Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 17ನೇ ಯುವತಿಯ ಕೊಲೆ ಪ್ರಕರಣ: ಸೈನೆಡ್...

17ನೇ ಯುವತಿಯ ಕೊಲೆ ಪ್ರಕರಣ: ಸೈನೆಡ್ ಮೋಹನ್ ವಿರುದ್ಧದ ಆರೋಪ ಸಾಬೀತು

ವಾರ್ತಾಭಾರತಿವಾರ್ತಾಭಾರತಿ12 July 2019 6:46 PM IST
share
17ನೇ ಯುವತಿಯ ಕೊಲೆ ಪ್ರಕರಣ: ಸೈನೆಡ್ ಮೋಹನ್ ವಿರುದ್ಧದ ಆರೋಪ ಸಾಬೀತು

ಮಂಗಳೂರು, ಜು.12: ಯುವತಿಯರ ಸರಣಿ ಹಂತಕ, ಸೈನೆಡ್ ಮೋಹನ್ ಕುಮಾರ್ ವಿರುದ್ಧದ ಕಾಸರಗೋಡು ಮಂಜೇಶ್ವರ ಯುವತಿಯ ಕೊಲೆ ಪ್ರಕರಣ ಶುಕ್ರವಾರ ಮಂಗಳೂರು ನ್ಯಾಯಾಲಯದಲ್ಲಿ ಸಾಬೀತಾಗಿದೆ.

ಇದು 17ನೇ ಕೊಲೆ ಪ್ರಕರಣವಾಗಿದ್ದು, ಜು.18ರಂದು ಅಂತಿಮ ವಿಚಾರಣೆ ನಡೆದು ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟವಾಗುವ ಸಾಧ್ಯತೆಯಿದೆ.
ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ವಿಚಾರಣೆ ನಡೆದಿದ್ದು, ನ್ಯಾಯಾಧೀಶ ಸೈಯಿದುನ್ನೀಸ ಶುಕ್ರವಾರ ತೀರ್ಪನ್ನು ಕಾಯ್ದಿರಿಸಿದ್ದಾರೆ.

ಪ್ರಕರಣ ವಿವರ

ಕಾಸರಗೋಡಿನ ಪೈವಳಿಕೆ ಗ್ರಾಮದ 26 ವರ್ಷದ ಯುವತಿಯನ್ನು ಸೈನೆಡ್ ಮೋಹನ್, ತನ್ನ ಹೆಸರು ಸುಧಾಕರ ಎಂದು ಪರಿಚಯಿಸಿಕೊಂಡಿದ್ದ. ತಾನು ವಿಮಾ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಯುವತಿಯನ್ನು ನಂಬಿಸಿದ್ದ. ಪೈವಳಿಕೆಯ ಮನೆಯೊಂದರಲ್ಲಿ ಕೆಲಸಕ್ಕೆ ಇದ್ದ ಯುವತಿಯನ್ನು 2006ರ ಜೂನ್ 20ರಂದು ಮಂಗಳೂರಿಗೆ ಕರೆಸಿಕೊಂಡಿದ್ದ. ವಿವಾಹಕ್ಕೆ ವರನ ನೋಡುವ ಕಾರಣ ಆಕೆಯ ಜೊತೆಗೆ ಅತ್ತೆ ಕೂಡ ಮಂಗಳೂರಿಗೆ ಬಂದಿದ್ದರು.

ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಲ್ಲಿ ಈ ಮೂರು ಮಂದಿ ಭೇಟಿಯಾಗಿ ವಿವಾಹದ ಬಗ್ಗೆ ಮಾತುಕತೆ ನಡೆಸಿದ್ದರು. ಬಳಿಕ ಯುವತಿಯ ಜೊತೆಗೆ ಸುಧಾಕರ ಬಸ್‌ವೊಂದನ್ನು ಹತ್ತಿ ಹೋಗಿರುವುದನ್ನು ಆಕೆಯ ಅತ್ತೆ ನೋಡಿದ್ದರು. ಅದು ಬಿಟ್ಟರೆ, ಬಳಿಕ ಅವರು ಎಲ್ಲಿಗೆ ಹೋಗಿದ್ದರು ಎನ್ನುವುದು ಅತ್ತೆಗೆ ಗೊತ್ತಿರಲಿಲ್ಲ.
ಯುವತಿಯನ್ನು ನೇರವಾಗಿ ಮಡಿಕೇರಿಗೆ ಕರೆದುಕೊಂಡ ಹೋದ ಮೋಹನ್‌ ಕುಮಾರ್, ಅಲ್ಲಿ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ್ದನು. ಮರುದಿನ ಆಕೆಯನ್ನು ಅತ್ಯಾಚಾರಗೈದು ಸೈನೆಡ್ ನೀಡಿ ಕೊಲೆಗೆ ಕಾರಣನಾಗಿದ್ದ. ಕೊಲೆಯಾದ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನಾಭರಣವನ್ನು ಮೋಹನ್ ಕುಮಾರ್ ದೋಚಿ ಮಂಗಳೂರಿನ ಫೈನಾನ್ಸ್‌ವೊಂದರಲ್ಲಿ ಅಡವಿರಿಸಿದ್ದನು.

