ಅಕ್ರಮ ಗಾಂಜಾ ಮಾರಾಟ: ಇಬ್ಬರ ಬಂಧನ
ಮಣಿಪಾಲ, ಜು.6: ಅಕ್ರಮ ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಮಲ್ಪೆ ಹಾಗೂ ಮಣಿಪಾಲದಲ್ಲಿ ಜು.5ರಂದು ದಾಳಿ ನಡೆಸಿದ ಉಡುಪಿ ಡಿಸಿಐಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮಣಿಪಾಲದ ಶೀಂಬ್ರಾ ಬಿವಿಟಿ ಬಸ್ ನಿಲ್ದಾಣದ ಬಳಿ ಮಧ್ಯಾಹ್ನ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಅಲೆವೂರು ರಸ್ತೆಯ ರಾಹುಲ್ ನಗರದ ನಿವಾಸಿ ರಾಘವೇಂದ್ರ ನಾಯಕ್(23) ಎಂಬಾತ ನನ್ನು ಬಂಧಿಸಿರುವ ಪೊಲೀಸರು, 240 ಗ್ರಾಂ ಗಾಂಜಾ, ಮೊಬೈಲ್ ವಶಪಡಿಸಿ ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
ಮಲ್ಪೆಕಡೆಕಾರು ಗ್ರಾಮದ ಕನ್ನರಪಾಡಿಯಲ್ಲಿ ಸಂಜೆ ವೇಳೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಕುಂದಾಪುರ ಕಟ್ಬೆಲ್ತೂರು ನಿವಾಸಿ ಪುನೀತ್ ಕುಮಾರ್ ಎಂಬಾತನನ್ನು ಬಂಧಿಸಿ, 305 ಗ್ರಾಂ ಗಾಂಜಾವನ್ನು ವಶಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ಸೇವನೆ: ಓರ್ವ ವಶಕ್ಕೆ
ಮಣಿಪಾಲ : ಮಣಿಪಾಲ ಈಶ್ವರ ನಗರದ ಬಸ್ ನಿಲ್ದಾಣದ ಬಳಿ ಜು.5ರಂದು ಮಧ್ಯಾಹ್ನ ವೇಳೆ ಗಾಂಜಾ ಸೇವನೆ ಮಾಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಕ್ಷಯ್ ಸಿ.ಎನ್.(20) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.