Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಯುರ್ವೇದದಲ್ಲಿ ಸಂಶೋಧನೆಯ ಕಲ್ಪನೆಯೇ...

ಆಯುರ್ವೇದದಲ್ಲಿ ಸಂಶೋಧನೆಯ ಕಲ್ಪನೆಯೇ ಸಂತಸದ ವಿಷಯ: ಡಾ. ಬಿ ಎಸ್ ಶ್ರೀಧರ

ವಾರ್ತಾಭಾರತಿವಾರ್ತಾಭಾರತಿ11 July 2019 10:44 PM IST
share
ಆಯುರ್ವೇದದಲ್ಲಿ ಸಂಶೋಧನೆಯ ಕಲ್ಪನೆಯೇ ಸಂತಸದ ವಿಷಯ: ಡಾ. ಬಿ ಎಸ್ ಶ್ರೀಧರ

ಮೂಡುಬಿದಿರೆ, ಜೂ 11: ‘ಆಯುರ್ವೇದದಲ್ಲಿ ಸಂಶೋಧನೆಯ ಕಲ್ಪನೆಯೇ ಒಂದು ಸಂತಸದ ವಿಷಯ. ಆಧುನಿಕ ವಿಜ್ಞಾನಕ್ಕೆ  ಹೋಲಿಸಿದಾಗ, ಆಯುರ್ವೇದದಲ್ಲಿನ ಸಂಶೋಧನೆ ಬಹಳ ಕಷ್ಟದ ಸಂಗತಿ. ಆದರೂ ಈ ವಿಷಯದಲ್ಲಿ ಹೆಚ್ಚಿನ ಸಂಶೋಧನೆಗಳು ಏರ್ಪಟ್ಟು ಮನುಕುಲಕ್ಕೆ ಅನುಕೂಲವಾಗುವಂತಾಗಬೇಕು ಎಂದು  ಕರ್ನಾಟಕ ಸರ್ಕಾರದ ಆಯುಷ್ ವೈದ್ಯಕೀಯ ವಿಜ್ಞಾನದ ಸಹ ನಿರ್ದೇಶಕರಾದ ಡಾ. ಬಿ ಎಸ್ ಶ್ರೀಧರ ತಿಳಿಸಿದರು.

ಅವರು ಗುರುವಾರ ವಿದ್ಯಾಗಿರಿಯ ಡಾ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜಿನ ವತಿಯಿಂದ ನಡೆದ ‘ಅಡ್ವಾನ್ಸ್ ಇನ್ ರಿಸರ್ಚ ಆ್ಯಂಡ್ ಡೆವಲಪ್ಮೆಂಟ್-2019’ ಒಂದು ದಿನದ ವಿಚಾರ ಸಂಕಿರಣ ಹಾಗೂ ‘ಆತ್ಮ’ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಕೇರಳ ರಾಜ್ಯವು ಆಯುರ್ವೇದದ ಔಷಧಕ್ಕೆ  ದೇಶದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಅದಕ್ಕೆ  ಕಾರಣ ಇಲ್ಲಿನ ಜನರಲ್ಲಿ ಆಯುರ್ವೇದದ ಬಗೆಗಿನ ಜಾಗೃತಿ ಹಾಗೂ ಏಕರೀತಿಯ ಚಿಕಿತ್ಸಾ ವ್ಯವಸ್ಥೆ. ಆದರೆ ಬೇರೆ ರಾಜ್ಯಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ವಿಭಿನ್ನವಾದ್ದರಿಂದ ಅಷ್ಟೊಂದು ಸಾಫಲ್ಯತೆಯನ್ನು ಪಡೆದಿಲ್ಲ ಎಂದರು.

ಪ್ರಪಂಚದ ಪ್ರತಿಷ್ಟಿತ  ನೊಬೆಲ್ ಪ್ರಶಸ್ತಿಯು ಕಳೆದ 2016, 2017 ಹಾಗೂ 2018ರ ಸಾಲಿನಲ್ಲಿ ವೈದ್ಯಕೀಯ ಶಾಸ್ತ್ರಕ್ಕೆ ನೀಡಿದ ಪ್ರಶಸ್ತಿಯು ಆಯುರ್ವೇದ ಶಾಸ್ತ್ರವನ್ನು ಅವಲಂಬಿಸಿರುವುದು ಉಲ್ಲೇಖನೀಯ ಎಂದರು.

