Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಣ್ಣಳಿಕೆ: ಉಚಿತ ವೈದ್ಯಕೀಯ ತಪಾಸಣಾ...

ಅಣ್ಣಳಿಕೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ11 July 2019 6:27 PM IST
share
ಅಣ್ಣಳಿಕೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬಂಟ್ವಾಳ, ಜು. 11: ಆಲ್ ಕಾರ್ಗೊ ಲಾಜಿಸ್ಟಿಕ್ ಮಂಗಳೂರು, ಬಂಟ್ವಾಳ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್, ಪ್ರಜ್ಞಾ ಸಲಹಾ ಕೇಂದ್ರ, ಕಂಕನಾಡಿ ಮಂಗಳೂರು, ಜನ ಶಿಕ್ಷಣ ಟ್ರಸ್ಟ್ ಮುಡಿಪು, ಅರಳ ಗ್ರಾಮ ಪಂಚಾಯತ್, ಸುಗ್ರಾಮ ಜಾಗೃತಿ ವೇದಿಕೆ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಮತ್ತು ಸಮುದಾಯ ದಂತ ಆರೋಗ್ಯ ವಿಭಾಗ ಇವುಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಬಂಟ್ವಾಳ ತಾಲೂಕಿನ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಸಭಾ ಭವನದಲ್ಲಿ ಮಂಗಳವಾರ ಜರಗಿತು.

ಬಂಟ್ವಾಳ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಇದರ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರಗಳು ವರದಾನವಾಗಿದ್ದು, ಸ್ಪೆಷಾಲಿಟಿ ಆಸ್ಪತ್ರೆಗಳ ವೈದ್ಯಕೀಯ ಸೇವೆ ಊರಲ್ಲೇ ಲಭ್ಯವಾಗುತ್ತದೆ. ಜನತೆ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಜನ ಶಿಕ್ಷಣ ಟ್ರಸ್ಟ್ ಮುಡಿಪು ಇದರ ನಿರ್ದೇಶಕ ಶೀನ ಶೆಟ್ಟಿ, ಅರಳ ಗ್ರಾಮ ಪಂಚಾಯತ್ ಅಧ್ಯಕ್ಷೆ ತುಂಗಮ್ಮ, ಹಾಗೂ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ವೈದ್ಯ ಡಾ. ಧರ್ಣಪ್ಪ ಪೂಜಾರಿ, ಡಾ. ರಾಜೇಶ್,  ಆಲ್ ಕಾರ್ಗೊ ಲಾಜಿಸ್ಟಿಕ್ ಯೋಜನಾ ಸಂಯೋಜಕ ವಿಲಿಯಂ ಸಾಮ್ಯುವೆಲ್, ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಅವಿಲ್ ಮಿನೇಜಸ್, ಕಾರ್ಯದರ್ಶಿ ಮೇರಿ ಶ್ರುತಿ ಮಾಡ್ತಾ, ಸದಸ್ಯರಾದ ರಾಮಣ್ಣ ರೈ, ಸುಮಿತ್ರಾ ಆರ್. ಶೆಟ್ಟಿಗಾರ್, ಗ್ರಾಪಂ ಸದಸ್ಯ ಲಕ್ಷ್ಮಿ ಶೀಧರ ಶೆಟ್ಟಿ, ಸುಗ್ರಾಮ ಜಾಗೃತಿ ವೇದಿಕೆ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.  

ಪ್ರಜ್ಞಾ ಸಲಹಾ ಕೇಂದ್ರದ ವಲಯ ಸಂಯೋಜಕ ಅಶೋಕ್ ಸ್ವಾಗತಿಸಿದರು. ರೋಟರಿ ಕ್ಲಬ್ ಕೋಶಾಧಿಕಾರಿ ರಾಮಚಂದ್ರ ಶೆಟ್ಟಿಗಾರ್ ವಂದಿಸಿದರು. ಪ್ರಜ್ಞಾ ಸಲಹಾ ಕೇಂದ್ರದ ವಲಯ ಸಂಯೋಜಕಿ  ರೇಶ್ಮಾ ಕಾರ್ಯಕ್ರಮ ನಿರೂಪಿಸಿದರು. ಅಂಕಿತಾ, ಆಕಾಶ್ ಸಹಕರಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X