Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಣ್ಣು ಮಕ್ಕಳು ಜಾಗರೂಕರಾಗಿರಿ, ಯಾರನ್ನೂ...

ಹೆಣ್ಣು ಮಕ್ಕಳು ಜಾಗರೂಕರಾಗಿರಿ, ಯಾರನ್ನೂ ಹೆಚ್ಚು ನಂಬಬೇಡಿ: ಡಿವೈಎಸ್‍ಪಿ ದಿನಕರ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ10 July 2019 10:47 PM IST
share
ಹೆಣ್ಣು ಮಕ್ಕಳು ಜಾಗರೂಕರಾಗಿರಿ, ಯಾರನ್ನೂ ಹೆಚ್ಚು ನಂಬಬೇಡಿ: ಡಿವೈಎಸ್‍ಪಿ ದಿನಕರ ಶೆಟ್ಟಿ

ಪುತ್ತೂರು: ಹೆಣ್ಣು ಮಕ್ಕಳು ಹೆಚ್ಚು ಜಾಗರೂಕರಾಗಿರಬೇಕಾದ ಪರಿಸ್ಥಿತಿ ಪ್ರಸ್ತುತ ಕಾಲಘಟ್ಟದಲ್ಲಿದ್ದು, ಯಾರನ್ನೂ ಪೂರ್ಣವಾಗಿ ನಂಬಬೇಡಿ. ಮೈಯೆಲ್ಲಾ ಕಣ್ಣಾಗಿರಬೇಕು. ಇಲ್ಲದಿದ್ದಲ್ಲಿ ಮೋಸಗಳಾಗುವ ಸಂಭವವಿದೆ ಎಂದು ಪುತ್ತೂರು ಡಿವೈಎಸ್‍ಪಿ ದಿನಕರ ಶೆಟ್ಟಿ ವಿದ್ಯಾರ್ಥಿನಿಯರಿಗೆ ಎಚ್ಚರಿಕೆ ನೀಡಿದರು.

ಅವರು ಬುಧವಾರ ಪುತ್ತೂರು ಬ್ರಹ್ಮಶ್ರೀ ಶ್ರೀ ಗುರುನಾರಾಯಣ ಸಭಾಭವನದಲ್ಲಿ ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜ್‍ನ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.

ಅವರು ಹೆಣ್ಣು ಮಕ್ಕಳು ಎಲ್ಲಿಯಾದರೂ ಹೊರಗಡೆ ಹೋಗುವಾಗ ಮೈ ಎಲ್ಲಾ ಕಣ್ಣಾಗಿರಬೇಕು. ಏಕೆಂದರೆ ತಮ್ಮ ಜೊತೆಗಿರು ವವರೇ ನಮಗೆ ಮೋಸ ಮಾಡುತ್ತಾರೆ. ಅಲ್ಲದೇ ಪ್ರತಿಯೊಂದು ಹೆಜ್ಜೆಯನ್ನು ಇಡುವಾಗಲೂ ತುಂಬಾ ಯೋಚನೆ ಮಾಡಿ ಇಡಬೇಕಾಗಿದೆ. ಏನಾದರೂ ಮಹಿಳೆಯರಿಗೆ ಕಿರುಕುಳವಾದರೆ ತಕ್ಷಣವೇ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ. ಅದರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಧೈರ್ಯ ತುಂಬಿದರು.

