Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಗೆ ಸೆಡ್ಡುಹೊಡೆದ ವಿಶ್ವಕಪ್...

ಟ್ರಂಪ್ ಗೆ ಸೆಡ್ಡುಹೊಡೆದ ವಿಶ್ವಕಪ್ ಗೆದ್ದ ಅಮೆರಿಕ ಫುಟ್ಬಾಲ್ ತಂಡದ ನಾಯಕಿ ಮೇಗನ್

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ13 July 2019 6:28 PM IST
share
ಟ್ರಂಪ್ ಗೆ ಸೆಡ್ಡುಹೊಡೆದ ವಿಶ್ವಕಪ್ ಗೆದ್ದ ಅಮೆರಿಕ ಫುಟ್ಬಾಲ್ ತಂಡದ ನಾಯಕಿ ಮೇಗನ್

ವಾಷಿಂಗ್ಟನ್, ಜು.13: ಅಮೆರಿಕಾದ ಮಹಿಳಾ ಫುಟ್ಬಾಲ್ ತಂಡ ದಾಖಲೆಯ ನಾಲ್ಕನೇ ಬಾರಿ ವಿಶ್ವಕಪ್ ಗೆದ್ದಿದೆ. ಇದಾದ ನಂತರದಲ್ಲಿ ತಂಡದ ಸಹ ನಾಯಕಿ ಮತ್ತು ಗೆಲುವಿನ ರೂವಾರಿ ಮೇಗನ್ ರ್ಯಾಪಿನೋ ಅವರು ಶ್ವೇತ ಭವನ ಭೇಟಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತಿರುಗೇಟು ನೀಡಿದ್ದಾರೆ.

“ನೀವು ಜನರನ್ನು ಹೊರಗಿಟ್ಟು ಸಂದೇಶ ನೀಡಿದ್ದೀರಿ. ನೀವು ನನ್ನನ್ನು, ನನ್ನಂತೆ ಕಾಣುವವರನ್ನು ಹಾಗೂ ನನ್ನನ್ನು ಬೆಂಬಲಿಸುವ ಅಮೆರಿಕನ್ನರನ್ನು ಕೈಬಿಟ್ಟಿದ್ದೀರಿ'' ಎಂದು ರ್ಯಾಪಿನೊ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿನ್ನೆಲೆ ಏನು?

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ವಿಚಾರದಲ್ಲಿ ಹಾಗೂ ಜನಾಂಗೀಯ ಹಾಗೂ ಲಿಂಗ ಸಮಾನತೆ ಕುರಿತಂತೆ ತಮ್ಮ ನೇರಾನೇರ ಮಾತುಗಳಿಗೆ ಹೆಸರಾಗಿರುವ ರ್ಯಾಪಿನೋ ಅವರು ರವಿವಾರ ತಮ್ಮ ತಂಡ ವಿಶ್ವ ಕಪ್ ಗೆದ್ದ ಬೆನ್ನಲ್ಲೇ ಪ್ರತಿಕ್ರಿಯಿಸಿ ಮಹಿಳಾ ಮತ್ತು ಪುರುಷ ತಂಡಗಳಿಗೆ ಸಮಾನ ವೇತನ ದೊರೆಯಬೇಕೆಂದು ಆಗ್ರಹಿಸಿದರು.

ತಮ್ಮ ತಂಡ ವಿಶ್ವಕಪ್ ಗೆದ್ದರೂ ಶ್ವೇತ ಭವನಕ್ಕೆ ಭೇಟಿ ನೀಡುವುದಿಲ್ಲ ಎಂದು ರ್ಯಾಪಿನೋ ಈ ಹಿಂದೆಯೇ ಹೇಳಿದ್ದು, ಟ್ರಂಪ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

“ದೇಶವನ್ನು ಅಗೌರವಿಸಬೇಡಿ, ಎಲ್ಲಾ ತಂಡಗಳೂ ಶ್ವೇತಭವನಕ್ಕೆ ಬರುತ್ತವೆ. ಆದರೆ ರ್ಯಾಪಿನೋ ಅವರು ಮೊದಲು ಗೆಲ್ಲಬೇಕು ನಂತರ ಮಾತನಾಡಬೇಕು'' ಎಂದು ಟ್ರಂಪ್ ಒಮ್ಮೆ ಟ್ವೀಟ್ ಮಾಡಿದ್ದರೆ, ಇನ್ನೊಂದು ಟ್ವೀಟ್ ನಲ್ಲಿ “ಈಗ ನಾನು ತಂಡ ಗೆದ್ದರೂ ಸೋತರೂ ಆಹ್ವಾನಿಸುತ್ತಿದ್ದೇನೆ. ದೇಶ ಹಾಗೂ ಧ್ವಜಕ್ಕೆ ಅಗೌರವ ತೋರಿಸಬಾರದು'' ಎಂದಿದ್ದರು.

ಆದರೆ ರವಿವಾರ ತಂಡ ಗೆದ್ದ ಕೂಡಲೇ ತಮ್ಮ ಹಿಂದಿನ ಟ್ವೀಟ್ ನಿಂದ ಹಿಂದೆ ಸರಿದ ಟ್ರಂಪ್ ``ಈ ಬಗ್ಗೆ ಯೋಚಿಸಿಲ್ಲ, ಅದರ ಬಗ್ಗೆ ಪರಿಶೀಲಿಸುತ್ತೇವೆ'' ಎಂದಿದ್ದರು.

ತಮ್ಮ ತಂಡಕ್ಕೆ ಇಲ್ಲಿಯ ತನಕ ಶ್ವೇತ ಭವನಕ್ಕೆ ಭೇಟಿ ನೀಡಲು ಆಹ್ವಾನ ಬಂದಿಲ್ಲ ಎಂದ ರ್ಯಾಪಿನೊ, ಆಹ್ವಾನ ದೊರೆತರೂ ಅದನ್ನು ತಿರಸ್ಕರಿಸುವುದಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X