Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೀಸಾ ಏಜೆಂಟ್ ನಿಂದ ಮೋಸ: ಮಂಗಳೂರು ತಲುಪಿ...

ವೀಸಾ ಏಜೆಂಟ್ ನಿಂದ ಮೋಸ: ಮಂಗಳೂರು ತಲುಪಿ ಕಂಗಾಲಾದ ಹೈದರಾಬಾದ್ ಮಹಿಳೆಗೆ ನೆರವಾದ ಕಾರು ಚಾಲಕ ಅಶ್ರಫ್

ತನ್ನಲ್ಲಿದ್ದ 1,250 ರೂ. ನೀಡಿ ಮಾನವೀಯತೆ ಮೆರೆದ ಕಲ್ಲಡ್ಕ ನಿವಾಸಿ

ವಾರ್ತಾಭಾರತಿವಾರ್ತಾಭಾರತಿ13 July 2019 8:52 PM IST
share
ವೀಸಾ ಏಜೆಂಟ್ ನಿಂದ ಮೋಸ: ಮಂಗಳೂರು ತಲುಪಿ ಕಂಗಾಲಾದ ಹೈದರಾಬಾದ್ ಮಹಿಳೆಗೆ ನೆರವಾದ ಕಾರು ಚಾಲಕ ಅಶ್ರಫ್

ಬಂಟ್ವಾಳ, ಜು.13: ಕಾರಣಾಂತರಗಳಿಂದ ವಿದೇಶದಿಂದ ವಾಪಸಾಗಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದು ಹಣವಿಲ್ಲದೆ ಅತಂತ್ರರಾಗಿದ್ದ ಹೈದರಾಬಾದ್ ಮೂಲದ ಮಹಿಳೆಯೊಬ್ಬರಿಗೆ ನೆರವು ನೀಡಿ, ಉಪಚರಿಸಿ ತಾಯ್ನಾಡಿಗೆ ಕಳುಹಿಸುವ ಮೂಲಕ ಕಲ್ಲಡ್ಕ ನಿವಾಸಿ ಮುಹಮ್ಮದ್ ಅಶ್ರಫ್ ಮಾನವೀಯತೆ ಮೆರೆದಿದ್ದಾರೆ.

ಅಶ್ರಫ್ ಅವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಓಲಾ ಕಂಪೆನಿಯ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಜೂ. 12ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಹೈದರಾಬಾದ್ ಮೂಲದ ಮಹಿಳೆ ಕಂಗಾಲಾಗಿದ್ದರು.

“ಜೂ. 12ರಂದು ಬೆಳಗ್ಗೆ 9:30 ಸುಮಾರಿಗೆ ಅಂದಾಜು 45 ವರ್ಷದ ಮಹಿಳೆಯೊಬ್ಬರು ನನ್ನ ಬಳಿ ಬಂದು ಸಹಾಯ ಯಾಚಿಸಿದ್ದರು. ಹೈದರಾಬಾದ್ ತನ್ನೂರಾಗಿದ್ದು, ತನ್ನ ಹೆಸರು ಕುಮಾರಿ ಎಂದವರು ಹೇಳಿದ್ದರು. ತಾನು ಕುವೈತ್ ಗೆ ಮನೆಕೆಲಸಕ್ಕೆಂದು ತೆರಳಿದ್ದು, ಏಜೆಂಟ್‍ ನಿಂದ ವೀಸಾ ಸಿಗದೆ ವಂಚನೆಗೊಳಗಾಗಿ ಇಲ್ಲಿಗೆ ಬಂದಿಳಿದಿದ್ದೇನೆ. ಘಟನೆಯ ಬಗ್ಗೆ ಏಜೆನ್ಸಿಗೆ ಕರೆ ಮಾಡಿ ತಿಳಿಸಿದಾಗ ಸ್ಪಂದಿಸುತ್ತಿಲ್ಲ. ಅದಲ್ಲದೆ, ಕರೆಯನ್ನು ನಿರಾಕರಿಸುತ್ತಿದ್ದಾರೆ. ತನ್ನೂರಿಗೆ ಹೋಗಬೇಕೆಂದರೆ ಹಣವಿಲ್ಲ ಎಂದು ಮಹಿಳೆಯು ತಮ್ಮ ಅಳಲನ್ನು ತೋಡಿಕೊಂಡರು" ಎಂದು ಅಶ್ರಫ್ ಅವರು "ವಾರ್ತಾ ಭಾರತಿ"ಗೆ ತಿಳಿಸಿದ್ದಾರೆ.

"ವಿಮಾನದಲ್ಲಿ ಕಳುಹಿಸುವಷ್ಟು ಶಕ್ತನಲ್ಲ. ಆದ್ದರಿಂದ ಮಹಿಳೆಗೆ ಬೆಳಗಿನ ಉಪಹಾರ ಕೊಡಿಸಿ ಮಂಗಳೂರಿನ ರೈಲು ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದೇನೆ. ಹೈದರಾಬಾದ್‍ ಗೆಂದು ನೇರ ರೈಲು ಮಾರ್ಗವಿಲ್ಲದ ಹಿನ್ನೆಲೆಯಲ್ಲಿ ಮಧ್ಯಾಹ್ನ ಮಂಗಳೂರಿನಿಂದ ತಮಿಳುನಾಡಿಗೆ ಹೊರಡುವ ರೈಲಿಗೆ ಟಿಕೆಟು ತೆಗೆದು ಅಲ್ಲಿಂದ ಹೈದರಾಬಾದ್ ತೆರಳುವಂತೆ ಮಾಹಿತಿ ನೀಡಿದ್ದೇನೆ. ಖರ್ಚಿಗಾಗಿ 1,250 ರೂ. ವನ್ನು ಮಹಿಳೆಗೆ ನೀಡಿರುವುದಾಗಿ ಘಟನೆಯ ಬಗ್ಗೆ ಅಶ್ರಫ್ ಅವರು ಮಾಹಿತಿ ನೀಡಿದ್ದಾರೆ.

ವ್ಯಾಪಕ ಪ್ರಶಂಸೆ:

ರೈಲ್ವೆ, ವಿಮಾನ ನಿಲ್ದಾಣಗಳಲ್ಲಿ ಪರವೂರಿನಿಂದ ಬಂದವರಿಂದ ರಿಕ್ಷಾ, ಟ್ಯಾಕ್ಸಿ ಚಾಲಕರು ದುಬಾರಿ ಹಣ ಪಡೆದು ಮೋಸ ಮಾಡುತ್ತಾರೆ ಎನ್ನುವ ಆರೋಪಗಳಿವೆ. ಇಂತಹವರ ನಡುವೆ ಮಹಿಳೆಗೆ ನೆರವಾಗಿ, ತನ್ನಲ್ಲಿದ್ದ ಹಣವನ್ನೂ ನೀಡಿದ ಅಶ್ರಫ್ ಅವರ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X