Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಖಿಲ ಭಾರತ ಸಬ್‌ಜೂನಿಯರ್ ಬ್ಯಾಡ್ಮಿಂಟನ್...

ಅಖಿಲ ಭಾರತ ಸಬ್‌ಜೂನಿಯರ್ ಬ್ಯಾಡ್ಮಿಂಟನ್ : ಅಗ್ರಸೀಡ್ ಆಟಗಾರರಿಬ್ಬರಿಗೆ ಸುಲಭದ ಜಯ

ವಾರ್ತಾಭಾರತಿವಾರ್ತಾಭಾರತಿ4 July 2019 9:56 PM IST
share

ಉಡುಪಿ, ಜು.4: ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಆಶ್ರಯದಲ್ಲಿ ಉಡುಪಿ ಮತ್ತು ಮಣಿಪಾಲಗಳಲ್ಲಿ ನಡೆದಿರುವ 13 ವರ್ಷದೊಳ ಗಿನವರ ಅಖಿಲ ಭಾರತ ಸಬ್‌ಜೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಿಯ ಬಾಲಕ ಮತ್ತು ಬಾಲಕಿಯರ ವಿಭಾಗ ಗಳೆರಡರಲ್ಲೂ ಅಗ್ರಸೀಡ್ ಆಟಗಾರರು ಸುಲಭದ ಜಯದೊಂದಿಗೆ ಮುನ್ನಡೆ ಸಾಧಿಸಿದ್ದಾರೆ.

ಬಾಲಕರ ವಿಭಾಗದ ಅಗ್ರಸೀಡ್ ಉತ್ತರಖಂಡದ ಅಂಶ್ ನೇಗಿ ಅವರು ಹರ್ಯಾಣದ ಮೊಹಿತ್ ದುಹಾನ್‌ರನ್ನು 21-12, 21-7ರ ನೇರ ಆಟಗಳಿಂದ ಹಿಮ್ಮೆಟ್ಟಿಸಿದರೆ, ಬಾಲಕಿಯರ ವಿಭಾಗದ ಅಗ್ರಸೀಡ್ ಆಂಧ್ರಪ್ರದೇಶದ ನವ್ಯ ಖಂಡೇರಿ ಅವರು ಮದ್ಯಪ್ರದೇಶದ ಅನೂಷ್ಕ ಶಹಾಪೂರ್ಕರ್‌ರನ್ನು 21-3, 21-7ರ ಅಂತರದಿಂದ ಏಕಪಕ್ಷೀಯವಾಗಿ ಸೋಲಿಸಿದರು.

ಬಾಲಕಿಯರ ವಿಭಾಗದಲ್ಲಿ ಎರಡೇ ಸೀಡ್ ಹರ್ಯಾಣದ ಉನ್ನತಿ ಹೂಡಾ ಅವರು ಆಂದ್ರದ ದೀಪಿಕಾ ದೇವನಬೊಯಿನಾರನ್ನು 21-8, 21-7ರಿಂದ, ನಾಲ್ಕನೇ ಸೀಡ್ ಉತ್ತರಪ್ರದೇಶದ ಅನುಷ್ಕಾ ಜುಯೆಲ್, ತಮಿಳುನಾಡಿನ ಮೋನಿಕಾ ಎಂ.ರನ್ನು 21-15,21-16, ಐದನೇ ಸೀಡ್ ಗುಜರಾತ್‌ನ ಆಯಿಷಾ ಗಾಂಧಿ ಅವರು ತಮಿಳುನಾಡಿನ ಆದರ್ಶಿನಿ ಶ್ರೀ ಅವರನ್ನು 21-13, 21-9ರಿಂದ, ಆರನೇ ಸೀಡ್ ಉತ್ತರ ಪ್ರದೇಶದ ಮನ್ಸಾ ರಾವತ್ ಅವರು ತಮಿಳುನಾಡಿನ ಸುಪ್ರಿಯಾ ವೈ ಅವರನ್ನು 21-15, 21-11ರಿಂದ ಹಿಮ್ಮೆಟ್ಟಿಸಿದರು.

ಟೂರ್ನಿಯ ಮೊದಲೆರಡು ದಿನ ಅರ್ಹತಾ ಸುತ್ತಿನ ಪಂದ್ಯಗಳು ನಡೆದಿದ್ದು, ಇಂದಿನಿಂದ ಪ್ರಧಾನ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಇಂದಿನ ಪಂದ್ಯಗಳಲ್ಲಿ ಆತಿಥೇಯ ಕರ್ನಾಟಕದ ಅನುಷ್ಕಾ ಬಾರೈ, ವೌನಿತಾ ಎ.ಎಸ್., ರುಜುಲಾ ರಾಮು ಜಯಗಳಿಸಿದ್ದು, ಮುಂದಿನ ಸುತ್ತಿನಲ್ಲಿ ಆಡುವ ಅರ್ಹತೆ ಪಡೆದಿದ್ದಾರೆ.

ಬಾಲಕರ ವಿಭಾಗದಲ್ಲಿ ಕರ್ನಾಟಕದ ಅವಿ ಬಾಸಕ್, ಓಂ ಮಕಾ ಜಯವನ್ನು ದಾಖಲಿಸಿದ್ದಾರೆ. ಅವಿ ಬಾಸಕ್ ಅವರು ಉತ್ತರ ಪ್ರದೇಶದ ಕೌಸ್ತುಭ ತ್ಯಾಗಿ ಅವರನ್ನು ಮೂರು ಗೇಮ್‌ಗಳ ನಿಕಟ ಹೋರಾಟದಲ್ಲಿ 21-19, 15-21, 21-19ರಿಂದ ರೋಚಕವಾಗಿ ಹಿಮ್ಮೆಟ್ಟಿಸಿದರು. ಅದೇ ರೀತಿ ಓಂ ಮಕಾ ಅವರು ಕರ್ನಾಟಕದವರೇ ಆದ ಪ್ರಶಾಂತ ಕೋಟ್ಯಾನ್‌ರನ್ನು ಮೂರು ನಿಕಟ ಗೇಮ್‌ನಲ್ಲಿ 11-21,21-12,21-17ರಿಂದ ಸೋಲಿಸಿದರು.

ಉಳಿದಂತೆ ಏಳನೇ ಸೀಡ್ ಆಂಧ್ರಪ್ರದೇಶದ ಭಾರ್ಗವ ರಾಮ್ ಅವರು ಉತ್ತರಖಂಡದ ಪ್ರಭಾಸ್ ಕುಮಾರ್ ಕೇಶ್ವಾರನ್ನು ಹಿಮ್ಮೆಟ್ಟಿಸಿದರು. 16ನೇ ಸೀಡ್ ಮದ್ಯಪ್ರದೇಶದ ಆದಿತ್ಯ ಜೋಶಿ ಅವರು ಮಹಾರಾಷ್ಟ್ರದ ಸೋಹಂ ಗೋಖಲೆ ಅವರನ್ನು 21-9,21-16ರ ನೇರ ಆಟದಲ್ಲಿ ಮಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X