ್ತ ನಡೆಸಲಾಯಿತು. ಕಟ್ಟಿಗೆ ರಥದ ನಿರ್ಮಾಣಕ್ಕೆ ಶ್ರೀಕೃಷ್ಣ ಮಠದ ಮೇಸ್ತ್ರಿ ಸುಂದರ ಶೇರಿಗಾರ್ ಚಾಲನೆ ನೀಡಿದರು.

ಎರಡು ವರ್ಷಗಳ ಪರ್ಯಾಯಕ್ಕೆ ಬೇಕಾದ ಕಟ್ಟಿಗೆಯನ್ನು ಸಂಗ್ರಹಿಸಿ ಒಂದು ರಥದ ಮಾದರಿಯಲ್ಲಿ ಆಕರ್ಷಕವಾಗಿ ಜೋಡಿಸಿಡಲಾಗುತ್ತದೆ.ಈ ಕಟ್ಟಿಗೆ ರಥದ ಮೇಲ್ಭಾಗದಲ್ಲಿ ಶಿಖರ ಸ್ಥಾಪನೆ ಭತ್ತ ಮುಹೂರ್ತ ದಿನದಂದು ನಡೆಯಲಿದ್ದು, ಅಂದು ಕಟ್ಟಿಗೆ ರಥ ನಿರ್ಮಾಣ ಪೂರ್ಣಗೊಳ್ಳುತ್ತದೆ.
 ಇಂದಿನ ಸಮಾರಂಭದಲ್ಲಿ ಸೋಮಶೇಖರ ಭಟ್, ಎಂ.ಬಿ.ಪುರಾಣಿಕ್, ಜಿಪಂ ಸದಸ್ಯೆ ಶಿಲ್ಪ ಜಿ.ಸುವರ್ಣ, ನಗರಸಭಾ ಪೌರಾಯುಕ್ತ ಆನಂದ ಕಲ್ಲೊಳಿಕರ್, ಸದಸ್ಯರಾದ ಮಾನಸ ಪೈ, ರಶ್ಮಿ ಚಿತ್ತರಂಜನ್ ಭಟ್, ಪಾಡಿಗಾರು ಶ್ರೀನಿವಾಸ ತಂತ್ರಿ,, ರಘುರಾಮ ಆಚಾರ್ಯ, ಸಗ್ರಿ ರಾಘವೇಂದ್ರ ಉಪಾಧ್ಯ, ವೈ.ಎನ್.ರಾಮಚಂದ್ರ ರಾವ್, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣ, ನರಸಿಂಹ ನಾಯಕ್, ಗೋವಿಂದರಾಜ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X