Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ. ಮರಳುಗಾರಿಕೆ ಹಗರಣ: ಸಿಬಿಐನಿಂದ...

ಉ.ಪ್ರ. ಮರಳುಗಾರಿಕೆ ಹಗರಣ: ಸಿಬಿಐನಿಂದ ಮಾಜಿ ಸಚಿವ ಪ್ರಜಾಪತಿ, ನಾಲ್ವರು ಐಎಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ವಾರ್ತಾಭಾರತಿವಾರ್ತಾಭಾರತಿ10 July 2019 9:49 PM IST
share
ಉ.ಪ್ರ. ಮರಳುಗಾರಿಕೆ ಹಗರಣ: ಸಿಬಿಐನಿಂದ ಮಾಜಿ ಸಚಿವ ಪ್ರಜಾಪತಿ, ನಾಲ್ವರು ಐಎಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಹೊಸದಿಲ್ಲಿ, ಜು.10: ಉತ್ತರಪ್ರದೇಶದ ಮರಳುಗಾರಿಕೆ ಹಗರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ನಾಲ್ವರು ಐಎಎಸ್ ಅಧಿಕಾರಿಗಳು ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರನ್ನು ಆರೋಪಿಗಳೆಂದು ಹೆಸರಿಸಿದ್ದು, ಅವರ ವಿರುದ್ಧ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದೆ. ಹಗರಣಕ್ಕೆ ಸಂಬಂಧಿಸಿ ರಾಜ್ಯದ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವುದಾಗಿ ಸಿಬಿಐ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಹಿಂದಿನ ಸಮಾಜವಾದಿ ಪಕ್ಷ ಸರಕಾರದಲ್ಲಿ ಸಚಿವರಾಗಿದ್ದ ಪ್ರಜಾಪತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿದ್ದ ಜೀವೇಶ್ ನಂದನ್, ವಿಶೇಷ ಕಾರ್ಯದರ್ಶಿ ಸಂತೋಷ್ ಕುಮಾರ್, ಆಗಿನ ಜಿಲ್ಲಾ ಮ್ಯಾಜಿಸ್ಟ್ರೇಟರುಗಳಾದ ಅಭಯ್ ಹಾಗೂ ವಿವೇಕ್ ಅವರನ್ನು ಆರೋಪಿಗಳೆಂದು ಸಿಬಿಐ ಎಫ್‌ಐಆರ್‌ನಲ್ಲಿ ಹೆಸರಿಸಿದೆ.

ಹಿಂದಿನ ಉತ್ತರಪ್ರದೇಶ ಸರಕಾರವು ಮರಳುಗಾರಿಕೆಯನ್ನು ಹೊಸದಾಗಿ ಲೀಸ್‌ ಹಾಗೂ ಟೆಂಡರ್‌ಗೆ ನೀಡಲು 2012ರ ಮೇ 31ರಂದು ಇ-ಟೆಂಡರ್ ಕರೆದಿತ್ತು. ರಾಜ್ಯ ಸರಕಾರದ ಈ ಕ್ರಮವನ್ನು ಅಲಹಾಬಾದ್ ಹೈಕೋರ್ಟ್ 2013ರ ಜನವರಿ 29ರಂದು ಎತ್ತಿಹಿಡಿದಿತ್ತು.

ಈ ಪ್ರಕರಣದಲ್ಲಿ ಫಲಾನುಭವಿಗಳಾದ ಶಿವಸಿಂಗ್ ಹಾಗೂ ಸುಖರಾಜ್ ಅವರು ಸಚಿವ ಪ್ರಜಾಪತಿಯವರ ಪ್ರಭಾವವನ್ನು ಬಳಸಿಕೊಂಡು, ಮರಳುಗಾರಿಕೆ ಲೀಸಿಂಗ್‌ನ್ನು ನವೀಕರಣಗೊಳಿಸಿದ್ದಾರೆಂದು ಸಿಬಿಐ ಆಪಾದಿಸಿದೆ. ಜೀವೇಶ್ ನಂದನ್ ಹಾಗೂ ಆಗಿನ ಫತೇಹ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಯ್ ಅವರು ಸಚಿವ ಪ್ರಜಾಪತಿ ಜೊತೆ ಕೈಜೋಡಿಸಿ, ಸುಖರಾಜ್‌ನ ಮರಳುಗಾರಿಕೆಯ ಲೀಸ್ 2014ರಲ್ಲಿ ನವೀಕರಣಗೊಳ್ಳುವಂತೆ ಮಾಡಿದ್ದರು. ಶಿವಸಿಂಗ್ 2012ರಲ್ಲಿ ತನ್ನ ಲೀಸ್ ನವೀಕರಣ ಗೊಳಿಸುವಲ್ಲಿ ಸಫಲನಾಗಿದ್ದ ಎಂದು ಸಿಬಿಐ ಆರೋಪಿಸಿದೆ.

