Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟೌನ್‍ಶಿಪ್ ಬಳಕೆಗೆ ಕಾನೂನಿನ ತೊಡಕಿದೆ;...

ಟೌನ್‍ಶಿಪ್ ಬಳಕೆಗೆ ಕಾನೂನಿನ ತೊಡಕಿದೆ; ಜನಾಭಿಪ್ರಾಯವೇ ಅಂತಿಮ: ಜಿಲ್ಲಾಧಿಕಾರಿ

ಕಳಸ ತಾಲೂಕು ಆಡಳಿತಕ್ಕೆ ಕುದುರೆಮುಖ ಟೌನ್‍ಶಿಪ್ ಬಳಕೆ ವಿಚಾರ

ವಾರ್ತಾಭಾರತಿವಾರ್ತಾಭಾರತಿ12 July 2019 11:46 PM IST
share
ಟೌನ್‍ಶಿಪ್ ಬಳಕೆಗೆ ಕಾನೂನಿನ ತೊಡಕಿದೆ; ಜನಾಭಿಪ್ರಾಯವೇ ಅಂತಿಮ: ಜಿಲ್ಲಾಧಿಕಾರಿ

ಚಿಕ್ಕಮಗಳೂರು, ಜು.12: ನೂತನ ಕಳಸ ತಾಲೂಕಿನ ಆಡಳಿತ ಕೇಂದ್ರವನ್ನು ಕುದುರೆಮುಖ ಟೌನ್‍ಶಿಪ್‍ನಲ್ಲಿ ಆರಂಭಿಸುವ ವಿಚಾರ ಕೇವಲ ಪ್ರಸ್ತಾವವೇ ಹೊರತು ನಿರ್ಧಾರವಲ್ಲ. ಈ ಪ್ರಸ್ತಾಪ ಅಂತಿಮವಲ್ಲ. ಸ್ಥಳೀಯ ಜನರ ಅಭಿಪ್ರಾಯವೇ ಅಂತಿಮ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕಳಸ ತಾಲೂಕು ಕೇಂದ್ರದ ಆಡಳಿತಕ್ಕಾಗಿ ಕುದುರೆಮುಖ ಟೌನ್‍ಶಿಪ್ ಬಳಕೆಯ ಜಿಲ್ಲಾಡಳಿತದ ಪ್ರಸ್ತಾವಕ್ಕೆ ಸ್ಥಳೀಯ ಜನರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುದುರೆಮುಖ ಟೌನ್‍ಶಿಪ್ ಸಂಬಂಧ ಕಾನೂನಿನ ತೊಡಕಿದೆ. ಅಲ್ಲದೇ ಅಭಯಾರಣ್ಯದ ವ್ಯಾಪ್ತಿಯಲ್ಲಿ ಟೌನ್‍ಶಿಪ್ ಇರುವುದರಿಂದ ಅರಣ್ಯ ಕಾನೂನಿನ ತೊಡಕು ತಾಲೂಕು ಕೇಂದ್ರಕ್ಕೆ ತೊಡಕಾಗಬಹುದು. ಆದ್ದರಿಂದ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೇವಲ ಪ್ರಸ್ತಾಪವನ್ನು ಸರಕಾರದ ಮುಂದಿಟ್ಟಿದೆಯಷ್ಟೆ. ಇದೇ ಅಂತಿಮವಲ್ಲ. ಈ ಸಂಬಂಧ ಸ್ಥಳೀಯ ಜನರೊಂದಿಗೆ ಸಭೆ ನಡೆಸಿ ಜನಾಭಿಪ್ರಾಯ ಸಂಗ್ರಹಿಸಲಾಗುವುದು. ಜನರ ಅಭಿಪ್ರಾಯದಂತೆ ಕಳಸ ತಾಲೂಕು ಕೇಂದ್ರಕ್ಕೆ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಚಿಕ್ಕಮಗಳೂರು ನಗರದಲ್ಲಿ ಅನಧೀಕೃತ ಕಟ್ಟಡಗಳ ನಿರ್ಮಾಣ ಸಂಬಂಧ ದೂರು ಬಂದಿದೆ. ಅನಧೀಕೃತ ಕಟ್ಟಡಗಳ ಸಂಬಂಧ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಸೂಕ್ತ ಸಮಯದಲ್ಲಿ ಅಗತ್ಯ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದ ಅವರು, ನಗರಸಭೆಗೆ ಸಾರ್ವಜನಿಕರಿಂದ ಸಂದಾಯವಾಗಬೇಕಿರುವ ನೀರು, ಕಂದಾಯ ಮತ್ತಿತರ ತೆರಿಗೆಗಳು ಸಂಗ್ರಹ ಬಾಕಿ ಇರುವುದು ತಿಳಿದಿದ್ದು, ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಬಾಕಿ ತೆರಿಗೆ ಸಂಗ್ರಹಕ್ಕೆ ಶೀಘ್ರ ಅಗತ್ಯಕ್ರಮವಹಿಸಲಾಗುವುದು ಎಂದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬಂದಿದ್ದು, ಈ ಗೌಡನಹಳ್ಳಿ ಸೇರಿದಂತೆ ಕೆಲ ಗ್ರಾಮಗಳಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ. ಕೆಲ ಗ್ರಾಮಗಳಲ್ಲಿ ವೈದ್ಯಾಧಿಕಾರಿಗಳ ತಂಡ ಶಿಬಿರ ನಡೆಸಿದ್ದು, ಸಾಂಕ್ರಾಮಿಕ ರೋಗಗಳು ನಿಯಂತ್ರಣಕ್ಕೆ ಬಂದಿವೆ ಎಂದ ಅವರು, ನಗರ ಸೇರಿದಂತೆ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ ರೋಗ ಪ್ರಕರಣಗಳು ಒಂದೆರೆಡು ಸಂಖ್ಯೆಯಲ್ಲಿ ಕಂಡು ಬಂದಿವೆ. ಮಳೆಗಾಲದಲ್ಲಿ ಹವಾಮಾನ ವೈಫರೀತ್ಯದಿಂದಾಗಿ ಜ್ವರದಂತಹ ಪ್ರಕರಣಗಳು ಹೆಚ್ಚು ಕಾಣಿಸಿಕೊಂಡಿವೆ. ಇಂತಹ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ಮಾಡದೇ ಶಂಕಿತ ಡೆಂಗ್ ರೋಗಿಗಳ ರಕ್ತದ ಮಾದರಿಗಳನ್ನು ಪ್ರಯೋಗಲಾಯಕ್ಕೆ ಕಳಿಸಿ ಪರೀಕ್ಷಿಸಲಾಗಿದೆ. ಇಂತಹ ನೂರು ಪ್ರಕರಣಗಳಲ್ಲಿ ಒಂದೆರೆಡು ಡೆಂಗ್ ರೋಗಗಳಿರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಡೆಂಗ್ ರೋಗದ ಪ್ರಕರಣಗಳು ತುಂಬಾ ಕಡಿಮೆ ಪ್ರಮಾಣದಲ್ಲಿದೆ ಎಂದರು. 

