Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವ ಬ್ಯಾಂಕ್‌ನ ನೂತನ ವ್ಯವಸ್ಥಾಪನಾ...

ವಿಶ್ವ ಬ್ಯಾಂಕ್‌ನ ನೂತನ ವ್ಯವಸ್ಥಾಪನಾ ನಿರ್ದೇಶಕಿ, ಸಿಎಫ್‌ಒ ಆಗಿ ಅಂಶುಲಾ ಕಾಂತ್

ವಾರ್ತಾಭಾರತಿವಾರ್ತಾಭಾರತಿ12 July 2019 11:15 PM IST
share
ವಿಶ್ವ ಬ್ಯಾಂಕ್‌ನ ನೂತನ ವ್ಯವಸ್ಥಾಪನಾ ನಿರ್ದೇಶಕಿ, ಸಿಎಫ್‌ಒ ಆಗಿ ಅಂಶುಲಾ ಕಾಂತ್

ಹೊಸದಿಲ್ಲಿ, ಜು.12: ಭಾರತೀಯ ಸ್ಟೇಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿ ಅಂಶುಲಾ ಕಾಂತ್ ಅವರನ್ನು ವಿಶ್ವ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಆರ್ಥಿಕ ಅಧಿಕಾರಿ (ಸಿಎಫ್‌ಒ) ಆಗಿ ನೇಮಕ ಮಾಡಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಡೇವಿಡ್ ಮಲ್ಪಸ್ ಶುಕ್ರವಾರ ತಿಳಿಸಿದ್ದಾರೆ.

ಎಸ್‌ಬಿಐ ಸಿಎಫ್‌ಒ ಆಗಿ ಅಂಶುಲಾ ಅವರು 38 ಬಿಲಿಯನ್ ಡಾಲರ್ ಆದಾಯ ಮತ್ತು ಒಟ್ಟು 500 ಬಿಲಿಯನ್ ಡಾಲರ್ ಆಸ್ತಿಯನ್ನು ನಿಭಾಯಿಸಿದ್ದರು. ಸಂಸ್ಥೆಯನ್ನು ಪ್ರಬುದ್ಧವಾಗಿ ಮುನ್ನಡೆಸಿರುವ ಅವರು, ಬಂಡವಾಳ ಮೂಲವನ್ನು ಸುಧಾರಿಸಿದ್ದರು ಮತ್ತು ತನ್ನ ಅಧಿಕಾರದ ವ್ಯಾಪ್ತಿಯಲ್ಲಿದ್ದು, ಎಸ್‌ಬಿಐಯ ದೀರ್ಘಕಾಲೀನ ಸಾಮರ್ಥ್ಯದ ಮೇಲೆ ಗಮನಹರಿಸಿದ್ದರು. ಅಂಶುಲಾ 2018ರ ಸೆಪ್ಟೆಂಬರ್‌ನಿಂದ ವ್ಯವಸ್ಥಾಪನಾ ನಿರ್ದೇಶಕ ಮತ್ತು ಮಂಡಳಿ ಸದಸ್ಯರಾಗಿದ್ದರು ಎಂದು ವಿಶ್ವಬ್ಯಾಂಕ್ ತಿಳಿಸಿದೆ.

ಅಂಶುಲಾ ಅವರ ನೇಮಕದ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮಲ್ಪಸ್, ವಿಶ್ವ ಬ್ಯಾಂಕ್ ಸಮೂಹದ ವ್ಯವಸ್ಥಾಪನಾ ನಿರ್ದೇಶಕಿ ಮತ್ತು ಸಿಎಫ್‌ಒ ಆಗಿ ಅಂಶುಲಾ ಕಾಂತ್ ಅವರನ್ನು ನೇಮಕ ಮಾಡಿರುವುದು ಖುಷಿ ನೀಡಿದೆ. ಎಸ್‌ಬಿಐ ಸಿಎಫ್‌ಒ ಆಗಿ ವಿತ್ತೀಯ, ಬ್ಯಾಂಕಿಂಗ್ ಮತ್ತು ತಂತ್ರಜ್ಞಾನದ ಆವಿಷ್ಕಾರಿ ಬಳಕೆಯ 35 ವರ್ಷಗಳ ಅನುಭವವನ್ನು ಅವರು ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಇತರ ಹೊಣೆಗಾರಿಕೆಗಳ ಜೊತೆಗೆ, ಅಂಶುಲಾ ಅವರು ವಿತ್ತೀಯ ವರದಿಯ ಮೇಲುಸ್ತುವಾರಿ, ಅಪಾಯದ ನಿರ್ವಹಣೆ ಮತ್ತು ಐಡಿಎ ಮತ್ತು ಇತರ ಆರ್ಥಿಕ ಸಂಪನ್ಮೂಲಗಳ ಬಳಕೆಯ ವಿಷಯದಲ್ಲಿ ವಿಶ್ವಬ್ಯಾಂಕ್‌ನ ಸಿಇಒ ಜೊತೆಗೆ ನಿಕಟವಾಗಿ ಕಾರ್ಯನಿರ್ವಹಿಸಲಿದ್ದಾರೆ. ಎಸ್‌ಬಿಐಯಲ್ಲಿ ಅಪಾಯ, ಅನುಸರಣೆ ಮತ್ತು ಸುಸ್ತಿ ಸಾಲಗಳಿಗೆ ನೇರ ಜವಾಬ್ದಾರಿ ಹೊಂದಿದ್ದ ಅಂಶುಲಾ ಅವರು ಬ್ಯಾಂಕ್‌ನಾದ್ಯಂತ ಸಂಕಷ್ಟ ನಿಬಾವಣೆಯನ್ನು ಸಬಲಗೊಳಿಸುತ್ತಲೇ ಹೂಡಿಕೆಗೆ ಅವಕಾಶಗಳನ್ನು ಸೃಷ್ಟಿಸಿದ್ದರು.

ಅವರು ಲೇಡಿ ಶ್ರೀರಾಮ ಮಹಿಳಾ ಕಾಲೇಜಿನಲ್ಲಿ ಆರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದರೆ ದಿಲ್ಲಿ ಸ್ಕೂಲ್ ಆಫ್ ಇಕನಾಮಿಕ್ಸ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X