Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರಕವಿ ಬಿರುದು ಸಂಬಂಧ ಸರಕಾರ...

ರಾಷ್ಟ್ರಕವಿ ಬಿರುದು ಸಂಬಂಧ ಸರಕಾರ ನಿರ್ಣಯ ಕೈಗೊಳ್ಳಲಿ: ಡಾ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ14 July 2019 9:59 PM IST
share
ರಾಷ್ಟ್ರಕವಿ ಬಿರುದು ಸಂಬಂಧ ಸರಕಾರ ನಿರ್ಣಯ ಕೈಗೊಳ್ಳಲಿ: ಡಾ.ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಜು.14: ಕನ್ನಡದ ಒಬ್ಬರಿಗೆ ‘ರಾಷ್ಟ್ರಕವಿ’ ಬಿರುದು ನೀಡುವ ಸಂಬಂಧ ರಾಜ್ಯ ಸರಕಾರವೇ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಇಂದಿಲ್ಲಿ ಮನವಿ ಮಾಡಿದ್ದಾರೆ.

ರವಿವಾರ ನಗರದ ಬಿಎಂಶ್ರೀ ಪ್ರತಿಷ್ಠಾನದಿಂದ ಆಯೋಜಿಸಿದ್ದ ‘ಕುವೆಂಪು ಸಾಹಿತ್ಯ ಮಂಥನ’ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡದಲ್ಲಿ ರಾಷ್ಟ್ರಕವಿ ಬಿರುದು ನೀಡುವ ವಿಚಾರವಾಗಿ ಅನೇಕ ವರ್ಷಗಳಿಂದಲೂ ಚರ್ಚೆ ನಡೆಯುತ್ತಲೇ ಇದೆ. ಅದು ಅಂತಿಮ ನಿರ್ಧಾರವಾಗುವಲ್ಲಿ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೇ ಈ ಸಂಬಂಧ ಒಂದು ನಿರ್ಧಾರ ಪ್ರಕಟಿಸಬೇಕೆಂದು ಹೇಳಿದರು.

ಕುವೆಂಪು ಸೇರಿದಂತೆ ಮೂರು ಜನರಿಗೆ ಕನ್ನಡದಲ್ಲಿ ರಾಷ್ಟ್ರಕವಿ ಬಿರುದು ಸಿಕ್ಕಿದೆ. ಆ ಬಳಿಕ ಅದೊಂದು ದೊಡ್ಡ ಚರ್ಚೆಯ ವಿಷಯವಾಗಿ ಉಳಿದುಬಿಟ್ಟಿದೆ. 2014 ರಲ್ಲಿ ಈ ಸಂಬಂಧ ರಾಜ್ಯ ಸರಕಾರ ಕೋ.ಚನ್ನಬಸಪ್ಪ ನೇತೃತ್ವದಲ್ಲಿ ಸಮಿತಿಯನ್ನೂ ರಚನೆ ಮಾಡಲಾಗಿದ್ದು, ಅದು ವರದಿಯನ್ನು ರಾಜ್ಯ ಸರಕಾರಕ್ಕೆ ನೀಡಿದೆ. ಆದರೆ, ಈ ಸಮಿತಿಯಲ್ಲಿದ್ದ ಸದಸ್ಯರಲ್ಲಿ ಬಹುತೇಕರು ಈ ಬಿರುದನ್ನು ವಿರೋಧಿಸುತ್ತಿದ್ದವರೇ ಆಗಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.

