Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೂರ್ವ ಇಂಡೋನೇಶ್ಯಾದಲ್ಲಿ ಭಾರೀ ಭೂಕಂಪನ

ಪೂರ್ವ ಇಂಡೋನೇಶ್ಯಾದಲ್ಲಿ ಭಾರೀ ಭೂಕಂಪನ

ವಾರ್ತಾಭಾರತಿವಾರ್ತಾಭಾರತಿ14 July 2019 4:28 PM IST
share
ಪೂರ್ವ ಇಂಡೋನೇಶ್ಯಾದಲ್ಲಿ ಭಾರೀ ಭೂಕಂಪನ

 ಇಂಡೊನೇಶ್ಯ,ಜು.14: ಪೂರ್ವ ಇಂಡೊನೇಶ್ಯದ ದುರ್ಗಮ ಮಲಾಕು ದ್ವೀಪಸ್ತೋಮದಲ್ಲಿ ರವಿವಾರ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯನ್ನು ದಾಖಲಿಸಿರುವ ಭೂಕಂಪವು ಸ್ಥಳೀಯ ಕಾಲಮಾನ ಸಂಜೆ 6.28ರ ವೇಳೆಗೆ ಸಂಭವಿಸಿದೆ. ಆದರೆ ಯಾವುದೇ ಸುನಾಮಿ ಮುನ್ನೆಚ್ಚರಿಕೆಯನ್ನು ನೀಡಲಾಗಿಲ್ಲ.

   ಭೂಕಂಪದ ಅನುಭವವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಮನೆ, ಕಟ್ಟಡಗಳಿಂದ ಹೊರಗೋಡಿ ಬಂದರು ಎಂದು ವರದಿಗಳು ತಿಳಿಸಿವೆ. ಉತ್ತರ ಮಲಾಕು ಪ್ರಾಂತದ ಟೆರ್ನೆಟ್ ಪಟ್ಟಣದ ನೈಋತ್ಯ ಭಾಗದಲ್ಲಿ, ಭೂಮಿಯಿಂದ 165 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರಬಿಂದುವಿತ್ತೆಂದು ಅಮೆರಿಕದ ಭೌಗೋಳಿಕ ಸಮೀಕ್ಷೆ ಇಲಾಖೆ ತಿಳಿಸಿದೆ.

 ಅಧಿಕಾರಿಗಳು ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದ್ದಾರೆ, ಆದರೆ ಯಾವುದೇ ಸಾವುನೋವು ಸಂಭವಿಸಿರುವ ಬಗ್ಗೆ ಈವರೆಗೆ ವರದಿಗಳು ಬಂದಿಲ್ಲ.

  ಭೂಕಂಪದ ಕೇಂದ್ರಬಿಂದುವಿನ ಸಮೀಪದ ಪಟ್ಟಣವಾದ ಲಾಬುಹಾದಲ್ಲಿ ಭೂಮಿ ನಡುಗಿದ ಅನುಭವವಾಗುತ್ತಿದ್ದಂತೆಯೇ ಭಯಭೀತರಾದ ನಾಗರಿಕರು ಮೋಟಾರು ಸೈಕಲ್‌ಗಳಲ್ಲಿ ಎತ್ತರದ ಪ್ರದೇಶಗಳಿಗೆ ಧಾವಿಸಲು ಯತ್ನಿಸಿದರೆಂದು, ಪ್ರತ್ಯಕ್ಷದರ್ಶಿ ಯಾದ ಸುದ್ದಿಸಂಸ್ಥೆ ಛಾಯಾಗ್ರಾಹಕರೊಬ್ಬರು ತಿಳಿಸಿದ್ದಾರೆ.

ದ್ವೀಪಸ್ತೋಮ ರಾಷ್ಟ್ರವಾದ ಇಂಡೊನೇಶ್ಯ ಪದೇ ಪದೇ ಭೂಕಂಪ ಹಾಗೂ ಜ್ವಾಲಾಮುಖಿಯ ಪ್ರಕೋಪಕ್ಕೆ ತುತ್ತಾಗುತ್ತಿದೆ. ಪೆಸಿಫಿಕ್ ಪ್ರದೇಶದಲ್ಲಿ ಭೂಮಿ ಟೆಕ್ನೊಟಿಕ್ ಪದರಗಳು ಪರಸ್ಪರ ಡಿಕ್ಕಿಹೊಡೆಯುವ ಪ್ರದೇಶದಲ್ಲಿ ಆ ದೇಶವಿರುವುದೇ ಇದಕ್ಕೆ ಕಾರಣ.

   ಕಳೆದ ವರ್ಷ ಸುಲಾವೆಸಿ ದ್ವೀಪದ ಪಾಲು ನಗರದಲ್ಲಿ 7.5 ರಿಕ್ಟರ್ ತೀವ್ರತೆಯ ಭೂಕಂಪ ಸಂಭವಿಸಿ, 2200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.2004ರ ಡಿಸೆಂಬರ್ 26ರಂದು ಸುಮಾತ್ರ ದ್ವೀಪದ ಕರಾವಳಿ ಪ್ರದೇಶದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸುನಾಮಿ ಅಲೆಗಳು ಎದ್ದು, ಇಂಡೊನೇಶ್ಯದ 1.70 ಲಕ್ಷ ಮಂದಿ ಸೇರಿದಂತೆ ಹಿಂದೂ ಮಹಾಸಾಗರ ಪ್ರದೇಶದಾದ್ಯಂತ 2.29 ಲಕ್ಷ ಮಂದಿ ಮೃತಪಟ್ಟಿದ್ದರು.

ಆಸ್ಟ್ರೇಲಿಯದಲ್ಲೂ ನಡುಗಿದ ಭೂಮಿ

  ಆಸ್ಟ್ರೇಲಿಯದ ಕರಾವಳಿ ವಿಹಾರಧಾಮವಾದ ಬ್ರೂಮ್‌ನಲ್ಲಿ ರವಿವಾರ 6.9 ರಿಕ್ಟರ್ ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಅಮೆರಿಕದ ಭೌಗೋಳಿಕ ಸಮೀಕ್ಷೆ ಇಲಾಖೆ ತಿಳಿಸಿದೆ.

  ಭೂಕಂಪದಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿರುವ ಬಗ್ಗೆ ವರದಿ ಯಾಗಿಲ್ಲ. ಪಶ್ಚಿಮ ಆಸ್ಟ್ರೇಲಿಯ ರಾಜ್ಯದ ಬ್ರೂಮ್ ಪಟ್ಟಣದ ಸಮುದ್ರಪ್ರದೇಶದಿಂದ 203 ಕಿ.ಮೀ. ದೂರದಲ್ಲಿ ಸಮುದ್ರದ 33 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿರುವುದಾಗಿ ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X