Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಕಾರ್ಯಕರ್ತನನ್ನು ‘ಅವಮಾನಿಸಿದ’...

ದಲಿತ ಕಾರ್ಯಕರ್ತನನ್ನು ‘ಅವಮಾನಿಸಿದ’ ಆರೋಪ: ಮಾಧ್ಯಮ ಸಂಸ್ಥೆಯ ಸಿಇಒ ಬಂಧನ

ವಾರ್ತಾಭಾರತಿವಾರ್ತಾಭಾರತಿ13 July 2019 4:14 PM IST
share
ದಲಿತ ಕಾರ್ಯಕರ್ತನನ್ನು ‘ಅವಮಾನಿಸಿದ’ ಆರೋಪ: ಮಾಧ್ಯಮ ಸಂಸ್ಥೆಯ ಸಿಇಒ ಬಂಧನ

ಹೈದರಾಬಾದ್, ಜು.13: ದಲಿತ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದಲ್ಲಿ ತೆಲುಗು ಮಾಧ್ಯಮ ಸಂಸ್ಥೆ ‘ಮೊಜೊ ಟಿವಿ’ ಇದರ ಸಿಇಒ ಪಿ. ರೇವತಿ ಅವರನ್ನು ಪರಿಶಿಷ್ಟ ಜಾತಿ/ಪಂಗಡ ದೌರ್ಜನ್ಯ ತಡೆ ಕಾಯಿದೆಯನ್ವಯ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಜನವರಿ 23ರಂದು ಭಾಗವಹಿಸಿದ್ದ ವಿ. ವರಪ್ರಸಾದ್ ಎಂಬವರು ತಮ್ಮ ದೂರಿನಲ್ಲಿ ಆ ನಿರ್ದಿಷ್ಟ ಶೋ ನಿರೂಪಕರಾಗಿದ್ದ ಕೆ. ರಘು ಹಾಗೂ ರೇವತಿ ಕಾರ್ಯಕ್ರಮದ ವೇಳೆ ತನ್ನ ಜಾತಿ ಉಲ್ಲೇಖಿಸಿದ್ದರೆಂದು ಆರೋಪಿಸಿದ್ದರು.

ಶುಕ್ರವಾರ ಬಂಜಾರ ಹಿಲ್ಸ್ ಠಾಣೆಯ ಪೊಲೀಸರು ರೇವತಿ ಅವರ ನಿವಾಸಕ್ಕೆ ತೆರಳಿ ತಮ್ಮೊಡನೆ ಠಾಣೆಗೆ ಬರುವಂತೆ ಹೇಳಿದ್ದರು. ಅಲ್ಲಿ ಅವರ ಹೇಳಿಕೆ ದಾಖಲಿಸಿದ ನಂತರ ಅವರನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜನವರಿ 23ರಂದು ಪ್ರಸಾರವಾದ ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಮಹಿಳಾ ಹೋರಾಟಗಾರ್ತಿಯೊಬ್ಬರೂ ಭಾಗವಹಿಸಿದ್ದರು. ಈ ಕಾರ್ಯಕ್ರಮದ ನಿರೂಪಕರ ಅಭಿಪ್ರಾಯಗಳು ತಾರತಮ್ಯದಿಂದ ಕೂಡಿದೆ ಎಂದು ವರಪ್ರಸಾದ್ ಹೇಳಿದಾಗ ರಘು ಆಕ್ಷೇಪಿಸಿ “ದಲಿತರಾಗಿ ನೀವು ದೇಶದಲ್ಲಿ ನಡೆಯುತ್ತಿರುವ ದಲಿತರ ದೌರ್ಜನ್ಯದ ಬಗ್ಗೆ ಪ್ರಶ್ನಿಸುವುದಿಲ್ಲ, ಬದಲಾಗಿ ಮಹಿಳೆಯರ ದೇವಳ ಪ್ರವೇಶಾತಿ ಬಗ್ಗೆ ನಿಮಗೆ ಚಿಂತೆಯಿದೆ,'' ಎಂದಿದ್ದರು.

ಈ ವಾಗ್ವಾದ ಮುಂದುವರಿದು  ಕೊನೆಗೆ ವರಪ್ರಸಾದ್ ಅವರನ್ನು ಸ್ಟುಡಿಯೋದಿಂದ ಹೊರ ನಡೆಯುವಂತೆ ರಘು ಹೇಳಿದ್ದರು. ಈ ಸಂದರ್ಭ ಮಧ್ಯ ಪ್ರವೇಶಿಸಿದ ರೇವತಿ, ವರಪ್ರಸಾದ್ ಅವರು ಜಗಳವಾಡಲೆಂದೇ ಸ್ಟುಡಿಯೋಗೆ ಆಗಮಿಸಿದ್ದಾರೆ ಎಂದು ಆರೋಪಿಸಿದ್ದರು.

ಶುಕ್ರವಾರ ಪೊಲೀಸರು ತಮ್ಮ ಮನೆ ಬಾಗಿಲಿಗೆ ಬಂದಂತೆಯೇ ರೇವತಿ ಮಾಧ್ಯಮಗಳಿಗೆ ಸುದ್ದಿ ಮುಟ್ಟಿಸಿದ್ದರು. ಪೊಲೀಸರು ಕಳುಹಿಸಿದ್ದ ಎರಡು ನೋಟಿಸ್ ಗಳಿಗೆ ರೇವತಿ ಪ್ರತಿಕ್ರಿಯಿಸಿದ್ದರೂ ಅದನ್ನು ಪರಿಗಣಿಸದೆ ಪೊಲೀಸರು ಇದೀಗ ಒತ್ತಡದಲ್ಲಿ ಅವರನ್ನು ಬಂಧಿಸಿದ್ದಾರೆಂದು ರೇವತಿ ಪತಿ ಚಿತ್ರ ನಿರ್ಮಾಪಕ ಡಿ ಚೈತನ್ಯ ಆರೋಪಿಸಿದ್ದಾರೆ.

ಆದರೆ ರೇವತಿ ತಮ್ಮ ನೋಟಿಸ್ ಗಳಿಗೆ ಉತ್ತರ ನೀಡಿರಲಿಲ್ಲ ಎಂದು ಬಂಜಾರ ಹಿಲ್ಸ್ ಠಾಣೆಯ ಎಸಿಪಿ ಶ್ರೀನಿವಾಸ್ ರಾವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X