Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ​ಐಪಿಎಲ್ ವಿಸ್ತರಣೆ ಸಿದ್ಧತೆ:...

​ಐಪಿಎಲ್ ವಿಸ್ತರಣೆ ಸಿದ್ಧತೆ: ತಂಡಗಳೆಷ್ಟು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ14 July 2019 9:45 AM IST
share
​ಐಪಿಎಲ್ ವಿಸ್ತರಣೆ ಸಿದ್ಧತೆ: ತಂಡಗಳೆಷ್ಟು ಗೊತ್ತೇ ?

ಮುಂಬೈ: ಅದಾನಿ ಉದ್ಯಮ ಸಮೂಹ (ಅಹ್ಮದಾಬಾದ್), ಆರ್‌ಪಿಜಿ-ಸಂಜೀವ್ ಗೊಯಾಂಕಾ ಸಮೂಹ (ಪುಣೆ) ಮತ್ತು ಟಾಟಾ ಸಮೂಹ (ರಾಂಚಿ ಮತ್ತು ಜೆಮ್‌ಶೆಡ್‌ಪುರ) ಹಾಗೂ ಇತರ ಹಲವು ಕಾರ್ಪೊರೇಟ್ ಸಂಸ್ಥೆಗಳು ಇಂಡಿಯನ್ ಪ್ರಿಮಿಯರ್ ಲೀಗ್‌ನ ಅಗ್ರಗಣ್ಯ ಬಿಡ್ಡರ್‌ಗಳಾಗುವ ನಿರೀಕ್ಷೆ ಇದ್ದು, ಐಪಿಎಲ್ ತಂಡಗಳನ್ನು 8 ರಿಂದ 10ಕ್ಕೆ ಹೆಚ್ಚಿಸಲು ನೀಲಿನಕ್ಷೆ ಸಿದ್ಧವಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2011ರಲ್ಲಿ ಇಂಥ ವಿಸ್ತರಣೆ ಪ್ರಯತ್ನ ನಡೆಸಿದ್ದರೂ, ಹಲವು ವಿವಾದಗಳ ಕಾರಣದಿಂದ ಎರಡು ವರ್ಷದೊಳಗೆ ಹಳೆ ವ್ಯವಸ್ಥೆಗೆ ಜಾರಿತ್ತು. ಇದೀಗ ಮತ್ತೊಮ್ಮೆ ಇಂಥ ಪ್ರಯತ್ನ ಅಂತಿಮ ಹಂತದಲ್ಲಿದೆ.

ಯೋಜನೆ ಸಿದ್ಧವಾಗಿದೆ, ವಿಸ್ತರಣೆ ನಿಶ್ಚಿತ, ಟೆಂಡರ್ ಪ್ರಕ್ರಿಯೆ ಮತ್ತು ಅದನ್ನು ಹೇಗೆ ಮುಂದುವರಿಸಬೇಕು ಎನ್ನುವುದನ್ನಷ್ಟೇ ನಿರ್ಧರಿಸಬೇಕಿದೆ. ಐಪಿಎಲ್‌ನ ಮುಂದಿನ ಆವೃತ್ತಿಯ ಒಳಗಾಗಿ ಹೊಸ ವ್ಯವಸ್ಥೆ ಜಾರಿಗೆ ಬರುವುದು ಖಚಿತ ಎಂದು ಉನ್ನತ ಮೂಲಗಳು ಹೇಳಿವೆ.

ಐಪಿಎಲ್ ವ್ಯವಸ್ಥೆಯ ಮಾಲಕರು ಮತ್ತು ಉನ್ನತಾಧಿಕಾರಿಗಳು ಲಂಡನ್‌ನಲ್ಲಿ ವಾರಾಂತ್ಯದಲ್ಲಿ ಸಭೆ ಸೇರಿ ಚರ್ಚಿಸಿದ್ದು, 2020ರಲ್ಲಿ ಎರಡು ಹೊಸ ಫ್ರಾಂಚೈಸಿಗಳನ್ನು ಪರಿಚಯಿಸುವುದರಿಂದ ಐಪಿಎಲ್‌ಗೆ ಪ್ರಯೋಜನವಾಗಲಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

"ಐಪಿಎಲ್ ಸಹಜ ಬೆಳವಣಿಗೆಗೆ ಅವಕಾಶವಿದೆ. ಹಲವು ಕಾರಣಗಳಿಗಾಗಿ ಐಪಿಎಲ್ ವಿಸ್ತರಿಸಲೇಬೇಕು ಎಂಬ ಸ್ಥಿತಿ ಇದೆ. ಮುಂದಿನ ಹಕ್ಕುಗಳ ಸೀಸನ್‌ನಲ್ಲಿ ಡಿಜಿಟಲ್ ಆದಾಯ ಮೂರು ಪಟ್ಟು ಹೆಚ್ಚಳದ ನಿರೀಕ್ಷೆ ಇದೆ" ಎಂದು ಮೂಲಗಳು ಹೇಳಿವೆ.

ಐಪಿಎಲ್ ಫ್ರಾಂಚೈಸಿಗಳು ಮತ್ತು ಹಕ್ಕುದಾರರ ಸಭೆ ಲಂಡನ್‌ನಲ್ಲಿ ನಡೆದಿರುವುದನ್ನು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ದೃಢಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X