Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದೇಶದ ನೆಪದಲ್ಲಿ ಶಾಲಾ ವಾಹನಗಳ ತಪಾಸಣೆ,...

ಆದೇಶದ ನೆಪದಲ್ಲಿ ಶಾಲಾ ವಾಹನಗಳ ತಪಾಸಣೆ, ದಂಡ: ನಿಯಮ ಸಡಿಲಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ11 July 2019 4:47 PM IST
share
ಆದೇಶದ ನೆಪದಲ್ಲಿ ಶಾಲಾ ವಾಹನಗಳ ತಪಾಸಣೆ, ದಂಡ: ನಿಯಮ ಸಡಿಲಿಗೆ ಮನವಿ

ಬಂಟ್ವಾಳ, ಜು. 11: ಆದೇಶದ ನೆಪದಲ್ಲಿ ವಾಹನ ತಪಾಸಣೆ ಮಾಡಿ ನಿಲ್ಲಿಸಿ, ದಂಡ ವಿಧಿಸುವ ಮೂಲಕ ಸಮಸ್ಯೆ ಉಂಟಾಗು ತ್ತಿದ್ದು, ನಿಯಮಗಳನ್ನು ಸಡಿಲಿಗೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ವಾಹನ ಸಾಗಾಟ ಮಾಲಕ, ಚಾಲಕರ ಸಂಘ ಕರೆ ನೀಡಿರುವ ಪ್ರತಿಭಟನೆಯನ್ವಯ ಬಂಟ್ವಾಳ ತಾಲೂಕಿನಲ್ಲಿ ಮುಷ್ಕರ ಆರಂಭಗೊಂಡಿದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್ ಅವರನ್ನು ಗುರುವಾರ ಭೇಟಿ ಮಾಡಿದ ಸಂಘದ ಸದಸ್ಯರು, ಈ ಕುರಿತು ಮನವಿದರು. ಶುಕ್ರವಾರವೂ ಶಾಲಾ ಮಕ್ಕಳ ವಾಹನಗಳ ಸಾಗಾಟ ಇರುವುದಿಲ್ಲ ಎಂದು ಸಂಘದ ತಾಲೂಕು ಅಧ್ಯಕ್ಷ ಸದಾನಂದ ನಾವೂರ ತಿಳಿಸಿದ್ದಾರೆ.

ಬೆಳಗ್ಗೆ ಮಿನಿ ವಿಧಾನಸೌಧದ ಮುಂಭಾಗ ಸಭೆ ಸೇರಿದ ಚಾಲಕರು, ಬಳಿಕ ಅಲ್ಲಿಂದ ಎಎಸ್ಪಿ ಸೈದುಲು ಅಡಾವತ್ ಅವರ ಕಚೇರಿಗೆ ತೆರಳಿದರು. ನಿಯಮಗಳನ್ನು ಸಡಿಲಿಸಿದರೆ ಬಡ ಚಾಲಕ ವರ್ಗಕ್ಕೆ ಬದುಕಲು ಸಹಾಯವಾಗುತ್ತದೆ. ಅಲ್ಲದೆ ಪೋಷಕ ವರ್ಗದ ಆರ್ಥಿಕ ಹೊರೆಯೂ ಕಡಿಮೆಯಾಗುತ್ತದೆ ಎಂದು ಸಂಘದ ಅಧ್ಯಕ್ಷ ಸದಾನಂದ ನಾವರ ಮತ್ತು ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ- ಮಾಲಕರ ಸಂಘ ಬಂಟ್ವಾಳ ಅಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ ಅವರು ಈ ಸಂದರ್ಭ ಹೇಳಿದರು.

ಬಸ್‍ಗಳಲ್ಲಿ ಮಿತಿಮೀರಿ ಪ್ರಯಾಣಿಕರನ್ನು ಹೇರಿಕೊಂಡು ಸಂಚರಿಸುವುದನ್ನು ಗಮನಿಸದೆ ಕೇವಲ ಶಾಲಾ ವಾಹನಗಳನ್ನು ತಪಾಸಿಸಲಾಗುತ್ತದೆ. ಕೆಲವು ವಾಹನಗಳ ಮೇಲೆ ಎರಡೆರಡು ಬಾರಿ ದಂಡ ವಿಧಿಸಿ, ಚಾಲಕರ ಲೈಸನ್ಸ್ ಮುಟ್ಟುಗೋಲು ಹಾಕಿದ್ದುಂಟು, ಇಂಥ ಸನ್ನಿವೇಶದಲ್ಲಿ ನಾವು ಕೆಲಸ ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಎಎಸ್ಪಿ ಅವರಲ್ಲಿ ಮನವಿ ಮಾಡಿದರು.

ಈ ಸಂದರ್ಭ ಉತ್ತರಿಸಿದ ಎಎಸ್ಪಿ ಸೈದುಲು ಅಡಾವತ್, ನಾವು ಸರಕಾರದ ನಿಯಮಗಳನ್ನು ಪಾಲಿಸುತ್ತೇವೆ. ಶಾಲಾ ವಾಹನ ಸಾಗಾಟ ಚಾಲಕರಿಗೆ ತೊಂದರೆ ಮಾಡುವ ಉದ್ದೇಶ ನಮಗಿಲ್ಲ. ನೀವು ಸಂಚಾರಿ ನಿಯಮಗಳನ್ನು ಪಾಲಿಸಿದರೆ ಯಾವುದೇ ಸಮಸ್ಯೆ ಇಲ್ಲ. ನಿಮ್ಮ ಸಮಸ್ಯೆಗಳ ಮೇಲಾಧಿಕಾರಿಗಳಿಗೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ದ.ಕ.ಜಿಲ್ಲಾ ಶಾಲಾ ವಾಹನ ಚಾಲಕರ ಸಂಘದ ಉಪಾಧ್ಯಕ್ಷ ಜಯರಾಮ ಆಚಾರ್ಯ, ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಸಂತ ಚಂಡ್ತಿಮಾರ್, ಪ್ರಮುಖರಾದ ರಾಜಾ ಚಂಡ್ತಿಮಾರ್, ಇಕ್ಬಾಲ್, ಸೀತಾರಾಮ, ಕಿರಣ್ ಪಿಂಟೋ, ಮ್ಯಾಕ್ಸಿಂ ಸಹಿತ ಹಲವು ವಾಹನ ಚಾಲಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X