ರಾಜ್ಯ ಸರಕಾರದ ಇ-ಟೆಂಡರಿಂಗ್ ನೀತಿಯನ್ನು ಉಲ್ಲಂಘಿಸಿ ಈ ಲೀಸನ್ನು ನವೀಕರಣಗೊಳಿಸಲಾಗಿದೆ ಎಂದು ಸಿಬಿಐ ಆಪಾದಿಸಿದೆ.

 ಇನ್ನೊಂದು ಪ್ರಕರಣದಲ್ಲಿ, ಶರದ್ ಯಾದವ್ ಎಂಬಾತನ ಮರಳುಗಾರಿಕೆಯ ಲೀಸಿಂಗ್‌ನ್ನು ನವೀಕರಣಗೊಳಿಸುವುದಕ್ಕಾಗಿ ದೇವರಿಯಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಹುದ್ದೆಗೆ ವಿವೇಕ್‌ರನ್ನು ನಿಯೋಜಿಸಲಾಗಿತ್ತು ಎಂದು ಸಿಬಿಐ ದೂರಿದೆ.

ಲೀಸ್ ನವೀಕರಣಕ್ಕಾಗಿ ಶರದ್‌ಯಾದವ್ ಸಲ್ಲಿಸಿದ ಅರ್ಜಿಯನ್ನು 2013ರ ಎಪ್ರಿಲ್ 5ರಂದು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು. ಆದಾಗ್ಯೂ ಮಾರನೆಯ ದಿನವೇ ಆತ ವಿವೇಕ್ ಹಾಗೂ ಜಿಲ್ಲೆಯ ಇತರ ಅಧಿಕಾರಿಗಳ ಜೊತೆ ಸಂಚು ಹೂಡಿ ಲೀಸಿಂಗ್ ನವೀಕರಣಗೊಳ್ಳುವಂತೆ ಮಾಡಿದ್ದಾನೆಂದು ಸಿಬಿಐ ಎಫ್‌ಐಆರ್‌ನಲ್ಲಿ ಆರೋಪಿಸಿದೆ.

ಹಗರಣಕ್ಕೆ ಸಂಬಂಧಿಸಿ ಲಕ್ನೋ, ಬುಲಂದಶಹರ್, ಫತೇಹ್‌ಪುರ, ಅಝಂಘರ್, ಅಲಹಾಬಾದ್, ನೊಯ್ಡೋ, ಗೋರಖ್‌ಪುರ, ದೇವರಿಯಾ ಸೇರಿದಂತೆ ರಾಜ್ಯದ 12 ಸ್ಥಳಗಳಲ್ಲಿ ಸಿಬಿಐ ಮಂಗಳವಾರ ಶೋಧ ಕಾರ್ಯಾಚರಣೆಯನ್ನು ನಡೆಸಿತ್ತು.

ಅಭಯ್‌ನ ನಿವಾಸದಿಂದ 47 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದ್ದರೆ, 10 ಲಕ್ಷ ರೂ.ಗಳನ್ನು ದೇವಿಶರಣ್ ಉಪಾಧ್ಯಾಯ ಅವರ ನಿವಾಸದಿಂದ ವಶಪಡಿಸಿಕೊಳ್ಳಲಾಗಿದೆ. ಪ್ರಸಕ್ತ ಅಝಂಘರ್‌ನ ಸಿಡಿಓ ಆಗಿ ನಿಯೋಜಿತರಾಗಿರುವ ಉಪಾಧ್ಯಾಯ್ ಅವರ ನಿವಾಸದಲ್ಲೂ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X