Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜಲ್‌ಪಲ್ಕೆ: ಮದ್ರಸಾ ಉಸ್ತಾದರ...

ಮಂಜಲ್‌ಪಲ್ಕೆ: ಮದ್ರಸಾ ಉಸ್ತಾದರ ಕೃಷಿಕ್ರಾಂತಿ

ಅಕ್ಬರ್ ಅಲಿ, ಕಾವಳಕಟ್ಟೆಅಕ್ಬರ್ ಅಲಿ, ಕಾವಳಕಟ್ಟೆ14 July 2019 9:28 PM IST
share
ಮಂಜಲ್‌ಪಲ್ಕೆ: ಮದ್ರಸಾ ಉಸ್ತಾದರ ಕೃಷಿಕ್ರಾಂತಿ

ಪುಂಜಾಲಕಟ್ಟೆ, ಜು.12: ಅಲ್ಲಿ ಮದ್ರಸ ವಿದ್ಯಾರ್ಥಿಗಳಿಗೆ ಧಾರ್ಮಿಕ ವಿದ್ಯಾಭ್ಯಾಸದ ಜೊತೆಗೆ ಪರಿಸರ, ಕೃಷಿ, ಸಾಮಾನ್ಯ ಜ್ಞಾನದ ಬಗೆಗೂ ಮಾಹಿತಿ ಸಿಗುತ್ತವೆ. ಸಣ್ಣ ಪ್ರಾಯದವರಿಂದ ಹಿಡಿದು ಹಿರಿಯರ ವರೆಗೆ ಸವ ವಿದ್ಯಾರ್ಥಿಗಳಿಗೂ ಕೃಷಿ ಚಟುವಟಿಕೆಗಳ ಅರಿವು ಮತ್ತು ಆಸಕ್ತಿ ಮೂಡಿಸಿದ ಕೀರ್ತಿ ಮದ್ರಸಾ ಅಧ್ಯಾಪಕ ಮುಹಮ್ಮದ್ ಶರೀಫ್ ಸಅದಿ ಅವರಿಗೆ ಸಲ್ಲುತ್ತದೆ.

ಪುಂಜಾಲಕಟ್ಟೆ ಸಮೀಪದ ಮಂಜಲ್‌ಪಲ್ಕೆ ಎಂಬಲ್ಲಿ ರಹ್ಮಾನಿಯಾ ಜುಮಾ ಮಸೀದಿ ಮತ್ತು ರಹ್ಮಾನಿಯಾ ಮದ್ರಸಾ ಇದ್ದು, ಕೇವಲ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿರುವ ತರಕಾರಿ, ಹೂ ಗಿಡಗಳು ನೋಡುಗರ ಕಣ್ಣಿಗೆ ಇಂಪು ನೀಡುತ್ತದೆ. ವಿದ್ಯಾರ್ಥಿಗಳು ಬಿಡುವಿನ ವೇಳೆ ಗಿಡಗಳಿಗೆ ನೀರೆರೆಯುತ್ತಾ ಮದ್ರಸಾ ತರಗತಿಗಳಿಗೆ ಹಾಜರಾಗುತ್ತಾರೆ.

ಪ್ರವಾದಿಯವರು ಪರಿಸರ ಮತ್ತು ಕೃಷಿಯ ಬಗ್ಗೆ ಹೆಚ್ಚು ಆಸಕ್ತಿಯಿದ್ದವರಾಗಿದ್ದು, ಇಸ್ಲಾಮ್ ಕೃಷಿ ಮತ್ತು ಪರಿಸರ ರಕ್ಷಣೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದೆ. ಈ ವಿಚಾರವೇ ಕೃಷಿಯತ್ತ ನನಗೆ ಆಸಕ್ತಿ ಮೂಡಿಸಿದೆ ಎಂದು ಶರೀಫ್ ಸಅದಿ ವಿವರಿಸುತ್ತಾರೆ.