ರಾಷ್ಟ್ರಕವಿ ಬಿರುದು ಸಂಬಂಧ ರಚಿಸಿದ್ದ ಸಮಿತಿ ನೀಡಿರುವ ವರದಿಯೂ ಗೊಂದಲಗಳಿಂದ ಕೂಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವೇ ಈ ಸಂಬಂಧ ಒಂದು ನಿರ್ಣಯ ಕೈಗೊಳ್ಳಬೇಕು ಎಂದ ಅವರು, ಕುವೆಂಪು ಅವರ ಕವಿತೆಯನ್ನು 2004ರಲ್ಲಿ ಅಧಿಕೃತವಾಗಿ ನಾಡಗೀತೆ ಎಂದು ಘೋಷಿಸಲಾಯಿತು. ಬಳಿಕ ನಾಡಗೀತೆಯ ಅವಧಿ ಎಷ್ಟಿರಬೇಕು ಇತ್ಯಾದಿ ವಿಚಾರಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು 2006 ಮತ್ತು 2015ರಲ್ಲಿ ಸಮಿತಿ ರಚಿಸಲಾಗಿದೆ. ಇದುವರೆಗೂ ಒಂದು ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಅವರು ದೂರಿದರು.

ಕುವೆಂಪುಗೆ ವಿಮರ್ಶಾ ನ್ಯಾಯ ಸಿಗಲಿಲ್ಲ: ಕುವೆಂಪು ಆದ್ಯತೆಯ ಕವಿ. ಸಾಂಸ್ಕೃತಿಕ ರಾಜಕಾರಣದ ನಡುವೆ ಶಿಖರ ಪ್ರಾಯವಾದ ಪ್ರತಿಮಾಕೃತಿ ಕುವೆಂಪು. ಅವರು ಇಂದಿಗೂ ಎಂದೆಂದಿಗೂ ಸಲ್ಲುವ ಕವಿ. ಸಾಹಿತ್ಯ ಕೃತಿಗಳ ಮುಖಾಂತರ ಜೀವನಶಕ್ತಿಯಾಗಿದ್ದಾರೆ. ನವ್ಯ ಸಾಹಿತ್ಯ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಕಾಲದಲ್ಲಿ ಕುವೆಂಪು ಅವರ ಬಗ್ಗೆ ಟೀಕೆ, ವ್ಯಂಗ್ಯಗಳು ಕೇಳಿ ಬಂದವು. ಅವರನ್ನು ಮಹಾಕವಿ ಎಂದು ಒಪ್ಪುವ ವಿಚಾರದಲ್ಲಿ ಭಿನ್ನಾಭಿಪ್ರಾಯವಿತ್ತು. ಅವರ ಸಾಹಿತ್ಯಕ್ಕೆ ವಿಮರ್ಶೆ ನ್ಯಾಯ ಎಷ್ಟು ಸಿಗಬೇಕಿತ್ತೋ ಅಷ್ಟು ಸಿಗಲಿಲ್ಲ ಎಂದು ಹೇಳಿದರು.

ಕುವೆಂಪು ಯಾವುದೋ ಒಂದು ಜಾತಿ, ಧರ್ಮದ ವಿರುದ್ಧ ಬರೆಯಲಿಲ್ಲ. ಅವರು ಏಕಕಾಲಕ್ಕೆ ವಸಾಹತುಶಾಹಿ, ವರ್ಣ ವ್ಯವಸ್ಥೆಯ ವಿರೋಧಿಯಾಗಿದ್ದರು. ತಮ್ಮ ವೈಚಾರಿಕತೆ ಹಾಗೂ ಸಾಹಿತ್ಯ ಕೃತಿಗಳಲ್ಲಿ ಸಾಮಾಜಿಕ ಸಂರಚನೆಯ ಒಟ್ಟು ಸ್ವರೂಪವನ್ನು ತಾತ್ವಿಕ ನೆಲೆಯಲ್ಲಿ ವಿಶ್ಲೇಷಿಸುತ್ತಾ ಮಾನವೀಯ ಸಮಾಜ ಕಟ್ಟುವ ಬಗೆಯನ್ನು ತೋರಿಸಿದರು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಬಿಎಂಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ.ಎಂ.ಎಚ್.ಕೃಷ್ಣಯ್ಯ, ಅಧ್ಯಕ್ಷ ಡಾ.ಆರ್. ಲಕ್ಷ್ಮೀನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X