Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರೀಯ ಭಾಷಾ ನೀತಿ ಜಾರಿಯಾಗಲಿ:...

ರಾಷ್ಟ್ರೀಯ ಭಾಷಾ ನೀತಿ ಜಾರಿಯಾಗಲಿ: ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ13 July 2019 11:46 PM IST
share
ರಾಷ್ಟ್ರೀಯ ಭಾಷಾ ನೀತಿ ಜಾರಿಯಾಗಲಿ: ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಜು.13: ಆಯಾ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಸ್ಥಳೀಯ ರಾಜ್ಯಭಾಷೆ ಕಡ್ಡಾಯ ಎಂಬ ಭಾಷಾ ರಾಷ್ಟ್ರೀಯ ನೀತಿ ಜಾರಿಯಾಗಬೇಕಾದ ಅಗತ್ಯವಿದೆ ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಶನಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 14 ನೆ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕಿಂಗ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸ್ಥಳೀಯರಿಗೆ ಅನ್ಯಾಯವಾಗುತ್ತಿದೆ. ಅನ್ಯಭಾಷಿಕರೇ ಅಧಿಕ ಸಂಖ್ಯೆಯಲ್ಲಿ ತುಂಬಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ದೇಶದಾದ್ಯಂತ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳು ಬಾರದವರಿಗೆ ಉದ್ಯೋಗವಿಲ್ಲ ಎಂಬ ರಾಷ್ಟ್ರೀಯ ನೀತಿ ಜಾರಿ ಮಾಡಬೇಕೆಂದು ಒತ್ತಾಯಿಸಿದರು.

ರಂಗಭೂಮಿ, ಚಲನಚಿತ್ರ, ಸಿನಿಮಾ ಸೇರಿದಂತೆ ಎಲ್ಲ ವರ್ಗದ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿದ್ದರೂ, ಬಿಡಿಬಿಡಿಯಾಗಿ ಸಿಗುತ್ತಿವೆ. ಹೀಗಾಗಿ, ಎಲ್ಲ ಸೌಲಭ್ಯಗಳು ಒಂದೇ ಕಡೆ ಸಿಗುವಂತೆ ಮಾಡುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪ್ರತ್ಯೇಕ ಕೋಶವೊಂದನ್ನು ರಚಿಸಬೇಕು ಎಂದು ಅವರು ಹೇಳಿದರು.

ಕನ್ನಡ ರಂಗಭೂಮಿಯು ಸಾಮಾಜಿಕ ಕಳಕಳಿಯನ್ನು ಪ್ರತಿಪಾದಿಸುತ್ತದೆ. ದೇಶದಲ್ಲಿ ನಡೆದ ಎಲ್ಲ ಚಳವಳಿಯಲ್ಲಿಯೂ ರಂಗಭೂಮಿ ಸಕ್ರಿಯವಾಗಿ ಕೆಲಸ ಮಾಡಿದೆ ಎಂದ ಅವರು, ಸ್ವಾತಂತ್ರ ಪೂರ್ವದಲ್ಲಿ ನಡೆದ ಚಳವಳಿಯಲ್ಲಿ ಅಪಾರವಾದ ಪಾತ್ರ ವಹಿಸಿದೆ. ಇನ್ನು ಸ್ವಾತಂತ್ರ ನಂತರದಲ್ಲಿ ನಡೆದ ಸಮಾನತೆ, ಸೌಹಾರ್ದ ಚಳವಳಿಯಲ್ಲಿಯೂ ರಂಗಭೂಮಿ ಕಾರ್ಯ ನಿರ್ವಹಿಸುತ್ತಿದೆ ಎಂದು ನುಡಿದರು.

ದೇಶದಲ್ಲಿ ಬುಡಕಟ್ಟು ಜನಾಂಗಗಳು ರಂಗಭೂಮಿಯನ್ನು ಹುಟ್ಟು ಹಾಕಿದರು. ಅಂದು ಹೊಟ್ಟೆಪಾಡಿಗಾಗಿ ರಂಗಭೂಮಿ ಇತ್ತು. ಒಂದು ಕಡೆ ಹೊಟ್ಟೆಪಾಡಿಗಾಗಿ ನಾಟಕವಾಡುತ್ತಿದ್ದವರು ಇದ್ದರೆ, ಮತ್ತೊಂದು ಕಡೆ ಹಸಿದವರಿಗಾಗಿ ಬೀದಿ ನಾಟಕವಾಡುತ್ತಿದ್ದರು ಎಂದು ತಿಳಿಸಿದರು.

