Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೆಮಿಫೈನಲ್‌ಗೆ ಮಳೆ ಅಡ್ಡಿ: ಭಾರತಕ್ಕೆ...

ಸೆಮಿಫೈನಲ್‌ಗೆ ಮಳೆ ಅಡ್ಡಿ: ಭಾರತಕ್ಕೆ ಡಿಎಲ್‌ಎಸ್ ಗುರಿ ಎಷ್ಟು ಗೊತ್ತೇ?

ಎರಡೂ ತಂಡಗಳ ಮುಂದಿವೆ ಈ ಸಾಧ್ಯತೆಗಳು..

ವಾರ್ತಾಭಾರತಿವಾರ್ತಾಭಾರತಿ9 July 2019 9:48 PM IST
share
ಸೆಮಿಫೈನಲ್‌ಗೆ ಮಳೆ ಅಡ್ಡಿ: ಭಾರತಕ್ಕೆ ಡಿಎಲ್‌ಎಸ್ ಗುರಿ ಎಷ್ಟು ಗೊತ್ತೇ?

ಮ್ಯಾಂಚೆಸ್ಟರ್, ಜು.9: ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3) ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.

ಒಂದು ವೇಳೆ ಇಂದು ನ್ಯೂಝಿಲ್ಯಾಂಡ್ ಮತ್ತೆ ಬ್ಯಾಟಿಂಗ್‌ ಮುಂದುವರಿಸದೇ ಇದ್ದರೆ ಡಕ್‌ ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತಕ್ಕೆ 20 ಓವರ್ ಪಂದ್ಯದಲ್ಲಿ 148 ರನ್ ಹಾಗೂ 46 ಓವರ್‌ ಗಳ ಪಂದ್ಯದಲ್ಲಿ 237 ರನ್ ಗುರಿ ಸಿಗಲಿದೆ.

ಒಂದು ವೇಳೆ ಇಂದು 20 ಓವರ್ ‌ಗಳ ಪಂದ್ಯವೂ ಸಾಧ್ಯವಾಗದಿದ್ದರೆ ಮೀಸಲು ದಿನವಾದ ಬುಧವಾರ ನ್ಯೂಝಿಲ್ಯಾಂಡ್ 46.1 ಓವರ್‌ ನಿಂದ ಬ್ಯಾಟಿಂಗ್ ಮುಂದುವರಿಸಲಿದೆ. ಬುಧವಾರದ ಪಂದ್ಯಕ್ಕೂ ಮಳೆ ಅಡ್ಡಿಯಾದ ಪಕ್ಷದಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ ಗೆ ತೇರ್ಗಡೆಯಾಗಲಿದೆ.

ಇದಕ್ಕೂ ಮೊದಲು ಟಾಸ್ ಜಯಿಸಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಆರಂಭದಲ್ಲಿ ರನ್ ಗಳಿಸಲು ಪರದಾಟ ನಡೆಸಿದ ಕಿವೀಸ್ 3.3 ಓವರ್‌ಗಳಲ್ಲಿ ಕೇವಲ 1 ರನ್ ಗಳಿಸಿದ್ದಾಗ ಆರಂಭಿಕ ಆಟಗಾರ ಗಪ್ಟಿಲ್ ವಿಕೆಟನ್ನು ಕಳೆದುಕೊಂಡಿತು.

ಆಗ ನಿಕೊಲ್ಸ್ ಹಾಗೂ ಟೇಲರ್‌ರೊಂದಿಗೆ ಕೈ ಜೋಡಿಸಿದ ವಿಲಿಯಮ್ಸನ್ ಕ್ರಮವಾಗಿ 2ನೇ ಹಾಗೂ 3ನೇ ವಿಕೆಟ್ ಜೊತೆಯಾಟದಲ್ಲಿ 68 ಹಾಗೂ 65 ರನ್ ಸೇರಿಸಿ ತಂಡವನ್ನು ಆಧರಿಸಿದರು. ಟೂರ್ನಿಯಲ್ಲಿ 4ನೇ ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ವಿಲಿಯಮ್ಸನ್ ಸ್ಪಿನ್ನರ್ ಚಹಾಲ್ ಎಸೆತದಲ್ಲಿ ಜಡೇಜಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X