Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಶಾಸಕ ವಿಜಯವರ್ಗೀಯರ ವಿವಾದದ...

ಬಿಜೆಪಿ ಶಾಸಕ ವಿಜಯವರ್ಗೀಯರ ವಿವಾದದ ಕೇಂದ್ರವಾಗಿದ್ದ ಮನೆ ನೆಲಸಮ

ವಾರ್ತಾಭಾರತಿವಾರ್ತಾಭಾರತಿ5 July 2019 11:29 PM IST
share
ಬಿಜೆಪಿ ಶಾಸಕ ವಿಜಯವರ್ಗೀಯರ ವಿವಾದದ ಕೇಂದ್ರವಾಗಿದ್ದ ಮನೆ ನೆಲಸಮ

ಇಂದೋರ್, ಜು. 5: ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಸರಕಾರಿ ಅಧಿಕಾರಿಗೆ ಬ್ಯಾಟ್‌ನಿಂದ ಥಳಿಸಿದ ಬಳಿಕ ಸುದ್ದಿಯಾಗಿದ್ದ ನಗರದ ಗಾಂಜಿ ಕಂಪೌಂಡ್ ಪ್ರದೇಶದಲ್ಲಿರುವ ಶಿಥಿಲಗೊಂಡ ಮನೆಯನ್ನು ನಗರಾಡಳಿತ ಶುಕ್ರವಾರ ಧ್ವಂಸಗೊಳಿಸಿದೆ.

ಜೂನ್ 26ರಂದು ಒತ್ತುವರಿ ವಿರೋಧಿ ತಂಡ ಈ ಮನೆ ಧ್ವಂಸಗೊಳಿಸಲು ಮುಂದಾದಾಗ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಹಾಗೂ ಅವರ ಬೆಂಬಲಿಗರು ಸರಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿವಾದ ಭುಗಿಲೆದ್ದಿತ್ತು.

  ಕೆಡವುದಕ್ಕೆ ನಿಷೇಧ ಕೋರಿ ಸಲ್ಲಿಸಲಾದ ಮನವಿಯನ್ನು ಮಧ್ಯಪ್ರದೇಶ ಉಚ್ಚ ನ್ಯಾಯಾಲಯ ತಿರಸ್ಕರಿಸಿದ ಬಳಿಕ ನಗರಾಡಳಿತ ಮೂರು ದಿನಗಳ ಕಾರ್ಯಾಚರಣೆ ನಡೆಸಿ ಈ ಎರಡು ಮಹಡಿಯ ಕಟ್ಟಡವನ್ನು ಧ್ವಂಸಗೊಳಿಸಿದೆ.

  ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂದೋರ್ ನಗರಾಡಳಿತ ಆಯುಕ್ತ ಆಶಿಸ್ ಸಿಂಗ್, ಗಾಂಜಿ ಕಂಪೌಂಡ್‌ನಲ್ಲಿರುವ ಶಿಥಿಲಗೊಂಡಿದ್ದ ಈ ಮನೆಯನ್ನು ಅರ್ತ್‌ಮೂವರ್‌ನ ಸಹಾಯದಿಂದ ನೆಲಸಮಗೊಳಿಸಲಾಗಿದೆ. ಈ ಕಟ್ಟಡ ಹಳೆಯದ್ದು ಹಾಗೂ ಶಿಥಿಲಗೊಂಡಿತ್ತು ಎಂದಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾರ್ಯಾಚರಣೆ ಸಂದರ್ಭ ಸುಮಾರು 200 ನಾಗರಿಕ ಸಿಬ್ಬಂದಿ ಇದ್ದರು. ಹನಿ ಮಳೆ ಬೀಳುತ್ತಿರುವ ನಡುವೆ ಕಟ್ಟಡವನ್ನು ಧ್ವಂಸಗೊಳಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

  ಈ ಮನೆ ದಶಕಗಳಷ್ಟು ಹಳೆಯದಾದುದರಿಂದ ಕೆಡವುವ ನಿರ್ಧಾರ ತೆಗೆದುಕೊಳ್ಳಲಾಯಿತು. ಕುಸಿಯುವ ಭೀತಿಯನ್ನು ಈ ಮನೆ ಪರಿಸರದ ನಿವಾಸಿಗಳಲ್ಲಿ ಮೂಡಿಸಿತ್ತು ಎಂದು ಸಿಂಗ್ ಹೇಳಿದ್ದಾರೆ.

ಉಚ್ಚ ನ್ಯಾಯಾಲಯದ ಇಂದೋರ್ ಪೀಠದ ನಿರ್ದೇಶನದಂತೆ ಸಂತ್ರಸ್ತ ಕುಟುಂಬಗಳಿಗೆ ಭುರಿ ತೆಕ್ರಿ ಪ್ರದೇಶದಲ್ಲಿರುವ ಬಹುಮಹಡಿಯ ಕಟ್ಟಡದಲ್ಲಿ ಫ್ಲಾಟ್ ಒದಗಿಸಲಾಗುವುದು. ಅಲ್ಲಿ ಅವರು ಮೂರು ತಿಂಗಳುಗಳ ಕಾಲ ವಾಸಿಸಬಹುದು ಎಂದು ಅವರು ತಿಳಿಸಿದ್ದಾರೆ.

ಮನೆ ಧ್ವಂಸಗೊಳಿಸುವ ನಗರಾಡಳಿತದ ನಿರ್ಧಾರ ವಿರೋಧಿಸಿ ಅದರಲ್ಲಿ ವಾಸಿಸುತ್ತಿದ್ದ ಶ್ರೀವಂಶ ಅವರ ಕುಟುಂಬದ ಸದಸ್ಯರು ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ, ಉಚ್ಚ ನ್ಯಾಯಾಲಯ ಅವರ ಮನವಿ ತಿರಸ್ಕರಿಸಿತ್ತು.

ಕುಟುಂಬಕ್ಕೆ ಎರಡು ದಿನಗಳ ಕಾಲ ಪರ್ಯಾಯ ವಸತಿ ನೀಡುವಂತೆ ಉಚ್ಚ ನ್ಯಾಯಾಲಯ ನಗರಾಡಳಿತಕ್ಕೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X