Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನಿಮಗೆ ಗೊತ್ತಿರಲಿ,ಕಣ್ಣುಗಳನ್ನು ಪದೇ ಪದೇ...

ನಿಮಗೆ ಗೊತ್ತಿರಲಿ,ಕಣ್ಣುಗಳನ್ನು ಪದೇ ಪದೇ ಉಜ್ಜುವುದು ಗಂಭೀರ ಹಾನಿಗೆ ಕಾರಣವಾಗುತ್ತದೆ

ವಾರ್ತಾಭಾರತಿವಾರ್ತಾಭಾರತಿ13 July 2019 9:51 PM IST
share
ನಿಮಗೆ ಗೊತ್ತಿರಲಿ,ಕಣ್ಣುಗಳನ್ನು ಪದೇ ಪದೇ ಉಜ್ಜುವುದು ಗಂಭೀರ ಹಾನಿಗೆ ಕಾರಣವಾಗುತ್ತದೆ

ಕಣ್ಣುಗಳನ್ನು ಉಜ್ಜಿಕೊಳ್ಳುವುದು ಹಿತಕರ ಅನುಭವವನ್ನು ನೀಡಬಹುದು,

ಆದರೆ ಅತಿಯಾಗಿ ಉಜ್ಜಿಕೊಳ್ಳುವುದು ಒಳ್ಳೆಯದಲ್ಲ. ಅದರಿಂದಾಗಿ ದೀರ್ಘಾವಧಿಯಲ್ಲಿ ಕಣ್ಣಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ.

ಧೂಳು, ಅಲರ್ಜಿಗಳು ಮತ್ತು ನಿರಂತರವಾಗಿ ಕಂಪ್ಯೂಟರ್ ಪರದೆಯನ್ನು ನೋಡುತ್ತಿರುವುದು ಕಣ್ಣುಗಳನ್ನು ದುರ್ಬಲಗೊಳಿಸುತ್ತವೆ ಮತ್ತು ಅವುಗಳಿಗೆ ಆಯಾಸವನ್ನುಂಟು ಮಾಡುತ್ತವೆ. ಇದಕ್ಕೆ ನಮಗೆ ತೋಚುವ ತಕ್ಷಣದ ಪರಿಹಾರ ಮಾರ್ಗವೆಂದರೆ ಕಣ್ಣುಗಳನ್ನು ಸತತವಾಗಿ ಉಜ್ಜಿಕೊಳ್ಳುವುದು. ಇದರಿಂದ ಆ ಕ್ಷಣದಲ್ಲಿ ಹಾಯೆನಿಸಬಹುದು, ಆದರೆ ಅದು ಕಣ್ಣುಗಳಿಗೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ. ಕಣ್ಣುಗಳನ್ನು ನಿರಂತರವಾಗಿ ಉಜ್ಜುವುದು ವೇಗಸ್ ನರವನ್ನು ಪ್ರಚೋದಿಸುವುದರಿಂದ ಇದು ಚಿಕಿತ್ಸಕ ಕ್ರಮ ಎಂದೂ ಹೇಳಲಾಗುತ್ತದೆ.

ವೇಗಸ್ ನರವು ವ್ಯಕ್ತಿಯ ಹೃದಯ ಬಡಿತವನ್ನು ನಿಧಾನಗೊಳಿಸಲು ನೆರವಾಗುತ್ತದೆ ಮತ್ತು ಒತ್ತಡವನ್ನು ಶಮನಗೊಳಿಸುತ್ತದೆ. ಆದರೆ ಯಾವುದೇ ಆದರೂ ಅತಿಯಾದರೆ ಕೆಟ್ಟದ್ದೇ ಮತ್ತು ಈ ಮಾತು ನಿರಂತರವಾಗಿ ಕಣ್ಣುಗಳನ್ನು ಉಜ್ಜಿಕೊಳ್ಳುವುದಕ್ಕೂ ಅನ್ವಯಿಸುತ್ತದೆ. ಈ ಅಭ್ಯಾಸದಿಂದ ಉಂಟಾಗುವ ಕೆಲವು ಗಂಭೀರ ಹಾನಿಗಳ ಕುರಿತು ಮಾಹಿತಿಗಳಿಲ್ಲಿವೆ......

ನಿರಂತರವಾಗಿ ಕಣ್ಣುಗಳನ್ನು ಉಜ್ಜಿಕೊಳ್ಳುವುದರಿಂದ ಅವುಗಳಲ್ಲಿರುವ ಪುಟ್ಟ ರಕ್ತನಾಳಗಳು ಒಡೆಯಬಹುದು ಹಾಗೂ ಇದು ಕಣ್ಣುಗಳು ರಕ್ತವರ್ಣಕ್ಕೆ ತಿರುಗಲು ಮತ್ತು ಕುರೂಪಿ ಕಪ್ಪು ವರ್ತುಲಗಳು ಉಂಟಾಗಲೂ ಕಾರಣವಾಗುತ್ತದೆ.

