Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು...

ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು ನಾಚಿಕೆಗೇಡು: ಮಾರ್ಗರೇಟ್ ಆಳ್ವಾ

ವಾರ್ತಾಭಾರತಿವಾರ್ತಾಭಾರತಿ13 July 2019 11:40 PM IST
share

ಬೆಂಗಳೂರು, ಜು.13: ಚುನಾವಣೆಯಲ್ಲಿ ಒಂದು ಪಕ್ಷದಿಂದ ಗೆದ್ದ ಮೇಲೆ ಶಾಸಕರು ಹಣ, ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು ನಾಚಿಕೆಗೇಡು. ಇದಕ್ಕಿಂತ ಕೆಟ್ಟ ರಾಜಕೀಯ ಇನ್ನೊಂದಿಲ್ಲ ಎಂದು ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ಕಿಡಿಕಾರಿದ್ದಾರೆ.
ಶನಿವಾರ ನಗರದಲ್ಲಿ ಬಿ-ಪ್ಯಾಕ್ ಸಂಸ್ಥೆ ಆಯೋಜಿಸಿದ್ದ ನಾಗರಿಕ ನಾಯಕತ್ವ ತರಬೇತಿ ಪದವಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಪರೋಕ್ಷವಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಅಸಮಾಧಾನ ಹೊರಹಾಕಿ, 50 ವರ್ಷದ ತಮ್ಮ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ರಾಜಕೀಯವನ್ನು ನೋಡಿರಲಿಲ್ಲ ಎಂದು ವಿಷಾದಿಸಿದರು.

ಈ ಹಿಂದೆ ತಾವು ರಾಜಕಾರಣ ಆರಂಭಿಸಿದ ಕಾಲಘಟ್ಟದಲ್ಲಿ ಪಕ್ಷ, ತತ್ವ, ಸಿದ್ಧಾಂತ, ಮೌಲ್ಯಗಳಿಗೆ ಬೆಲೆ ಇತ್ತು. ಈಗ ರಾಜಕಾರಣದಲ್ಲಿ ಅವೆಲ್ಲಾ ಕಾಣೆಯಾಗಿವೆ. ಹಣ, ಜಾತಿ ಮುಖ್ಯವಾಗಿ ಬಿಟ್ಟಿವೆ. ಪ್ರಾಮಾಣಿಕತೆ ಮತ್ತು ಬದ್ಧತೆಯುಳ್ಳ ನಾಯಕರನ್ನು ಆಯ್ಕೆ ಮಾಡುವತ್ತ ಜನ ಗಮನಹರಿಸಬೇಕು ಎಂದು ತಿಳಿಸಿದರು.

