Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಯುವಕನನ್ನು ವಿವಾಹವಾದದ್ದಕ್ಕೆ...

ದಲಿತ ಯುವಕನನ್ನು ವಿವಾಹವಾದದ್ದಕ್ಕೆ ಗೂಂಡಾಗಳನ್ನು ಛೂಬಿಟ್ಟ ಬಿಜೆಪಿ ಶಾಸಕ: ಪುತ್ರಿಯ ಆರೋಪ

“ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ”

ವಾರ್ತಾಭಾರತಿವಾರ್ತಾಭಾರತಿ11 July 2019 12:50 PM IST
share
ದಲಿತ ಯುವಕನನ್ನು ವಿವಾಹವಾದದ್ದಕ್ಕೆ ಗೂಂಡಾಗಳನ್ನು ಛೂಬಿಟ್ಟ ಬಿಜೆಪಿ ಶಾಸಕ: ಪುತ್ರಿಯ ಆರೋಪ

ಹೊಸದಿಲ್ಲಿ, ಜು.11: ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ.

“ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ” ಎಂದು ಸಾಕ್ಷಿ ಹೇಳುತ್ತಿರುವಾಗ ಆಕೆಯ ಪತಿಯೆಂದು ತಿಳಿಯಲಾದ ಹಾಗೂ ವೀಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಕೂಡ ಕಾಣಿಸುತ್ತಾನೆ.

ಸಾಕ್ಷಿ ಮಿಶ್ರಾ ಕಳೆದ ವಾರ ಅಜಿತೇಶ್ ಕುಮಾರ್ ಎಂಬಾತನನ್ನು ವರಿಸಿದ್ದಾಳೆಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

“ಪಾಪಾ, ನೀವು  ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ....  ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ  ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,'' ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದಾರೆ.

ಇನ್ನೊಂದು ವೀಡಿಯೋದಲ್ಲಿ ಆಕೆ ಪೊಲೀಸ್ ರಕ್ಷಣೆ ಕೋರಿದ್ದಾರೆ.

ಆದರೆ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. “ನನ್ನ ಪುತ್ರಿ ಸ್ವತಂತ್ರಳಾಗಿದ್ದಾಳೆ. ಆಕೆ ತನ್ನ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು. ನಾನು ಯಾವುದೇ ಬೆದರಿಕೆಯೊಡ್ಡಿಲ್ಲ. ನನ್ನ ಕುಟುಂಬದ ಸದಸ್ಯರು ಯಾ ನನ್ನೊಂದಿಗೆ ಕೆಲಸ ಮಾಡುವವರೂ ಯಾರನ್ನೂ ಕೊಲ್ಲುವ ಬೆದರಿಕೆಯೊಡ್ಡಿಲ್ಲ, ನನ್ನ ಹಾಗೂ ನನ್ನ ಕುಟುಂಬ ತನ್ನ ಕೆಲಸದಲ್ಲಿ ವ್ಯಸ್ತವಾಗಿದೆ'' ಎಂದು ಶಾಸಕ ಹೇಳಿಕೊಂಡಿದ್ದಾರೆ.

“ಸಾಕ್ಷಿ ಮಿಶ್ರಾ ವೀಡಿಯೋಗಳ ಬಗ್ಗೆ ತಮಗೆ ತಿಳಿದಿದೆ ಆದರೆ ಆಕೆ ಎಲ್ಲಿದ್ದಾರೆಂದು ಪೊಲೀಸರಿಗೆ ತಿಳಿದಿಲ್ಲ” ಎಂದು  ಡಿಐಜಿ ಆರ್ ಕೆ ಪಾಂಡೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X