ಸಮ್ಮೇಳನಾಧ್ಯಕ್ಷ ಎಚ್.ಜಿ.ಸೋಮಶೇಖರ್ ಮಾತನಾಡಿ, ಗ್ರಾಮಾಂತರ ಪ್ರದೇಶ ಸೇರಿದಂತೆ ಎಲ್ಲ ಕಡೆಗಳಿಗೂ ಅನುಕೂಲವಾಗುವಂತೆ ಸಣ್ಣ ಸಣ್ಣ ರಂಗ ಮಂದಿರಗಳನ್ನು ನಿರ್ಮಾಣ ಮಾಡಲು ಸರಕಾರ ಮುಂದಾಗಬೇಕು. ಜನರಲ್ಲಿ ರಂಗಪ್ರಜ್ಞೆಯನ್ನು ಬೆಳೆಸಲು ಸರಕಾರ ಪ್ರೋತ್ಸಾಹ ನೀಡಿದರೆ ಸಾಮಾಜಿಕ ಬದಲಾವಣೆ ಸ್ವಲ್ಪ ಮಟ್ಟಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಮಾಜದಲ್ಲಿ ಏಕಾಏಕಿ ಬದಲಾವಣೆ ಕಾಣಲು ಸಾಧ್ಯವಿಲ್ಲ. ಒಂದೊಂದೇ ಹೆಜ್ಜೆಯನ್ನಿಡುತ್ತಾ ರಾಜಕೀಯವಾಗಿ, ಧಾರ್ಮಿಕವಾಗಿ ಜಾಗೃತಿ ಮೂಡಿಸುತ್ತಾ ಹೋದಂತೆ ಸೈದ್ಧಾಂತಿಕವಾಗಿ ಸ್ವಲ್ಪ ಮಟ್ಟಿಗೆ ಬದಲಾವಣೆ ಕಂಡರೂ ಅದು ಯಶಸ್ಸಿನ ಮೆಟ್ಟಿಲಾಗಿರುತ್ತದೆ. ರಂಗಭೂಮಿ ಜತೆಗೆ ಎಲ್ಲರಿಗೂ ಅಗತ್ಯವಾದ ಅಕ್ಷರ ಜ್ಞಾನ, ವಯಸ್ಕರ ಶಿಕ್ಷಣ ನೀಡಬೇಕಾದ ಅಗತ್ಯವೂ ಇದೆ ಎಂದು ಸಲಹೆ ನೀಡಿದರು.

ರಂಗಭೂಮಿಗೆ ಸಾವಿಲ್ಲ: ಯಾವ ಕಲಾ ಮಾಧ್ಯಮದಲ್ಲಿಯೂ ಭೂಮಿ ಎನ್ನುವುದಿಲ್ಲ. ರಂಗಭೂಮಿ ನಿರಂತರವಾಗಿ, ಅಖಂಡವಾಗಿ ಯಾವ ಅಡೆ ತಡೆಯಿಲ್ಲದೆ ಬೆಳೆದು ಬಂದಿಲ್ಲ. ಕಲೆಯೆಂದರೆ ಆಗಾಗ ಬತ್ತಿ ಹೋಗುತ್ತದೆ, ಬರಗಾಲವೂ ಬರುತ್ತದೆ. ಆದರೆ, ಭೂಮಿಯ ಮೇಲೆ ಹೇಗೆ ಮಳೆಯು ಸುರಿದು ಬೆಳೆ ಬೆಳೆಯವುದೋ ಅದೇ ರೀತಿಯಲ್ಲಿ ರಂಗಭೂಮಿಯೂ ಚಿಗುರುತ್ತಲೇ ಬಂದಿದೆ. ರಂಗಭೂಮಿಗೆ ಸಾವಿಲ್ಲ. ಅದು ನಿರಂತರವಾಗಿ ನಡೆಯುತ್ತಲೇ ಇರುತ್ತದೆ ಎಂದು ತಿಳಿಸಿದರು.

ರಂಗ ಶಿಕ್ಷಣ ಕಡ್ಡಾಯವಾಗಲಿ: ಅಧಿಕಾರಕ್ಕೆ ಬರುವ ಎಲ್ಲ ಸರಕಾರಗಳು ಹಲವಾರು ಭರವಸೆಗಳನ್ನು ನೀಡುತ್ತಿವೆಯಾದರೂ ಅದನ್ನು ಈಡೇರಿಸಲು ಮುಂದಾಗುತ್ತಿಲ್ಲ ಎಂದ ಅವರು, ರಂಗಭೂಮಿಯನ್ನು ನಮ್ಮ ಶಿಕ್ಷಣದಲ್ಲಿಯೂ ಅಳವಡಿಸಬೇಕು. ಶಿಕ್ಷಣದಿಂದ ನಾಟಕ ರಚನೆ, ನಿರ್ದೇಶನ, ಹಾಡುಗಾರಿಕೆ, ಪ್ರದರ್ಶನ ಕಲೆಯಲ್ಲಿ ಸಹಾಯ ಮಾಡುತ್ತದೆ. ಹೀಗಾಗಿ, ರಂಗ ಶಿಕ್ಷಣವನ್ನು ನಮ್ಮ ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕಡ್ಡಾಯಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಬೈರಮಂಗಲ ರಾಮೇಗೌಡ, ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ನಗರ ಜಿಲ್ಲಾ ಕಸಾಪ ಗೌರವಾಧ್ಯಕ್ಷ ಎಂ.ತಿಮ್ಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X