Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಜು.11ರಂದು ನೀರು ಪೂರೈಕೆಯಿಲ್ಲ...

ಮಂಗಳೂರು: ಜು.11ರಂದು ನೀರು ಪೂರೈಕೆಯಿಲ್ಲ !

ಅಡ್ಯಾರು-ಕಣ್ಣೂರು ಬಳಿ ಪೈಪ್‌ಲೈನ್ ದುರಸ್ತಿ

ವಾರ್ತಾಭಾರತಿವಾರ್ತಾಭಾರತಿ10 July 2019 6:40 PM IST
share

ಮಂಗಳೂರು, ಜು.10: ತುಂಬೆ ಕಿಂಡಿ ಅಣೆಕಟ್ಟಿನಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ಪೈಪ್‌ಲೈನ್ ಅಡ್ಯಾರು- ಕಣ್ಣೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪ ಒಡೆದು ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಜು. 11ರಂದು ಕೂಡಾ ನಗರದಲ್ಲಿ ನೀರು ಪೂರೈಕೆಯಾಗದು.

ತುಂಬೆಯಿಂದ ಪಡೀಲ್ ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಅಡ್ಯಾರ್‌ನ ಮಾತಾ ನರ್ಸರಿಯ ಮುಂಭಾಗದಲ್ಲಿ ರವಿವಾರ ರಾತ್ರಿ ನೀರು ಸೋರಿಕೆಯಾಗಿತ್ತು. ಮುಖ್ಯ ಪೈಪ್‌ಲೈನ್ ಜಾಯಿಂಟ್‌ನಲ್ಲಿ ಬಿರುಕಿನಿಂದ ನೀರು ಸೋರಿಕೆಯಾಗುತ್ತಿದ್ದು, ಪೈಪ್‌ಲೈನ್ ಮೇಲಿನ ಮಣ್ಣು ತೆರವು ಗೊಳಿಸಿ ದುರಸ್ತಿ ಕಾರ್ಯ ಸೋಮವಾರ ಆರಂಭಗೊಂಡಿತ್ತು. ಆದರೆ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿ ನೀರು ತುಂಬುವ ಕಾರಣ ಪೈಪ್‌ಲೈನ್ ಜಾಯಿಂಟ್ ಸರಿಪಡಿಸಲು ವಿಳಂಬವಾಗಿದೆ. 

ಈಗಾಗಲೇ ಸರ್ಫೇಸ್ ಏರ್‌ವಾಲ್ವ್ ಓಪನ್ ಮಾಡಿ ವೆಲ್ಡಿಂಗ್ ಕಾರ್ಯ ಆಗಿದೆ. ಬಳಿಕ ಏರ್‌ವಾಲ್ವ್ ಮುಚ್ಟಲಾಗುತ್ತಿದೆ. ನಾಳೆ ಸಂಜೆಯವರೆಗೂ ಕಾಮಗಾರಿ ಮುಂದುವರಿಯಲಿದೆ. ಸಂಜೆಯಿಂದ ಪಂಪಿಂಗ್ ನಡೆಯಲಿದೆ ಎಂದು ಮನಪಾ ಕಾರ್ಯನಿರ್ವಾಹಕ ಇಂಜಿನಿಯರ್ ಲಿಂಗೇಗೌಡ ಪತ್ರಿಕೆಗೆ ತಿಳಿಸಿದ್ದಾರೆ.

ಪಡೀಲ್‌ಗೆ ತುಂಬೆಯಿಂದ ನೀರು ಸರಬರಾಜು ಆಗುವ ಪ್ರಮಾಣದಲ್ಲಿ ರವಿವಾರ ರಾತ್ರಿ ವೇಳೆ ನೀರು ಕಡಿಮೆಯಾದ ಹಿನ್ನೆಲಯೆಲ್ಲಿ ಪೈಪ್‌ಲೈನ್ ಪರಿಶೀಲಿಸಿದಾಗ ಪೈಪ್‌ಲೈನ್‌ನ ಬಿರುಕು ಪಾಲಿಗೆ ಅಧಿಕಾರಿಗಳ ಗಮನಕ್ಕೆ ಬಂದಿತ್ತು.

ಸೋಮವಾರ ಜೆಸಿಬಿ ಸಹಾಯದಿಂದ ಪೈಪ್‌ಲೈನ್ ಮೇಲಿನ ಮಣ್ಣು ತೆರವು ಮಾಡಿ ಕಾಮಗಾರಿ ಆರಂಭಿಸಲಾಗಿತ್ತು. ಇದರಿಂದಾಗಿ ನಗರದ ಕೆಲವು ಕಡೆಗಳಲ್ಲಿ ಸೋಮವಾರದಿಂದ ನೀರು ಪೂರೈಕೆ ಸ್ಥಗಿತಗೊಂಡಿತ್ತು. ಇದೀಗ ಇಂದು ನಗರದ ಹಲವು ಭಾಗಗಳಲ್ಲಿ ನೀರಿನ ಸಮಸ್ಯೆ ಜನತೆಯನ್ನು ಕಾಡುತ್ತಿದೆ.

ಕಳೆದ ಕೆಲ ವರ್ಷಗಳಿಂದ ಅಡ್ಯಾರು- ಕಣ್ಣೂರು ಬಳಿ ಈ ಪೈಪ್‌ಲೈನ್‌ನ ಸಮಸ್ಯೆ ಎದುರಾಗಿತ್ತಿದೆ. ಪ್ರತಿ ವರ್ಷ ದುರಸ್ತಿ ಮಾಡಲಾಗುತ್ತಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ಮಾತ್ರ ಸಿಗುತ್ತಿಲ್ಲ.

ಈಗಾಗಲೇ ಮುಂಗಾರು ಮಳೆಯು ತಡವಾಗಿ ಆರಂಭವಾದ ಹಿನ್ನೆಲೆಯಲ್ಲಿ ಜೂನ್ ತಿಂಗಳಿನಾದ್ಯಂತ ನಗರದಲ್ಲಿ ನೀರಿನ ಕೊರತೆಯ ಆತಂಕ ಕಾಡಿತ್ತು. ರೇಶನಿಂಗ್ ವ್ಯವಸ್ಥೆಯ ಮೂಲಕ ನೀರು ಪೂರೈಕೆ ಮಾಡುತ್ತಿದ್ದರೂ ಹಲವು ಕಡೆಗಲ್ಲಿ ನೀರಿನ ಸಮಸ್ಯೆ ಎದುರಾಗಿತ್ತು. ಇನ್ನೇನು ಮಳೆಗಾಲ ಆರಂಭವಾಗಿ ತುಂಬೆಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ ಅನ್ನುವಷ್ಟರಲ್ಲಿ ಮತ್ತೆ ಜನತೆ ನೀರಿನ ಮಸ್ಯೆಯನ್ನು ಎದುರಿಸುವಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X