Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳುವ...

ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳುವ ರೀತಿ ಆತಂಕಕಾರಿ: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ12 July 2019 8:05 PM IST
share
ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳುವ ರೀತಿ ಆತಂಕಕಾರಿ: ಅಮೆರಿಕ

 ನ್ಯೂಯಾರ್ಕ್, ಜು.12: ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳುವ ರೀತಿಯ ಬಗ್ಗೆ ಅಮೆರಿಕ ಸಂಸತ್ತು ಕಳವಳಗೊಂಡಿದೆ ಎಂದು ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್‌ನ ಸ್ಪೀಕರ್ ನ್ಯಾನ್ಸಿ ಪೆಲೋಸಿ ಹೇಳಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿ ಜಾನ್ ಚೇಂಬರ್ಸ್(ಭಾರತ-ಅಮೆರಿಕ ವ್ಯೂಹಾತ್ಮಕ ಸಹಭಾಗಿತ್ವ ವೇದಿಕೆ)ನೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನ್ಯಾನ್ಸಿ, “ಅಮೆರಿಕ ಸಂಸತ್ತಿನ ಜಂಟಿ ಅಧಿವೇಶನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ನಾವು ಹೆಮ್ಮೆಪಟ್ಟಿದ್ದೇವೆ. ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳುವ ರೀತಿಯ ಬಗ್ಗೆ ನಮಗೆ ಆತಂಕವಿತ್ತು ಮತ್ತು ಈಗಲೂ ಇದೆ ಎಂಬುದನ್ನು ನಾವು ಆಗಲೂ ಹೇಳಿದ್ದೆವು ಮತ್ತು ಈಗಲೂ ಹೇಳುತ್ತೇವೆ” ಎಂದು ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದ ಕುರಿತು ಈ ಸಂವಾದ ಕಾರ್ಯಕ್ರಮ ನಡೆದಿತ್ತು. ಭಾರತ ಮತ್ತು ಅಮೆರಿಕ ಸಂಬಂಧದ ಕುರಿತು ಉಲ್ಲೇಖಿಸಿದ ಅವರು, “ಉಭಯ ದೇಶಗಳ ಸಂಬಂಧ ಇಡೀ ವಿಶ್ವದ ಮಹತ್ವಕ್ಕೆ ಉತ್ತೇಜನ ನೀಡಲಿದೆ, ಇನ್ನಷ್ಟು ಮಾರುಕಟ್ಟೆಗಳನ್ನು ಸೃಜಿಸಲು ಹಾಗೂ ಹೆಚ್ಚಿನ ಉದ್ಯಮಶೀಲತೆಗೆ ಅವಕಾಶ ದೊರಕಲಿದೆ” ಎಂದು ಹೇಳಿದ್ದಾರೆ.

ಮೋದಿಯವರ ವಾಕ್ಚಾತುರ್ಯ ಕೌಶಲ್ಯವನ್ನು ಶ್ಲಾಘಿಸಿದ ಅವರು, ಮಾಜಿ ಪ್ರಧಾನಿ ಬರಾಕ್ ಒಬಾಮ ಜೊತೆ ಭಾರತಕ್ಕೆ ಭೇಟಿ ನೀಡಿದಾಗ ಮೋದಿ ಮಾಡಿದ ಭಾಷಣ ತಾನು ಕೇಳಿದ ಅತ್ಯದ್ಭುತ ಭಾಷಣಗಳಲ್ಲಿ ಒಂದಾಗಿತ್ತು ಎಂದಿದ್ದಾರೆ. ತನಗೆ ಗಾಂಧಿ ಸಿದ್ಧಾಂತದಲ್ಲಿ ವಿಶ್ವಾಸವಿದೆ. ಗಾಂಧಿಯವರು ಅಮೆರಿಕದ ಶಾಂತಿ ಹೋರಾಟದ ಆಧ್ಯಾತ್ಮಿಕ ನಾಯಕರಾಗಿದ್ದರು ಎಂದು ಪೆಲೋಸಿ ಹೇಳಿದರು. ಚೀನಾದೊಂದಿಗಿನ ಅಮೆರಿಕದ ಸಂಬಂಧ ಸಂಕೀರ್ಣವಾಗಿದೆ. ಚೀನಾವನ್ನು ಗಮನಿಸಿದರೆ ಬೆಳೆಯುತ್ತಿರುವ ಮಧ್ಯಮ ವರ್ಗ ಹಾಗೂ ಬೆಳೆಯುತ್ತಿರುವ ಆರ್ಥಿಕತೆಯನ್ನು ಕಾಣಬಹುದು. ಆದರೆ, ಚೀನಾ ಅತ್ಯಂತ ದಮನಕಾರಿ ದೇಶವೂ ಆಗಿದೆ. ಮೂರು ಮಿಲಿಯ ಉಯಿಘರ್ ಜನತೆಯನ್ನು ‘ಶಿಕ್ಷಣ ಶಿಬಿರ’ದಲ್ಲಿ ಇಡಲಾಗಿದೆ. ಹಾಂಕಾಂಗ್‌ನಲ್ಲಿ ಪ್ರಜಾಪ್ರಭುತ್ವದ ಶಕ್ತಿಹೀನಗೊಳಿಸುತ್ತಿದ್ದಾರೆ ಎಂದರು. ಆದರೆ ಚೀನಾ ಹೊಗೆ ಮಾಲಿನ್ಯ ನಿಯಂತ್ರಣಕ್ಕೆ ಬೃಹತ್ ಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X