2009ರ ಅ. 21ರಂದು ಬಂಟ್ವಾಳದಲ್ಲಿ ಬಂಧಿತನಾದ ಮೋಹನ್ ಕುಮಾರ್ ಸೈನೆಡ್ ನೀಡಿ ಕೊಲೆ ಮಾಡಿರುವುದನ್ನು ಬಾಯಿಬಿಟ್ಟಿದ್ದನು. ಈ ವೇಳೆ ಮಂಜೇಶ್ವರದ ಯುವತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಪೊಲೀಸರು ಆತನನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದರು. ಮಂಜೇಶ್ವರ ಪೊಲೀಸ್ ಠಾಣೆಗೆ ಕರೆತಂದ ಮೋಹನ್ ಕುಮಾರನನ್ನು ನೋಡಿದ ಮೃತ ಯುವತಿಯ ಅತ್ತೆ, ‘ಈತನೇ ಸುಧಾಕರ’ ಎಂದು ಗುರುತು ಹಿಡಿದಿದ್ದರು. ಅಲ್ಲದೆ, ಮೋಹನ್ ಕುಮಾರ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ಸಾಕ್ಷವನ್ನು ಕೂಡ ತನಿಖೆಗೆ ಬಳಸಿಕೊಳ್ಳಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ 41 ಸಾಕ್ಷ, 50 ದಾಖಲೆ ಹಾಗೂ 42 ಸೊತ್ತುಗಳನ್ನು ಪರಿಶೀಲನೆ ನಡೆಸಲಾಗಿದೆ. ಆರೋಪಿ ಮೋಹನ್ ಕುಮಾರ್ ವಿರುದ್ಧ ಸೆಕ್ಷನ್ 328 (ವಿಷ ನೀಡಿ ಕೊಲೆ), 392 (ಆಭರಣ ದರೋಡೆ), 394 (ಬಲವಂತ ವಿಷ ಪ್ರಾಶನ), 302 (ಕೊಲೆ), 417 (ಮೋಸ), 201 (ಸಾಕ್ಷನಾಶ) ಆರೋಪವನ್ನು ಹೊರಿಸಿದ್ದು, ಈ ಆರೋಪಗಳು ಸಾಬೀತಾಗಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ಶಿಕ್ಷೆ ಪ್ರಮಾಣದ ತೀರ್ಪನ್ನು ಜು.18ರ ವಿಚಾರಣೆಗೆ ಕಾಯ್ದಿರಿಸಲಾಗಿದೆ.

ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಒ.ಎಂ.ಕ್ರಾಸ್ತಾ ವಾದಿಸಿದ್ದರು.

ವೀಡಿಯೊ ಕಾನ್ಫರೆನ್ಸ್ ವಿಚಾರಣೆ

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರುವ ಆರೋಪಿ ಮೋಹನ್ ಕುಮಾರ್‌ನನ್ನು ಅಲ್ಲಿಂದಲೇ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ಆರೋಪಿ ಮೋಹನ್ ಕುಮಾರ್, ತಾನು ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾನೆ. ಸರಕಾರದ ಪರವಾಗಿ ನ್ಯಾಯವಾದಿಯನ್ನು ನೇಮಿಸಿಕೊಳ್ಳುವಂತೆ ನ್ಯಾಯಾಧೀಶರು ಆತನಿಗೆ ಹೇಳಿದ್ದು, ಅದಕ್ಕೆ ಆತ ನಿರಾಕರಿಸಿ, ತಾನೇ ಸ್ವಯಂ ವಾದ ಮುಂದುವರಿಸುವುದಾಗಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X