ಕೇಂದ್ರ ಸರ್ಕಾರ, ಆಯುಷ್ ಸಚಿವಾಲಯ ಹಾಗೂ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯ ಆಯುರ್ವೇದದ ಬಗೆಗಿನ ಸಂಶೋಧನಗೆ ಸಾಕಷ್ಟು ಹಣವನ್ನು ಬಿಡುಗಡೆಗೊಳಿಸಿದರೂ, ಸಂಶೋಧನೆ ನಡೆಸುವವರ ಸಂಖ್ಯೆ ವಿರಳವಾಗಿದ್ದು, ಅದರಲ್ಲೂ ಸಲ್ಲಿಸಿದ ಅರ್ಜಿಗಳ ಗುಣಮಟ್ಟವು ಕಳಪೆಯಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ,  ಮೆಲುಕೋಟೆಯ ಅಕಾಡೆಮಿ ಆಫ್ ಸಂಸ್ಕøತ ರಿಸರ್ಚನ ಮಾಜಿ ನಿರ್ದೇಶಕ ಎಮ್.ಎ. ಲಕ್ಷ್ಮಿ ಆಚಾರ್ ಮಾತನಾಡಿ, ಸಾಹಿತ್ಯಿಕ ಸಂಶೋಧನೆ ಆಯುರ್ವೇದ ವಿಷಯದಲ್ಲಿ ಬಹಳ ವಿರಳವಿದ್ದು, ಈ ಕ್ಷೇತ್ರದಲ್ಲಿ ಸಂಶೋಧನೆಗೆ ವಿಫುಲ ಅವಕಾಶವಿದೆ. ಆಯುರ್ವೇದದ ವಿಷಯಕ್ಕೆ ಸಂಬಂದಪಟ್ಟಂತೆ 30 ಮಿಲಿಯನ್‍ಗೂ ಅಧಿಕ ಹಸ್ತಪ್ರತಿಗಳಿದ್ದು, ಇದರಲ್ಲಿ ಶೇಕಡಾ 10 ರಷ್ಟೂ ಜನರಿಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದರು. ಇತ್ತೀಚಿನ ದಿನಗಳಲ್ಲಿ ನಾವು ಆಯುರ್ವೇದ ಡಾಕ್ಟರ್ ಅನ್ನು ನೋಡಬಹುದೆ ಹೊರತು ಆಯುರ್ವೇದ ವಿದ್ವಾಂಸರನ್ನಲ್ಲ. ಆ ಹಿನ್ನಲೆಯಲ್ಲಿ ಡಾ. ಮೋಹನ್ ಆಳ್ವ ಭಾರತೀಯ ಆಯುರ್ವೇದ ಶಾಸ್ತ್ರವನ್ನು ಬಲಪಡಿಸುವ  ಭಾರತೀಯ ವಿಜ್ಞಾನ ವಿಕಾಸ ಪರಿಷತ್ ಎಂಬ  ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸುವ ಮನಸ್ಸು ಮಾಡಬೇಕು. ಆ ಮೂಲಕ ಭಾರತೀಯ, ಪರಿಸರ ಸ್ನೇಹಿ, ಕಡಿಮೆ ಖರ್ಚಿನ, ಸರಳತೆಯ, ಸುಸ್ಥಿರ ವಿಜ್ಞಾನ ತಂತ್ರಜ್ಞಾನದ ಸಂಶೋಧನೆಗಳಾಗಬೇಕು ಎಂದರು.

ಕಾರ್ಯಕ್ರಮದಲ್ಲಿ  ಅಮೆರಿಕಾದ ಮಿಸೌರಿ ವೈದ್ಯಕೀಯ ವಿಶ್ವವಿದ್ಯಾಲಯದ ಇನ್ಸಿಟಿಟ್ಯೂಟ್ ಆಫ್ ಗ್ರೀನ್ ನ್ಯಾನೋ ಟೆಕ್ನಾಲಜಿ ವಿಭಾಗದ ನಿರ್ದೇಶಕ ಡಾ ಕಟ್ಟೇಶ್ ವಿ ಕಟ್ಟಿ,  ಉಡುಪಿಯ ಎಸ್ ಡಿ ಎಮ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ  ಡಾ. ಜಿ. ಶ್ರೀನಿವಾಸ ಆಚಾರ್ಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವ, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ ಝೆನಿಕಾ ಡಿಸೋಜಾ, ಕಾರ್ಯಕ್ರಮದ ಸಂಯೋಜಕ ಡಾ ಸುಬ್ರಮಣ್ಯ ಪದ್ಯಾಣ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ.  ಗೀತಾ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X