Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸಂಸದರಿಂದಲೇ ಕೇಂದ್ರ ಸರಕಾರಕ್ಕೆ...

ಬಿಜೆಪಿ ಸಂಸದರಿಂದಲೇ ಕೇಂದ್ರ ಸರಕಾರಕ್ಕೆ ತರಾಟೆ!

ವಾರ್ತಾಭಾರತಿವಾರ್ತಾಭಾರತಿ9 July 2019 9:19 AM IST
share
ಬಿಜೆಪಿ ಸಂಸದರಿಂದಲೇ ಕೇಂದ್ರ ಸರಕಾರಕ್ಕೆ ತರಾಟೆ!

ಹೊಸದಿಲ್ಲಿ, ಜು.9: ತಮ್ಮ ಕ್ಷೇತ್ರಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದೆ ಹೇಮಮಾಲಿನಿ ಹಾಗೂ ರಾಜೀವ್ ಪ್ರತಾಪ್ ರೂಡಿ ಅಸಮಾಧಾನ ವ್ಯಕ್ತಪಡಿಸಿದ ಸ್ವಾರಸ್ಯಕರ ಘಟನೆಗೆ ಲೋಕಸಭೆ ಸಾಕ್ಷಿಯಾಯಿತು.

ಬಿಹಾರದ ಸರಣ್ ಕ್ಷೇತ್ರದಲ್ಲಿ ಪರಸರ ಪ್ರವಾಸೋದ್ಯಮ ಉತ್ತೇಜಿಸಲು ಸಾಕಷ್ಟು ನೆರವು ನೀಡುತ್ತಿಲ್ಲ ಎಂದು ರೂಡಿ ಆಕ್ಷೇಪಿಸಿದರೆ, ಕೃಷ್ಣಾ ಸರ್ಕ್ಯೂಟ್‌ನಡಿ ವೃಂದಾವನ ಮತ್ತು ಸುತ್ತಮುತ್ತಲಿನ ತಾಣಗಳಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿರೋಧ ಪಕ್ಷಗಳ ಸಾಲಿನ ಹಲವು ಮಂದಿ ಸದಸ್ಯರು ಮೇಜುಕುಟ್ಟಿ ಈ ಇಬ್ಬರು ಸಂಸದರ ಆಗ್ರಹವನ್ನು ಬೆಂಬಲಿಸಿದರು.

"ಸೋನ್‌ಪುರ ಮೇಳ ಭಾರತದ ಅತಿದೊಡ್ಡ ಜಾನುವಾರು ಜಾತ್ರೆ ಎನಿಸಿಕೊಂಡಿದೆ. ಅಪರೂಪದ ಪ್ರಬೇಧವಾಗಿರುವ ಡಾಲ್ಫಿನ್‌ಗಳು ಈ ಭಾಗದಲ್ಲಿ ಕಂಡುಬರುತ್ತವೆ. ಎಂಟು ರಾಜ್ಯಗಳು ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಪಡೆದಿವೆ. ಅದರೆ ಬಿಹಾರಕ್ಕೆ ನಯಾಪೈಸೆ ಸಿಕ್ಕಿಲ್ಲ" ಎಂದು ರೂಡಿ ಕಿಡಿ ಕಾರಿದರು.

"ಕಳೆದ ಮೂರು ವರ್ಷಗಳಲ್ಲಿ ನಾನು ಪ್ರಸ್ತಾವದೊಂದಿಗೆ ಅಡ್ಡಾಡುತ್ತಿದ್ದೇನೆ. ಆದರೆ ಈ ಹಣ ಎಲ್ಲಿ ಹೋಗುತ್ತದೆ ಎಂದು ನನಗೆ ಅರ್ಥವಾಗಿಲ್ಲ. ನಾನು 2018ರಲ್ಲಿ ನೀಡಿದ ಪ್ರಸ್ತಾವ ಇನ್ನೂ ಬಾಕಿ ಇದೆ" ಎಂದು ವಿವರಿಸಿದರು.

ಸದಸ್ಯರ ಆಕ್ಷೇಪಗಳಿಗೆ ಉತ್ತರಿಸಿದ ಕೇಂದ್ರ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್, "ಇಂಥ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ವಿವರವಾದ ಯೋಜನಾ ವರದಿಗಳ ಸಹಿತ ಪ್ರಸ್ತಾವ ಬರಬೇಕು" ಎಂದು ಸ್ಪಷ್ಟಪಡಿಸಿದರು.

"ಈ ಬಗ್ಗೆ ಈಗಾಗಲೇ ವಿವರವಾದ ಯೋಜನಾ ವರದಿ ಸಲ್ಲಿಸಿದ್ದೆ. ಅದನ್ನು ಈಗ ಸದನದಲ್ಲಿ ಮಂಡಿಸುತ್ತಿದ್ದೇನೆ. ಅಧಿಕಾರಿಗಳು ಅದನ್ನು ಸಚಿವರ ಗಮನಕ್ಕೆ ತಂದಿಲ್ಲ ಎಂದಾದರೆ, ಅವರ ವಿರುದ್ಧ ಹಕ್ಕುಚ್ಯುತಿ ಪ್ರಕರಣಕ್ಕೆ ಅರ್ಹವಾದ ವಿಚಾರ" ಎಂದು ರೂಡಿ ಪ್ರತಿಕ್ರಿಯಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಹೇಮಮಾಲಿನಿ, ಮಥುರಾ, ವೃಂದಾವನ, ಗೋವರ್ಧನ, ಬರ್ಸಾನ ಮತ್ತು ನಂದಗಾಂವ್ ಅಭಿವೃದ್ಧಿಗೆ ಕೃಷ್ಣ ಸರ್ಕ್ಯೂಟ್ ಯೋನೆಯಡಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X