ಹಾಗೆಯೇ ನಾಯಕರಾದವರು ಪ್ರಾಮಾಣಿಕತೆಯಿಂದ ತತ್ವ, ಸಿದ್ಧಾಂತಗಳನ್ನು ಪಾಲಿಸಿ, ಮೌಲ್ಯಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಮೂಲಕ ಜನರು ತಮ್ಮ ಬಗ್ಗೆ ಹೆಮ್ಮೆಪಡುವಂತೆ ಕಾರ್ಯನಿರ್ವಹಿಸಬೇಕು. ಹಾಗಾದಾಗ ಮಾತ್ರ ರಾಜಕಾರಣಿಗಳಿಗೆ ಒಂದು ಬೆಲೆ ಸಿಗುತ್ತದೆ. ಇನ್ನು, ಬಿ-ಪ್ಯಾಕ್ ಸಂಸ್ಥೆ ಬಿ-ಕ್ಲಿಪ್ ಮೂಲಕ ನಾಗರಿಕ ನಾಯಕತ್ವ ತರಬೇತಿ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸಾಮಾನ್ಯರಲ್ಲೂ ನಾಯಕತ್ವ ಗುಣಗಳನ್ನು ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂದೆಯಲ್ಲಾ ಯಾವುದೇ ಕಟ್ಟಡಗಳನ್ನು ನಿರ್ಮಿಸಿದರೆ 100-150 ವರ್ಷ ಬಾಳಿಕೆ ಬರುತ್ತಿತ್ತು. ಈಗ ಕಾಮಗಾರಿಯ ಗುಣಮಟ್ಟವೂ ಕುಸಿದಿದೆ. ನಿರ್ಮಾಣವಾದ ಕೆಲವೇ ವರ್ಷಗಳಲ್ಲಿ ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ಕೆಲ ಕಟ್ಟಡಗಳು ಬಿದ್ದೇ ಹೋಗುತ್ತವೆ. ಈ ಅವಘಡ ಸಂಭವಿಸಿದಾಗ ಪರಿಹಾರ ನೀಡಿ ಕೈ ತೊಳೆದುಕೊಳ್ಳುತ್ತೇವೆ. ಇಂತಹ ಆಡಳಿತ ವ್ಯವಸ್ಥೆ ಬದಲಾಗಬೇಕಿದೆ. ಕಾಮಗಾರಿಗಳ ಗುಣಮಟ್ಟ ಸುಧಾರಿಸಬೇಕಿದೆ ಎಂದು ಹೇಳಿದರು.

ಬಿ-ಪ್ಯಾಕ್ ಸಂಸ್ಥೆಯ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಮಾತನಾಡಿ, ಬೆಂಗಳೂರು ಉತ್ತಮ ನಗರವಾಗಿದೆ. ಉತ್ತಮ ಹವಾಗುಣ ಹಾಗೂ ಆಶಾಭಾವದ ಜನರನ್ನು ಹೊಂದಿದೆ. ಜತೆಗೆ ದೊಡ್ಡ ಅವಕಾಶಗಳು ಇಲ್ಲಿವೆ. ಹಾಗಾಗಿ ಎಲ್ಲರೂ ಸೇರಿ ಉತ್ತಮ ಆಡಳಿತದತ್ತ ಗಮನಹರಿಸಬೇಕಿದೆ. ನಗರದಲ್ಲಿ ಉತ್ತಮ ಆಡಳಿತ ವ್ಯವಸ್ಥೆಯನ್ನು ಸಾಧಿಸಲು ಮಹಾನಗರ ಪಾಲಿಕೆಯ ಆಡಳಿತದಲ್ಲಿ ಸಾರ್ವಜನಿಕ ಸೇವೆಯ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಬಿ-ಪ್ಯಾಕ್ ಸಂಸ್ಥೆಯು ಬಿ-ಕ್ಲಿಪ್ ಮೂಲಕ ನೀಡುವ ನಾಗರಿಕ ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ತರಬೇತಿ ಪಡೆದ 60 ಮಂದಿಗೆ ಪದವಿ ಪತ್ರಗಳನ್ನು ವಿತರಿಸಲಾಯಿತು.

ಚುನಾವಣೆಗಳಲ್ಲಿ ಮಹಿಳೆಯರಿಗೆ ಟಿಕೆಟ್ ಕೇಳಿದರೆ ಗೆಲ್ಲುವ ಸಾಮರ್ಥ್ಯ ಇಲ್ಲ ಎಂದು ಟಿಕೆಟ್ ನೀಡುವುದೇ ಇಲ್ಲ. ಹಣ, ಜಾತಿಗೆ ಪ್ರಾಧಾನ್ಯತೆ ನೀಡಲಾಗುತ್ತದೆ. ಪರಿಸ್ಥಿತಿ ಹೀಗಿರುವಾಗ ಮಹಿಳೆಯರು ರಾಜಕಾರಣದಲ್ಲಿ ಮುಂದೆ ಬರುವುದು ಹೇಗೆ?

-ಮಾರ್ಗರೇಟ್ ಆಳ್ವಾ, ಮಾಜಿ ರಾಜ್ಯಪಾಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X