ಬೆಳೆಗಳು: ಬೆಂಡೆಕಾಯಿ, ಸೌತೆ, ಬಸಳೆ, ಹೀರೆಕಾಯಿ, ಮರಗೆಣಸು, ಕಲ್ಲಂಗಡಿ, ಪಪ್ಪಾಯಿ ಇನ್ನಿತರ ಬೆಳೆಗಳು ಯಾವುದೇ ರೋಗಕ್ಕೆ ತುತ್ತಾಗದಂತೆ ಬೆಳೆಯುವಲ್ಲಿ ಯಶಸ್ವಿಯಾಗಿದ್ದೇವೆ. ಕಳೆದ ವರ್ಷ ಈ ಎಲ್ಲ ತರಕಾರಿಗಳನ್ನು ಬೆಳೆಯಲು ನೀರಿನ ಸಮಸ್ಯೆ ಇರಲಿಲ್ಲ. ಈ ಬಾರಿ ನೀರಿನ ಸಮಸ್ಯೆ ಎದುರಾಗಿದ್ದು, ಕೆಲವೊಂದು ಬೆಳೆಗಳನ್ನು ಕೈಬಿಡಬೇಕಾಯಿತು. ಆದರೆ ಇದೀಗ ದಾನಿಯೋರ್ವರು ಬೋರ್‌ವೆಲ್ ಕೊರೆಸಿದ್ದರಿಂದ ನೀರಿನ ಸಮಸ್ಯೆ ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ತರಕಾರಿ ಸೇರಿದಂತೆ ಇನ್ನಿತರ ಫಲ ನೀಡುವ ಗಿಡಗಳನ್ನು ಬೆಳೆಯುವ ಯೋಜನೆ ಇದೆ ಎಂದು ಶರೀಫ್ ಸಅದಿ ಹೇಳುತ್ತಾರೆ.

ಪೇಪರ್ ಲೋಟದಲ್ಲಿ ಬೀಜ ಬಿತ್ತನೆ: ಮಸೀದಿ, ಮದ್ರಸಾದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಚಹಾ, ತಂಪು ಪಾನೀಯಕ್ಕೆ ಬಳಸುವ ಲೋಟವನ್ನು ಎಲ್ಲೆಂದರಲ್ಲಿ ಬಿಸಾಡದೆ ಸಂಸ್ಕರಿಸಿಟ್ಟು, ಅದರಲ್ಲಿ ವಿವಿಧ ಬಗೆಯ ತರಕಾರಿಗಳ ಬೀಜ ಬಿತ್ತನೆ ಮಾಡಲಾಗುತ್ತಿದೆ.

ಪ್ರಕೃತಿ ಮಡಿಲಲ್ಲಿ ಕ್ಲಾಸ್: ನಾಲ್ಕು ಗೋಡೆಗಳ ಮಧ್ಯೆ ದಿನಂಪ್ರತಿ ತರಗತಿ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ನೀರಸ ಉಂಟಾಗುವುದು ಸಹಜ. ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಮದ್ರಸಾ ತರಗತಿ ಮತ್ತು ಸಾಮಾನ್ಯ ಜ್ಞಾನವನ್ನು ಶರೀಫ್ ಉಸ್ತಾದ್ ಪ್ರಕೃತಿ ಮಡಿಲಲ್ಲಿ ಧಾರೆಯೆರೆಯುತ್ತಾರೆ.

ವಾಟ್ಸ್‌ಆ್ಯಪ್ ಮೂಲಕ ಹರಾಜು

ಮದ್ರಸಾ ವಿದ್ಯಾರ್ಥಿಗಳ ಪೋಷಕರು ಸೇರಿದಂತೆ ಸ್ಥಳೀಯರ ವಾಟ್ಸ್ ಆ್ಯಪ್ ಗ್ರೂಪ್ ರಚಿಸಲಾಗಿದ್ದು, ಬೆಳೆಗಳನ್ನು ಈ ಗ್ರೂಪ್ ಮೂಲಕ ಹರಾಜು ಮಾಡಲಾಗುತ್ತದೆ. ಹರಾಜಿನಲ್ಲಿ ಬಂದ ಹಣವನ್ನು ಮದ್ರಸಾದ ಅಭಿವೃದ್ಧಿ ಚಟುವಟಿಕೆಗಳಿಗೆ ವಿನಿಯೋಗಿಸಲಾಗುತ್ತದೆ.

share
ಅಕ್ಬರ್ ಅಲಿ, ಕಾವಳಕಟ್ಟೆ
ಅಕ್ಬರ್ ಅಲಿ, ಕಾವಳಕಟ್ಟೆ
Next Story
X