ದ.ಕ. ಜಿಲ್ಲಾದ್ಯಂತವೂ ಗಾಂಜಾದಂತಹ ಅಮಲು, ನಶೆಯ ಪದಾರ್ಥಗಳು ಮಾರಾಟವಾಗುತ್ತಿದೆ. ಇಂತಹ ಪದಾರ್ಥಗಳು ವ್ಯಸನೆ ಮಾಡುವಂತಹ ವ್ಯಕ್ತಿಗಳ ಮಾಹಿತಿ ನೀಡಿ ಅಥವಾ ಅಪರಾಧ ನಡೆಯುವಂತಹ ಸ್ಥಳವನ್ನು ಕರೆ ಮಾಡಿ ತಿಳಿಸಿ ತಮ್ಮ ಕುರಿತು ಯಾವುದೇ ಮಾಹಿತಿ ಕೇಳದೆ ಕೇವಲ ಅಪರಾಧದ ಮಾಹಿತಿಯನ್ನು ತಿಳಿದು ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದ ಅವರು ಮೊಬೈಲ್ ಬಂದ ಮೇಲೆ ಖಾಸಗಿಯ ಮಾತುಗಳು ನಿಂತು ಹೋಗಿವೆ. ಏಕೆಂದರೆ ಮೊಬೈಲ್‍ಲ್ಲಿ ಮಾತಾನಾಡುವುದು ಬೇರೆಂದು ಕಡೆ ದಾಖಲಾಗುತ್ತದೆ. ಅಲ್ಲದೇ ನಮ್ಮ ಮೆಸೇಜ್ ಕೂಡಾ ಬೇರೊಂದು ಕಡೆ ದಾಖಲಾಗುತ್ತದೆ. ಆದ್ದರಿಂದ ತಮ್ಮ ಖಾಸಗಿತನ ವನ್ನು ಮೊಬೈಲ್‍ಗಳಲ್ಲಿ ಹಂಚದೇ ನೇರವಾಗಿ ಮಾತನಾಡಿ ಎಂದರು.

ವಿದ್ಯಾರ್ಥಿಗಳು ಕಾಲೇಜ್‍ಗೆ ಹೋಗುವಾಗ ಮೊಬೈಲ್ ಫೋನ್‍ಗಳನ್ನು ಅಂಗಡಿಯಲ್ಲಿ ಇಡಬೇಡಿ. ಅಲ್ಲದೇ ಪರಿಚಯದ ವ್ಯಕ್ತಿಗಳಲ್ಲಿಯೂ ಕೊಡಬೇಡಿ. ಒಂದು ವೇಳೆ ಮೊಬೈಲ್‍ನ್ನು ಯಾರಿಗಾದರೂ ನೀಡಿದರೆ ಅದರಿಂದ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ನಾವು ಎಲ್ಲಾ ಕಡೆ ತನಿಖೆ ಮಾಡುತ್ತಿದ್ದೇವೆ. ಇದು ಯಾರಿಗೂ ತೊಂದರೆಯನ್ನುಂಟು ಮಾಡಲು ಅಲ್ಲ, ಬದಲಾಗಿ ಸಮಸ್ಯೆಯನ್ನು ದೂರಮಾಡುವುದಕ್ಕಾಗಿ. ಸಾಮಾಜಿಕ ಜಾಲತಾಣದಲ್ಲಿ ಅಥವಾ ಮಾಧ್ಯಮಗಳಲ್ಲಿ ಬರುವ ಮಾಹಿತಿಯನ್ನು ಒಳ್ಳೆಯದಕ್ಕೂ ಹಾಗೂ ಕೆಟ್ಟದಕ್ಕೂ ಬಳಸಲಾಗುತ್ತದೆ. ಆದರೆ ನಾವು ಅದನ್ನು ಒಳ್ಳೆಯ ಮಾಹಿತಿಯನ್ನು ತೆಗೆದು, ಕೆಟ್ಟದನ್ನು ಅಲ್ಲೇ ಬಿಡಬೇಕು ಎಂದರು.

ವೇದಿಕೆಯಲ್ಲಿ ಪುತ್ತೂರು ಮಹಿಳಾ ಠಾಣಾ ಎಸ್‍ಐ ಸೇಸಮ್ಮ, ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜ್‍ನ ಪ್ರಾಂಶುಪಾಲ ಪ್ರೊ. ಝೇವಿಯರ್ ಡಿಸೋಜಾ ಹಾಗೂ ಕಾಲೇಜ್‍ನ ಉಪನ್ಯಾಸಕರು ಉಪಸ್ಥಿತರಿದ್ದರು.

ಉಪನ್ಯಾಸಕ ಸ್ಟೀವನ್ ಕ್ವಾಡ್ರಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X