Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಧಾನಿಯ ವಾಯು ಶುದ್ಧೀಕರಣಕ್ಕೆ...

ರಾಜಧಾನಿಯ ವಾಯು ಶುದ್ಧೀಕರಣಕ್ಕೆ ಬಿಬಿಎಂಪಿ ತೀರ್ಮಾನ; 500 ವಾಯು ಶುದ್ಧೀಕರಣ ಯಂತ್ರ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ12 July 2019 11:08 PM IST
share

ಬೆಂಗಳೂರು, ಜು.12: ರಾಜಧಾನಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಬಿಬಿಎಂಪಿ ನಗರದ ಪ್ರಮುಖ 500 ಜಂಕ್ಷನ್‌ಗಳಲ್ಲಿ ವಾಯು ಶುದ್ಧೀಕರಣ ಯಂತ್ರಗಳನ್ನು ಅಳವಡಿಸಲು ತೀರ್ಮಾನಿಸಿದೆ.

ಎ ಟೆಕ್ ಟ್ರೊನ್ ಎಂಬ ಕಂಪೆನಿಯು ಹಡ್ಸನ್ ವೃತ್ತದಲ್ಲಿ ಫೆ.28ರಂದು ಪ್ರಾಯೋಗಿಕವಾಗಿ ವಾಯು ಶುದ್ಧೀಕರಣ ಯಂತ್ರ ಅಳವಡಿಸಿದ್ದು, ಇದರಿಂದ ಮಾಲಿನ್ಯ ನಿಯಂತ್ರಣಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅದೇ ಕಂಪನಿಗೆ ವಾಹನ ದಟ್ಟಣೆ ಹೆಚ್ಚಿರುವ 500 ಜಂಕ್ಷನ್‌ಗಳಲ್ಲಿ ಯಂತ್ರಗಳ ಅಳವಡಿಕೆಗೆ ಅನುಮತಿ ನೀಡಲು ಬಿಬಿಎಂಪಿ ಸಮ್ಮತಿಸಿದೆ.

ವಾಯು ಶುದ್ಧೀಕರಣ ಯಂತ್ರ ಅಳವಡಿಕೆಗೆ ಪಾಲಿಕೆಯಿಂದ ನಯಾಪೈಸೆ ವೆಚ್ಚ ಮಾಡುತ್ತಿಲ್ಲ. ಬದಲಿಗೆ ಎ ಟೆಕ್ ಟ್ರೊನ್ ಕಂಪೆನಿಯೇ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯನ್ನು ಬಳಸಿಕೊಂಡು ಯಂತ್ರಗಳನ್ನು ಅಳವಡಿಕೆ ಮಾಡಲಿದೆ. ಆದರೆ, ವಾಣಿಜ್ಯ ಜಾಹೀರಾತಿಗೆ ಅವಕಾಶವಿರುವುದಿಲ್ಲ. ಈಗಾಗಲೇ ಕಂಪೆನಿಯು ಮಾಲಿನ್ಯ ಪ್ರಮಾಣ ಜಾಸ್ತಿ ಇರುವ ಜಂಕ್ಷನ್‌ಗಳನ್ನು ಗುರುತಿಸಿದೆ.

ನಗರದ ಹಲವು ಪ್ರದೇಶಗಳಲ್ಲಿ ಗಾಳಿಯಲ್ಲಿ ತೇಲಾಡುವ ಧೂಳಿನ ಕಣಗಳ ಪ್ರಮಾಣವು ಮಿತಿ ಮೀರಿದೆ. ಮೆಟ್ರೊ, ಚರಂಡಿ, ಕಟ್ಟಡ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಂದಾಗಿ ಧೂಳಿನ ಪ್ರಮಾಣವು ಜಾಸ್ತಿಯಾಗಿದ್ದು, ಉಸಿರಾಡಲು ಅಂಜುವಂತಹ ಸ್ಥಿತಿ ನಿರ್ಮಾಣಗೊಂಡಿದೆ.

ಯಂತ್ರದಲ್ಲಿ ಸಂಗ್ರಹವಾಗಿದ್ದ ಒಂದೂವರೆ ಕೆ.ಜಿ ಯಷ್ಟು ಧೂಳನ್ನು ಎರಡು ಸಲ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರಲ್ಲಿ ಪಿಎಂ 10 ಮತ್ತು ಪಿಎಂ 2.5 ಪ್ರಮಾಣವು ಹೆಚ್ಚಿರುವುದು ಕಂಡು ಬಂದಿದೆ. ಯಂತ್ರವು ಒಂದು ನಿಮಿಷಕ್ಕೆ 3,500 ಕ್ಯೂಬಿಕ್ ಗಾಳಿಯನ್ನು ಹೀರಿಕೊಂಡು ಶುದ್ಧೀಕರಿಸುತ್ತದೆ. ಈ ಯಂತ್ರದಿಂದ ಯಾವುದೇ ರೀತಿಯ ಶಬ್ದಮಾಲಿನ್ಯ ಇರುವುದಿಲ್ಲ ಎಂದು ಎ ಟೆಕ್ ಟ್ರೊನ್ ಸಂಸ್ಥೆಯ ಸಂಸ್ಥಾಪಕ ರಾಜೀವ್ ಕೃಷ್ಣ ತಿಳಿಸಿದರು.

ಒಂದು ತಿಂಗಳ ಬಳಿಕ ಯಂತ್ರಗಳನ್ನು ಅಳವಡಿಸುವ ಕೆಲಸವನ್ನು ಆರಂಭಿಸಲಾಗುವುದು. ಈಗಾಗಲೇ ಸಿಎಸ್‌ಆರ್ ನಿಧಿ ಕೋರಿ 10 ಕಂಪನಿಗಳಿಗೆ ಮನವಿ ಸಲ್ಲಿಸಲಾಗಿದೆ. ಒಂದು ವರ್ಷದಲ್ಲಿ ಯಂತ್ರಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ. ಯಂತ್ರದ ಬೆಲೆಯು 2 ಲಕ್ಷ ರೂ. ನಿಂದ 10 ಲಕ್ಷ ರೂ. ಇದೆ ಎಂದು ಮಾಹಿತಿ ನೀಡಿದರು.

ವಾಯು ಶುದ್ಧೀಕರಣ ಯಂತ್ರವು ವಾತಾವರಣದಲ್ಲಿ ಬೆರೆತು ಹೋಗಿರುವ ಧೂಳಿನ ಕಣ, ಹೊಗೆಯನ್ನೆಲ್ಲಾ ಹೀರಿಕೊಂಡು ಶುದ್ಧ ಗಾಳಿಯನ್ನು ಹೊರಬಿಡುತ್ತದೆ. ಆರು ಹಂತದಲ್ಲಿ ಗಾಳಿಯನ್ನು ಸೋಸುತ್ತದೆ. ಒಂದೊಂದು ಶೋಧಕವೂ (ಫಿಲ್ಟರ್) ಮಾಲಿನ್ಯಕಾರಕಗಳನ್ನು ಹಂತ ಹಂತವಾಗಿ ಸೋಸುತ್ತದೆ. ಕೊನೆಗೆ ಯಂತ್ರದ ತಳಭಾಗದಿಂದ ಶುದ್ಧ ಗಾಳಿ ಹೊರ ಬರುತ್ತದೆ.
-ರಾಜೀವ್ ಕೃಷ್ಣ, ಎ ಟೆಕ್ ಟ್ರೊನ್ ಸಂಸ್ಥೆಯ ಸಂಸ್ಥಾಪಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X