ಲಾರಿಗೆ ಬೈಕ್ ಢಿಕ್ಕಿ: ಬ್ಯಾಂಕ್ ಮ್ಯಾನೇಜರ್ ಮೃತ್ಯು
ಬೆಂಗಳೂರು, ಜು.6: ಬೈಕ್ನಲ್ಲಿ ಸಾಗುತ್ತಿದ್ದ ಬ್ಯಾಂಕ್ ಮಾನ್ಯೇಜರ್, ರಸ್ತೆಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ ನೈಸ್ ರಸ್ತೆಯಲ್ಲಿ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದ ಆಕ್ಸಿಸ್ ಬ್ಯಾಂಕ್ನಲ್ಲಿ ಸಹಾಯಕ ಮ್ಯಾನೇಜರ್ ಆಗಿದ್ದ ಹುಬ್ಬಳ್ಳಿ ಮೂಲದ ನಾಯಕ್ ಕುಲಕರ್ಣಿ (45) ಮೃತಪಟ್ಟವರು ಎಂದು ತಿಳಿದುಬಂದಿದೆ.
ಬ್ಯಾಂಕ್ ಕೆಲಸ ಮುಗಿಸಿಕೊಂಡು ಸಂಜೆ ಗೊಟ್ಟಿಗೆರೆಯ ಮನೆಗೆ ಬಂದಿದ್ದ ಕುಲಕರ್ಣಿ ಅವರು, ಶುಕ್ರವಾರ ರಾತ್ರಿ 10:50ರ ವೇಳೆ ತುರ್ತು ಕೆಲಸದ ಮೇಲೆ ಮತ್ತೆ ಬ್ಯಾಂಕ್ಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಮಾರ್ಗಮಧ್ಯೆ ನೈಸ್ ರಸ್ತೆ ಬಳಿ ನಿಲ್ಲಿಸಿದ್ದ ಲಾರಿಗೆ ಕತ್ತಲಲ್ಲಿ ಸರಿಯಾಗಿ ಕಾಣದೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಕುಲಕರ್ಣಿ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣಾ ಪೊಲೀಸರು, ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.