Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ ಉರ್ದು,...

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ ಉರ್ದು, ಹಿಂದಿ, ತಮಿಳು, ಸಂಸ್ಕೃತ ವಚನಗಳು…

ವಾರ್ತಾಭಾರತಿವಾರ್ತಾಭಾರತಿ5 July 2019 9:56 PM IST
share
ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ ಉರ್ದು, ಹಿಂದಿ, ತಮಿಳು, ಸಂಸ್ಕೃತ ವಚನಗಳು…

ಹೊಸದಿಲ್ಲಿ,ಜು.5: ದೇಶದ ಮೊದಲ ಪೂರ್ಣಕಾಲಿಕ ವಿತ್ತಸಚಿವೆ ಎಂಬ ಹೆಗ್ಗಳಿಕೆಯನ್ನು ಮುಡಿಗೇರಿಸಿಕೊಂಡಿರುವ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ ಬಜೆಟ್ ಭಾಷಣವು ಉರ್ದು,ಹಿಂದಿ, ತಮಿಳು, ಸಂಸ್ಕೃತ ಉಕ್ತಿಗಳಿಂದ ಕೂಡಿದ್ದು,ಅತ್ಯಂತ ಸುದೀರ್ಘ ಬಜೆಟ್ ಭಾಷಣಗಳಲ್ಲೊಂದಾಗಿತ್ತು.

  ಎರಡು ಗಂಟೆ ಹದಿನೇಳು ನಿಮಿಷಗಳ ತನ್ನ ಮ್ಯಾರಥಾನ್ ಭಾಷಣದುದ್ದಕ್ಕೂ ಒಂದು ಗುಟುಕು ನೀರನ್ನು ಕುಡಿಯಲೂ ಅವರು ವಿರಮಿಸಲಿಲ್ಲ.

ಬಜೆಟ್ ಪ್ರಸ್ತಾವಗಳನ್ನು ಆಡಳಿತಾರೂಢ ಪಕ್ಷದ ಸದಸ್ಯರು ಆಗಾಗ್ಗೆ ಮೇಜುಗಳನ್ನು ಕುಟ್ಟಿ ಸ್ವಾಗಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೂ ಈ ವಿಷಯದಲ್ಲಿ ಹಿಂದೆ ಬಿದ್ದಿರಲಿಲ್ಲ.

ಸೀತಾರಾಮನ್ ಅವರ ಬಜೆಟ್ ಭಾಷಣವನ್ನು ಸ್ಪೀಕರ್ ಓಂ ಬಿರ್ಲಾ ಅವರು ಪ್ರಶಂಸಿಸಿದರು.

ಸೀತಾರಾಮನ್ ಬೆಳಿಗ್ಗೆ 10:55ಕ್ಕೆ ಕೆಲವೇ ಸೆಕೆಂಡ್‌ಗಳ ಮುನ್ನ ಸದನಕ್ಕೆ ಆಗಮಿಸಿ ಆಸೀನರಾಗುತ್ತಿದ್ದಂತೆ ಹಲವಾರು ಮಹಿಳಾ ಸದಸ್ಯರು ಅವರಿಗೆ ಶುಭಾಶಯಗಳನ್ನು ಕೋರಿದರು.

ಭಾಷಣ ಮಾಡಲು ಆತ್ಮವಿಶ್ವಾಸದಿಂದಲೇ ಎದ್ದು ನಿಂತ ಸೀತಾರಾಮನ್ ಗ್ಯಾಲರಿಯಲ್ಲಿ ಕುಳಿತಿದ್ದ ತನ್ನ ಹೆತ್ತವರಾದ ಸಾವಿತ್ರಿ ಮತ್ತು ನಾರಾಯಣನ್ ಸೀತಾರಾಮನ್ ಹಾಗೂ ಪತ್ರಕರ್ತೆ ಪುತ್ರಿ ವಾಂಗ್ಮಯಿ ಪರ್ಕಲ ಅವರತ್ತ ಕೈಬೀಸಿ ಶುಭಾಶಯಗಳನ್ನು ವಿನಿಮಯಿಸಿಕೊಂಡರು.

ತಮಿಳುನಾಡು ಮೂಲದವರಾದ ಸೀತಾರಾಮನ್ ಗ್ರಾಮೀಣ ಕುಶಲಕರ್ಮಿಗಳ ಕುರಿತು ಕೆಲವು ಪ್ರಕಟಣೆಗಳನ್ನು ಹಿಂದಿಯಲ್ಲಿ ಮಾಡಿದ್ದು ಸದಸ್ಯರ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು.

ಹಿಂದಿ,ಉರ್ದು,ಸಂಸ್ಕೃತಗಳ ಜೊತೆಗೆ ತಮಿಳು ವಚನಗಳನ್ನೂ ಬಳಸಿದ್ದ ಸೀತಾರಾಮನ್ ಅವರು ‘‘ಯಕೀನ್ ಹೋ ತೊ ಕೊಯಿ ರಾಸ್ತಾ ನಿಕಲ್ತಾ ಹೈ,ಹವಾ ಕೀ ಓಟ್ ಭೀ ಲೇ ಕರ್ ಚಿರಾಗ್ ಜಲ್ತಾ ಹೈ’ ಎಂಬ ಕವಿ ಮಂಝೂರ್ ಹಾಷ್ಮಿ ಅವರ ಉರ್ದು ಕವನದ ಸಾಲುಗಳೊಂದಿಗೆ ತನ್ನ ಭಾಷಣವನ್ನು ಆರಂಭಿಸಿದ್ದರು.

ಆಡಳಿತಾರೂಢ ಪಕ್ಷದ ಆಸನಗಳು ಭರ್ತಿಯಾಗಿದ್ದರೆ ಪ್ರತಿಪಕ್ಷದಲ್ಲಿನ ಹಲವಾರು ಆಸನಗಳು ಖಾಲಿಯಾಗಿದ್ದವು. ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ ಅಖಿಲೇಶ್ ಗೈರುಹಾಜರಿ ಎಲ್ಲರ ಗಮನವನ್ನು ಸೆಳೆದಿತ್ತು. ರಾಜ್ಯಸಭಾ ಸದಸ್ಯರಿಗಾಗಿ ಮೀಸಲಾಗಿದ್ದ ಗ್ಯಾಲರಿಯು ಸಂಪೂರ್ಣವಾಗಿ ಭರ್ತಿಯಾಗಿತ್ತು. ಅತಿಥಿಗಳ ಗ್ಯಾಲರಿಯಲ್ಲಿ ಕೆಲವು ವಿದೇಶಿ ಗಣ್ಯರೂ ಇದ್ದರು.

ಸೀತಾರಾಮನ್ ಅವರು ಬಜೆಟ್ ಭಾಷಣವನ್ನು ಆರಂಭಿಸಿದ ಒಂದೆರಡು ನಿಮಿಷಗಳ ಬಳಿಕ ಸದನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆಗಾಗ್ಗೆ ತನ್ನ ಮೊಬೈಲ್ ಫೋನ್‌ನ್ನು ಪರಿಶೀಲಿಸುತ್ತಿದ್ದರೆ,ಅವರ ಪಕ್ಕದಲ್ಲಿಯೇ ಕುಳಿತಿದ್ದ ತಾಯಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾಷಣ ಮುಕ್ತಾಯಕ್ಕೆ ಕೆಲವು ನಿಮಿಷಗಳ ಮುನ್ನ ಸದನದಿಂದ ನಿರ್ಗಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X