Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಕರಿಂದ ಕೆಟ್ಟ ಚಟ ಮುಕ್ತ ಸಮಾಜ...

ಶಿಕ್ಷಕರಿಂದ ಕೆಟ್ಟ ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ: ಕೊರ್ಲಪಾಟಿ

ಮಾದಕ ವ್ಯಸನ ವಿರೋಧಿ ಮಾಸಾಚರಣೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 July 2019 8:40 PM IST
share
ಶಿಕ್ಷಕರಿಂದ ಕೆಟ್ಟ ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ: ಕೊರ್ಲಪಾಟಿ

ಉಡುಪಿ, ಜು.13: ಕೆಟ್ಟ ಚಟಗಳಿಂದ ವಿದ್ಯಾರ್ಥಿಗಳು ದೂರ ಉಳಿಯು ವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಶಿಕ್ಷಕ ಸಮುದಾಯವು ಮಕ್ಕಳ ಮೇಲೆ ಹೆಚ್ಚಿನ ಪ್ರಭಾವ ಬೀರುವುದರಿಂದ ಈ ಕಾರ್ಯವನ್ನು ನಿಷ್ಠೆ ಯಿಂದ ಮಾಡುವ ಮೂಲಕ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಶನಿವಾರ ಜಿಲ್ಲಾ ಪೊಲೀಸ್ ಕಚೇರಿ ಯಲ್ಲಿ ಆಯೋಜಿಸಲಾದ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಮತ್ತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ತಮ್ಮ ಪರಿಸರದಲ್ಲಿ ನಡೆಯುವ ಮಾದಕ ದ್ರವ್ಯ ಸೇವನೆಯಂತಹ ಕಾನೂನು ವಿರೋಧಿ ಚಟುವಟಿಕೆಗಳ ಬಗ್ಗೆ ಸೆನ್ ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಮೂಲಕ ಇಂತಹ ಚಟಗಳಿಗೆ ಮುಂದಿನ ಪೀಳಿಗೆ ಬಲಿಯಾಗದಂತೆ ತಡೆಯಬಹುದಾಗಿದೆ. ಶಿಕ್ಷಕರು ಸಾಮಾಜಿಕ ಜವಾಬ್ದಾರಿಯನ್ನು ವಹಿಸಿ ಕೊಂಡು ಇಂತಹ ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮನೋರೋಗ ತಜ್ಞ ಡಾ.ಪಿ.ವಿ. ಭಂಡಾರಿ ಮಾತನಾಡಿ, ಭಾರತದಲ್ಲಿ 16ಕೋಟಿ ಮಂದಿ ಮದ್ಯ ಸೇವನೆ ಮಾಡುತ್ತಿದ್ದು, ಶೇ.30ರಷ್ಟು ಮಂದಿ ಮಾನಸಿಕ ಸಮಸ್ಯೆಯಿಂದಾಗಿ ಈ ಚಟಕ್ಕೆ ಒಳಗಾಗುತ್ತಿದ್ದಾರೆ. ಮದ್ಯ ಸೇವನೆಯಿಂದ ಒತ್ತಡ ಹೆಚ್ಚಾಗುತ್ತದೆಯೇ ಹೊರತು ಕಡಿಮೆ ಆಗಲು ಸಾಧ್ಯವೇ ಇಲ್ಲ. ಮಾದಕ ದ್ರವ್ಯಗಳ ಕುರಿತು ಯುವಜನತೆ ಯಲ್ಲಿ ಈ ರೀತಿಯ ಹಲವು ತಪ್ಪು ಕಲ್ಪನೆಗಳಿವೆ ಎಂದರು.