ಕಣ್ಣುಗಳನ್ನು ಉಜ್ಜಿಕೊಳ್ಳುವ ಮೂಲಕ ನಾವು ಅವುಗಳನ್ನು ನಮ್ಮ ಕೈಗಳಲ್ಲಿರುವ ಬ್ಯಾಕ್ಟೀರಿಯಾಗಳ ನೇರ ಸಂಪರ್ಕಕ್ಕೆ ಒಡ್ಡುತ್ತೇವೆ. ಬ್ಯಾಕ್ಟೀರಿಯಾಗಳಿಂದ ಕಣ್ಣುಗಳಿಗೆ ಉಂಟಾಗುವ ಸೋಂಕುಗಳು ಗಂಭೀರವಾಗಿರುತ್ತವೆ ಮತ್ತು ಕೆಂಗಣ್ಣು ಬೇನೆಯಂತಹ ಸಮಸ್ಯೆಗಳಿಗೆ ಕಾರಣವಾಗಬಲ್ಲವು. ಅಲ್ಲದೆ ಕಣ್ಣುಗಳನ್ನು ಉಜ್ಜಿಕೊಳ್ಳುವುದರಿಂದ ಈಗಾಗಲೇ ಇರುವ ಕಣ್ಣುಗಳ ಸಮಸ್ಯೆಗಳು ಇನ್ನಷ್ಟು ತೀವ್ರಗೊಳ್ಳುತ್ತವೆ. ಕಣ್ಣುಗಳಲ್ಲಿ ಕಸ,ಧೂಳಿನಂತಹ ಬಾಹ್ಯವಸ್ತುಗಳು ಸಿಕ್ಕಿಹಾಕಿಕೊಂಡಾಗ ಉಜ್ಜುವುದು ನಮ್ಮ ತಕ್ಷಣದ ಪ್ರತಿಕ್ರಿಯೆ ಯಾಗಿರುತ್ತದೆ. ಹೀಗೆ ಉಜ್ಜಿಕೊಳ್ಳುವುದರಿಂದ ಕಣ್ಣಿನಲ್ಲಿರುವ ಬಾಹ್ಯವಸ್ತು ನಿವಾರಣೆಯಾಗಬಹುದು ಎಂಬ ತಪ್ಪು ಗ್ರಹಿಕೆಯಿದೆ. ಆದರ ಹೀಗೆ ಮಾಡುವುದರಿಂದ ಬಾಹ್ಯವಸ್ತುವು ಕಾರ್ನಿಯಾಕ್ಕೆ ಹಾನಿಯನ್ನುಂಟು ಮಾಡುತ್ತದೆ.

 ಕಣ್ಣುಗಳನ್ನು ಸತತವಾಗಿ ತಿಕ್ಕುವುದು ಅವು ಒಣಗಲೂ ಕಾರಣವಾಗುತ್ತದೆ. ಸಾಮಾನ್ಯ ಸ್ಥಿತಿಯಲ್ಲಿರುವ ಕಣ್ಣುಗಳಲ್ಲಿ ಅವುಗಳನ್ನು ತೇವವಾಗಿಸುವ ಜಲೀಯ ದ್ರಾವಣದ ಉತ್ಪಾದನೆಯ ದರವು ಅದರ ಹರಿವಿನ ದರಕ್ಕೆ ಅನುಗುಣವಾಗಿರುತ್ತದೆ,ತನ್ಮೂಲಕ ಕಣ್ಣುಗಳ ಒಳಗೆ ಸೂಕ್ತ ಒತ್ತಡವನ್ನು ಕಾಯ್ದುಕೊಳ್ಳುತ್ತದೆ. ಗಾಯ ಅಥವಾ ಸತತವಾಗಿ ಕಣ್ಣುಗಳ ಉಜ್ಜುವಿಕೆಯಂತಹ ಕಾರಣಗಳಿಂದಾಗಿ ಈ ಜಲೀಯ ದ್ರಾವಣವನ್ನು ಸಾಗಿಸುವ ನಾಳಗಳಿಗೆ ತಡೆಯುಂಟಾಗಬಹುದು ಮತ್ತು ಕಣ್ಣುಗಳ ಒಳಗಿನ ಒತ್ತಡವು ಹೆಚ್ಚುತ್ತದೆ. ಹೀಗೆ ಹೆಚ್ಚಿದ ಒತ್ತಡವು ಆಪ್ಟಿಕ್ ನರಕ್ಕೆ ಹಾನಿಯನ್ನುಂಟು ಮಾಡುತ್ತದೆ.

 ಗ್ಲುಕೋಮಾ ರೋಗಿಗಳಂತೂ ಕಣ್ಣುಗಳನ್ನು ಉಜ್ಜಿಕೊಳ್ಳುವ ಗೋಜಿಗೆ ಹೋಗಲೇಬಾರದು. ಉಜ್ಜುವಿಕೆಯಿಂದ ಕಣ್ಣಿನ ಒತ್ತಡವು ಹೆಚ್ಚಾಗುತ್ತದೆ ಮತ್ತು ಗಂಭೀರ ಪ್ರಕರಣಗಳಲ್ಲಿ ಇದು ಅಂಧತ್ವಕ್ಕೂ ಕಾರಣವಾಗಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X