Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪತ್ರಕರ್ತರ ಮೇಲೆ ದೌರ್ಜನ್ಯ ನಡೆಸುವ...

ಪತ್ರಕರ್ತರ ಮೇಲೆ ದೌರ್ಜನ್ಯ ನಡೆಸುವ ದೇಶಗಳು ‘ರಾಜತಾಂತ್ರಿಕ ಬೆಲೆ’ ತೆರಬೇಕು

ಬ್ರಿಟಿಶ್ ವಿದೇಶ ಕಾರ್ಯದರ್ಶಿ ಜೆರೆಮಿ ಹಂಟ್

ವಾರ್ತಾಭಾರತಿವಾರ್ತಾಭಾರತಿ11 July 2019 11:04 PM IST
share
ಪತ್ರಕರ್ತರ ಮೇಲೆ ದೌರ್ಜನ್ಯ ನಡೆಸುವ ದೇಶಗಳು ‘ರಾಜತಾಂತ್ರಿಕ ಬೆಲೆ’ ತೆರಬೇಕು

ಲಂಡನ್, ಜು. 11: ಪತ್ರಕರ್ತರ ಮೇಲೆ ದೌರ್ಜನ್ಯ ನಡೆಸುವ ದೇಶಗಳು ‘ರಾಜತಾಂತ್ರಿಕ ಬೆಲೆ’ಯನ್ನು ಕೊಡಬೇಕು ಎಂದು ಬ್ರಿಟಿಶ್ ವಿದೇಶ ಕಾರ್ಯದರ್ಶಿ ಜೆರೆಮಿ ಹಂಟ್ ಹೇಳಿದ್ದಾರೆ. ಅದೇ ವೇಳೆ, ಉದಾರವಾದಿ ಪ್ರಜಾಸತ್ತೆಗಳೂ ‘ತಾವು ಉಪದೇಶ ಮಾಡುವುದನ್ನು ಪಾಲಿಸಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ಸ್ವಾತಂತ್ರ್ಯದ ಬಗ್ಗೆ ಬುಧವಾರ ನಡೆದ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.

ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿಯ ಹತ್ಯೆ, ಚೀನಾ ಮತ್ತು ವಿಯೆಟ್ನಾಮ್‌ಗಳಲ್ಲಿ ಮಾನವಹಕ್ಕುಗಳ ಕಾರ್ಯಕರ್ತರನ್ನು ಜೈಲಿಗೆ ಹಾಕುತ್ತಿರುವುದು ಮತ್ತು ಮೆಕ್ಸಿಕೊದಲ್ಲಿ ನಡೆಯುತ್ತಿರುವ ಪತ್ರಕರ್ತರ ಕೊಲೆಗಳ ಬಗ್ಗೆಯೂ ಪ್ರಸ್ತಾಪಿಸಿದರು.

 ‘‘ನಾವು ಜೊತೆಯಾಗಿ ಕೆಲಸ ಮಾಡಿದರೆ, ದೌರ್ಜನ್ಯಗಳ ವಿರುದ್ಧ ಹೋರಾಡಬಹುದಾಗಿದೆ ಹಾಗೂ ಪತ್ರಕರ್ತರಿಗೆ ಹಾನಿ ಮಾಡುವ ಹಾಗೂ ತಮ್ಮ ಕೆಲಸ ಮಾಡಿರುವುದಕ್ಕಾಗಿ ಅವರನ್ನು ಜೈಲಿಗೆ ಹಾಕುವವರ ವಿರುದ್ಧ ಯಶಸ್ವಿಯಾಗಬಹುದಾಗಿದೆ’’ ಎಂದರು.

ಬ್ರಿಟನ್ ಕೆನಡದ ಜೊತೆ ಜಂಟಿಯಾಗಿ ಲಂಡನ್ ಸಮ್ಮೇಳನವನ್ನು ಏರ್ಪಡಿಸಿದೆ. ಇದರಲ್ಲಿ ಸುಮಾರು 100 ದೇಶಗಳ 60 ಸಚಿವರು, ಸುಮಾರು 1,500 ಪತ್ರಕರ್ತರು, ಹೋರಾಟಗಾರರು ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದಾರೆ.

ಮಾಧ್ಯಮಗಳ ಮೇಲಿನ ದಾಳಿ: ಟ್ರಂಪ್‌ಗೆ ಅಮಲ್ ಕ್ಲೂನಿ ಖಂಡನೆ

ಇದೇ ಸಮಾವೇಶದಲ್ಲಿ ಮಾತನಾಡಿದ ಅಂತರ್‌ರಾಷ್ಟ್ರೀಯ ಮಾನವಹಕ್ಕುಗಳ ವಕೀಲೆ ಅಮಲ್ ಕ್ಲೂನಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ರಕರ್ತರ ಬಗ್ಗೆ ನೀಡುವ ಅತಿರಂಜಿತ ಹೇಳಿಕೆಗಳು ಜಗತ್ತಿನಾದ್ಯಂತ ಪತ್ರಕರ್ತರನ್ನು ಅಪಾಯಕ್ಕೆ ಗುರಿಮಾಡಿವೆ ಎಂದು ಅಭಿಪ್ರಾಯಪಟ್ಟರು.

ಅಮಲ್ ಕ್ಲೂನಿಯನ್ನು ಬ್ರಿಟಿಶ್ ವಿದೇಶ ಸಚಿವ ಜೆರೆಮಿ ಹಂಟ್ ‘ಮಾಧ್ಯಮ ಸ್ವಾತಂತ್ರದ ವಿಶೇಷ ರಾಯಭಾರಿ’ಯಾಗಿ ನೇಮಿಸಿರುವುದನ್ನು ಸ್ಮರಿಸಬಹುದಾಗಿದೆ.

‘‘ಇಂದು ಜೇಮ್ಸ್ ಮ್ಯಾಡಿಸನ್ (1809ರಿಂದ 1817ರವರೆಗೆ ಅಧಿಕಾರದಲ್ಲಿದ್ದ ಅಮೆರಿಕದ ನಾಲ್ಕನೇ ಅಧ್ಯಕ್ಷ ಹಾಗೂ ರಾಜತಾಂತ್ರಿಕ ಮುತ್ಸದ್ದಿ)ರ ದೇಶದಲ್ಲಿ ಮಾಧ್ಯಮಗಳನ್ನು ಬಲಿಪಶುಮಾಡುವ ಹಾಗೂ ಜಗತ್ತಿನಾದ್ಯಂತ ಕೆಲಸ ಮಾಡುತ್ತಿರುವ ಪ್ರಾಮಾಣಿಕ ಪತ್ರಕರ್ತರನ್ನು ಅಪಾಯಕ್ಕೆ ಗುರಿಪಡಿಸುವ ನಾಯಕ ಇದ್ದಾರೆ’’ ಎಂದು ಕ್ಲೂನಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X