ಮಾದಕ ದ್ರವ್ಯ ಸೇವನೆಯ ಚಟ ದೈಹಿಕ ಹಾಗೂ ಮಾನಸಿಕ ರೋಗವೇ ಹೊರತು ಯಾವುದೇ ಕ್ರಿಮಿನಲ್ ಅಪರಾಧ ಅಲ್ಲ. ಇದೊಂದು ವೈದ್ಯಕೀಯ ಸಮಸ್ಯೆಯಾಗಿರುವುದರಿಂದ ಇದನ್ನು ಚಿಕಿತ್ಸೆಯ ಮೂಲಕ ಪರಿಹರಿಸಲು ಸಾಧ್ಯ. ಮದ್ಯ ಸೇವನೆ ಚಟದಿಂದ ಶೇ.20-30, ತಂಬಾಕು ಸೇವನೆಯಿಂದ ಶೇ.8-10 ಮತ್ತು ಗಾಂಜಾ ಸೇವನೆ ಚಟದಿಂದ ಶೇ.3-5ರಷ್ಟು ಮಂದಿ ಹೊರಗೆ ಬರಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಮಾತನಾಡಿ, ಮಾದಕ ದ್ರವ್ಯ ಎಂಬುದು ಈಗ ಇಡೀ ಜಗತ್ತಿನ ಸಮಸ್ಯೆಯಾಗಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ವಿಶ್ವಸಂಸ್ಥೆಯ ಏಜೆನ್ಸಿ, ಭಾರತದಲ್ಲಿ ನಾರ್ಕೊಟಿಕ್ ಕಂಟ್ರೋಲ್ ಬ್ಯೂರೋ ಮತ್ತು ಕರ್ನಾಟಕದಲ್ಲಿ ಸಿಐಡಿಯಲ್ಲಿ ಪ್ರತ್ಯೇಕ ವಿಭಾಗ ಮತ್ತು ಪ್ರತಿ ಜಿಲ್ಲೆಯಲ್ಲೂ ಸೆನ್ ಅಪರಾಧ ಪೊಲೀಸ್ ಠಾಣೆಯನ್ನು ಸ್ಥಾಪಿಸಿ ಇದರ ವಿರುದ್ಧ ಕಾರ್ಯಾ ಚರಣೆ ನಡೆಸಲಾಗುತ್ತಿದೆ ಎಂದರು.

ಎಲ್ಲ ಹಂತದಲ್ಲೂ ಮಾದಕ ದ್ರವ್ಯ ದಂಧೆಯನ್ನು ತಡೆಯುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಅದಕ್ಕೆ ಬಿಗಿಯಾದ ಕಾನೂನು ಕೂಡ ರೂಪಿಸಲಾಗಿದೆ. ಈ ಅಪರಾಧ ಎಸಗಿದವರಿಗೆ 20ವರ್ಷ ಕಾಲ ಜೈಲು ಶಿಕ್ಷೆ ಮತ್ತು ಮರಣದಂಡನೆ ವಿಧಿಸಲು ಕೂಡ ಕಾನೂನಿನಲ್ಲಿ ಅವಕಾಶ ನೀಡಲಾಗಿದೆ. ಆದರೆ ಕೇವಲ ಕಾನೂನಿನಡಿಯಲ್ಲಿ ಕಾರ್ಯಾಚರಣೆ ನಡೆಸಿದರೆ ಈ ಸಮಸ್ಯೆಯನ್ನು ನಿರ್ಮೂ ಲನೆ ಮಾಡಲು ಸಾಧ್ಯವಿಲ್ಲ. ಮಾದಕ ವಸ್ತುಗಳಿಗೆ ಇರುವ ಬೇಡಿಕೆಯನ್ನು ಕಡಿಮೆ ಮಾಡಲು ಹೆಚ್ಚಿನ ಒತ್ತು ನೀಡಬೇಕಾಗಿದೆ. ಇದರಿಂದ ಈ ಸಮಸ್ಯೆಯನ್ನು ನಿಯಂತ್ರಿಸಬಹುದಾಗಿದೆ ಎಂದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಸ್ವಾಗತಿಸಿದರು. ಡಿವೈಎಸ್ಪಿ ಜೈಶಂಕರ್ ವಂದಿಸಿದರು. ಶಿವಾನಂದ ನಾರಿ ಕಾರ್ಯಕ್ರಮ ನಿರೂ ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X