Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಜನಧನ’ ಖಾತೆಯಲ್ಲಿ 1 ಲಕ್ಷ ಕೋಟಿ ರೂ....

‘ಜನಧನ’ ಖಾತೆಯಲ್ಲಿ 1 ಲಕ್ಷ ಕೋಟಿ ರೂ. ಜಮೆ: ವಿತ್ತ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ10 July 2019 9:02 PM IST
share
‘ಜನಧನ’ ಖಾತೆಯಲ್ಲಿ 1 ಲಕ್ಷ ಕೋಟಿ ರೂ. ಜಮೆ: ವಿತ್ತ ಇಲಾಖೆ

ಹೊಸದಿಲ್ಲಿ, ಜು.10: ಸುಮಾರು ಐದು ವರ್ಷ ಹಿಂದೆ ಮೋದಿ ನೇತೃತ್ವದ ಸರಕಾರ ಆರಂಭಿಸಿದ್ದ ಜನಧನ ಯೋಜನೆಯ ಬ್ಯಾಂಕ್ ಖಾತೆಯಲ್ಲಿ ಜಮೆಯಾದ ಮೊತ್ತ 1 ಲಕ್ಷ ಕೋಟಿ ರೂ. ಗಡಿ ದಾಟಿದೆ ಎಂದು ವಿತ್ತ ಸಚಿವಾಲಯ ತಿಳಿಸಿದೆ.

ಜುಲೈ 3ರ ವೇಳೆಗೆ ದೇಶದಲ್ಲಿ ಪ್ರಧಾನಮಂತ್ರಿ ಜನಧನ ಯೋಜನೆ(ಪಿಎಮ್‌ಜೆಡಿವೈ)ಯ 36.06 ಕೋಟಿಗೂ ಅಧಿಕ ಖಾತೆಗಳಿದ್ದು, ಇದರಲ್ಲಿ 1,00,495.94 ಕೋಟಿ ರೂ. ಜಮೆಯಾಗಿದೆ . ಜನಧನ ಖಾತೆದಾರರಲ್ಲಿ ಶೇ.50ಕ್ಕೂ ಹೆಚ್ಚು ಮಹಿಳೆಯರು ಎಂದು ವಿತ್ತ ಸಚಿವಾಲಯ ಇತ್ತೀಚಿಗೆ ಬಿಡುಗಡೆಗೊಳಿಸಿದ ಅಂಕಿಅಂಶ ತಿಳಿಸಿದೆ. ದೇಶದ ಜನತೆಗೆ ಸಾರ್ವತ್ರಿಕ ಬ್ಯಾಂಕಿಂಗ್ ಸೌಲಭ್ಯ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ಪಿಎಮ್‌ಜೆಡಿವೈ ಖಾತೆಯಲ್ಲಿ ಜಮೆಯಾಗುತ್ತಿರುವ ಹಣದ ಪ್ರಮಾಣ ಕ್ರಮೇಣ ಹೆಚ್ಚುತ್ತಿದ್ದು, ಜೂನ್ 6ರಂದು 99,649.84 ಕೋಟಿ ರೂ. ಜಮೆಯಾಗಿತ್ತು ಎಂದು ಸಚಿವಾಲಯ ಮಾಹಿತಿ ನೀಡಿದೆ.

ಪಿಎಮ್‌ಜೆಡಿವೈಯಡಿ ಮೂಲ ಉಳಿತಾಯ ಬ್ಯಾಂಕ್ ಠೇವಣಿ ಖಾತೆ(ಬಿಎಸ್‌ಬಿಡಿ)ಯನ್ನು ಆರಂಭಿಸಲಾಗುತ್ತಿದೆ ಮತ್ತು ಈ ಖಾತೆಯಡಿ ರುಪೇ ಡೆಬಿಟ್‌ಕಾರ್ಡ್ ಹಾಗೂ ಓವರ್‌ಡ್ರಾಫ್ಟ್ ಸೌಲಭ್ಯವೂ ಲಭಿಸುತ್ತಿದೆ. 28.44 ಕೋಟಿ ಖಾತೆಗಳಿಗೆ ರುಪೆಕಾರ್ಡ್ ಸೌಲಭ್ಯ ಒದಗಿಸಲಾಗಿದೆ. ಬಿಎಸ್‌ಬಿಡಿ ಖಾತೆಗಳಲ್ಲಿ ಕನಿಷ್ಟ ಬ್ಯಾಲೆನ್ಸ್ ಮೊತ್ತ ಇರಿಸುವ ಅಗತ್ಯವಿರುವುದಿಲ್ಲ.

   ಜನಧನ ಖಾತೆಯ ಯಶಸ್ಸಿನಿಂದ ಉತ್ಸಾಹಿತವಾಗಿರುವ ಸರಕಾರ, 2018ರ ಆಗಸ್ಟ್ 28ರ ಬಳಿಕ ಆರಂಭಿಸಲಾದ ಜನಧನ ಖಾತೆಗಳಿಗೆ ಅಪಘಾತ ವಿಮಾ ಮೊತ್ತವನ್ನು 1 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಹೆಚ್ಚಿಸಿದೆ. ಅಲ್ಲದೆ ಓವರ್‌ಡ್ರಾಫ್ಟ್ ಸೌಲಭ್ಯವನ್ನೂ ದ್ವಿಗುಣಗೊಳಿಸಿ 10 ಸಾವಿರ ರೂ.ಗೆ ಹೆಚ್ಚಿಸಿದೆ. ಅಲ್ಲದೆ ಎಲ್ಲಾ ಮನೆಗೂ ಬ್ಯಾಂಕ್‌ ಖಾತೆ ಎಂಬ ಗುರಿಯನ್ನು ಬ್ಯಾಂಕ್‌ಖಾತೆ ಹೊಂದಿರದ ಎಲ್ಲಾ ವಯಸ್ಕರಿಗೆ ಎಂದು ಬದಲಿಸಲಾಗಿದೆ. ದುರ್ಬಲ ವರ್ಗದವರಿಗೆ ಹಾಗೂ ಕಡಿಮೆ ಆದಾಯವಿರುವ ಜನರಿಗೆ ಉಳಿತಾಯ ಖಾತೆಯ ಸೌಲಭ್ಯ, ಅಗತ್ಯ ಆಧರಿಸಿ ಸಾಲ ಸೌಲಭ್ಯ, ಪಾವತಿ ಸೌಲಭ್ಯ, ವಿಮೆ ಮತ್ತು ಪಿಂಚಣಿ ಸಹಿತ ವಿವಿಧ ಆರ್ಥಿಕ ಸೇವೆಗಳನ್ನು ಲಭ್ಯವಾಗಿಸುವುದು ಜನಧನ ಖಾತೆ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಶೂನ್ಯ ಬ್ಯಾಲೆನ್ಸ್ ಖಾತೆಗಳ ಸಂಖ್ಯೆ 2018ರ ಮಾರ್ಚ್‌ನಲ್ಲಿ 5.10 ಕೋಟಿಯಿದ್ದರೆ, 2019ರ ಮಾರ್ಚ್ ನಲ್ಲಿ 5.07 ಕೋಟಿಗೆ ಇಳಿದಿದೆ ಎಂದು ಸಚಿವಾಲಯ ಇತ್ತೀಚೆಗೆ ರಾಜ್ಯಸಭೆಯಲ್ಲಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X