ನಗರ ವ್ಯಾಪ್ತಿಯಲ್ಲಿ ಸೊಳ್ಳೆಗಳ ಹಾವಳಿ ನಿಯಂತ್ರಣಕ್ಕೆ ಪಾಗಿಂಗ್ ಮಾಡುವ ಕಾರ್ಯ ನಡೆಯುತ್ತಿದೆ. ಪಾಗಿಂಗ್ ಕೆಲಸ ಸಮರ್ಪಕವಾಗಿ ಕೈಗೊಳ್ಳಲು ಟೈಂ ಟೇಬಲ್‍ನಂತೆ ಕಾರ್ಯನಿರ್ವಹಿಸಲು ಸೂಚಿಸಲಾಗುವುದು. ಅಲ್ಲದೇ ಚರಂಡಿ ಹಾಗೂ ಮನೆಗಳ ಸುತ್ತಮುತ್ತಲು ಸ್ವಚ್ಛತೆ ಕಾಯ್ದುಕೊಳ್ಳಲು, ಲಾರ್ವಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮೂಲಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮನೆಮನೆ ಭೇಟಿ ಮೂಲಕವೂ ಜಾಗೃತಿ ಮೂಡಿಸಲಾಗುತ್ತಿದೆ ಎಂದ ಅವರು, ನಗರದ ಕೆಲ ಬಡಾವಣೆಗಳಲ್ಲಿ ಚರಂಡಿಗಳ ಸ್ವಚ್ಛತೆಗೆ ನಗರಸಭೆ ಸಿಬ್ಬಂದಿಗೆ ಸೂಚಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಕಂದಾಯ, ಅರಣ್ಯ ಭೂಮಿ ಜಂಟಿ ಸರ್ವೆಕಾರ್ಯದ ಫೀಲ್ಡ್‍ವರ್ಕ್ ಬಹುತೇಕ ಪೂರ್ಣಗೊಂಡಿದ್ದು, ಪೇಪರ್ ವರ್ಕ್ ಬಾಕಿದೆ. ಸರ್ವೇ ವರದಿಯನ್ನು ಪರಿಶೀಲಿಸಿ ಕಂದಾಯ, ಅರಣ್ಯ ಭೂಮಿಯ ಲಬ್ಯತೆಯ ಪ್ರಮಾಣವನ್ನು ತಾಳೆಹಾಕಬೇಕಿದೆ. ಈ ಸಂಬಂಧ ಈಗಾಗಲೇ ಕಂದಾಯ, ಅರಣ್ಯಾಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಸಂಬಂಧ ಮುಂದಿನ ಸೋಮವಾರ ಮತ್ತೊಂದು ಸಭೆ ನಡೆಸಲಾಗುವುದು. ಶೀಘ್ರ ಜಂಟಿ ಸರ್ವೇ ಕಾರ್ಯದ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇದೇ ವೇಳೆ ತಿಳಿಸಿದರು.

ವಾಡಿಕೆಯಂತೆ ಜಿಲ್ಲೆಯಲ್ಲಿ ಇದುವರೆಗೂ 637 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಜುಲೈ ಮೊದಲವಾರದವರೆಗೆ 423 ಮಿ.ಮೀ. ಮಳೆಯಾಗಿದೆ. ಕಡೂರು ತಾಲೂಕು ವ್ಯಾಪ್ತಿಯಲ್ಲಿ ವಾಡಿಕೆಯಂತೆ 423 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಇದುವರೆಗೂ 204 ಮಿ.ಮೀ ಮಳೆಯಾಗಿದೆ. ಉಳಿದ ತಾಲೂಕುಗಳ ವ್ಯಾಪ್ತಿಯಲ್ಲಿ ಶೇ.30ರಷ್ಟು ಮಳೆ ಪ್ರಮಾಣ ಕಡಿಮೆಯಾಗಿದೆ. ಜುಲೈ ಮೊದಲವಾರದಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದರೂ ಪ್ರಮುಖ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯವಿರುವ ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆಗೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ ಮುಂದುವರಿದಿದ್ದು, ಕಡೂರು, ತರೀಕೆರೆ, ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ 83 ಗ್ರಾಮಗಳಿಗೆ 93 ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X