Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೇ.10ರಷ್ಟು ಮೀಸಲಾತಿ ಹಿಂದುಳಿದ...

ಶೇ.10ರಷ್ಟು ಮೀಸಲಾತಿ ಹಿಂದುಳಿದ ವರ್ಗಗಳಿಗೆ ಮಾರಕ: ಎಚ್.ಎಂ.ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ14 July 2019 10:01 PM IST
share
ಶೇ.10ರಷ್ಟು ಮೀಸಲಾತಿ ಹಿಂದುಳಿದ ವರ್ಗಗಳಿಗೆ ಮಾರಕ: ಎಚ್.ಎಂ.ರೇವಣ್ಣ

ಬೆಂಗಳೂರು, ಜು.14: ಕೇಂದ್ರ ಸರಕಾರ ಇತ್ತೀಚಿಗೆ ಜಾರಿ ಮಾಡಿದ ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಗಳಿಗೆ ಶೇ.10 ರಷ್ಟು ಮೀಸಲಾತಿಯು ಹಿಂದುಳಿದ ವರ್ಗಗಳಿಗೆ ಮಾರಕವಾದುದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಹೇಳಿದ್ದಾರೆ.

ರವಿವಾರ ನಗರದ ದೇವರಾಜು ಅರಸು ಭವನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ದೇವರಾಜ ಅರಸು ಸಂಶೋಧನಾ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ಮೀಸಲಾತಿ ಕುರಿತ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರಕಾರವು ಮೇಲ್ಜಾತಿಗಳ ಹಿತ ಕಾಪಾಡುವ ಉದ್ದೇಶದಿಂದ ಶೇ.10 ರಷ್ಟು ಮೀಸಲಾತಿಯನ್ನು ಚುನಾವಣಾ ಸಂದರ್ಭದಲ್ಲಿ ಜಾರಿ ಮಾಡಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಭಾರಿ ಪ್ರಮಾಣದಲ್ಲಿ ಅನ್ಯಾಯವಾಗಲಿದೆ. ಮೇಲ್ಜಾತಿಯವರಿಗೆ ಮೀಸಲಾತಿ ನೀಡುವ ಮಸೂದೆ ತರುವ ಮೊದಲು ಜನಾಭಿಪ್ರಾಯ ಸಂಗ್ರಹಿಸದೇ ಏಕಾಏಕಿ ಜಾರಿ ಮಾಡಿದ್ದಾರೆ ಎಂದು ದೂರಿದರು.

ವಿಶ್ವದ ಹಲವು ರಾಷ್ಟ್ರಗಳಲ್ಲಿ ಪ್ರಜಾಪ್ರಭುತ್ವವಿದ್ದು, ತನ್ನದೇ ಆದ ಸಂವಿಧಾನವನ್ನು ಹೊಂದಿದೆ. ಆದರೆ, ಈ ಎಲ್ಲ ರಾಷ್ಟ್ರಗಳಿಗಿಂತ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ನಮ್ಮ ಭಾರತದ ಸಂವಿಧಾನ ಶ್ರೇಷ್ಟವಾದುದಾಗಿದೆ. ನಮ್ಮ ಸಂವಿಧಾನದಲ್ಲಿ ಎಲ್ಲ ಸಮುದಾಗಳಿಗೂ ಅವಕಾಶ ನೀಡಲಾಗಿದೆ. ಸಮಾನತೆ ಕಲ್ಪಿಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಮೀಸಲಾತಿಯನ್ನೂ ನೀಡಲಾಗಿದೆ ಎಂದು ನುಡಿದರು.

ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಸಂವಿಧಾನವನ್ನು ಬದಲಿಸಲು ಪ್ರಯತ್ನ ಮಾಡುತ್ತಿದ್ದಾರೆ. ಸಂವಿಧಾನವನ್ನು ಬದಲಿಸಿ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ, ಸ್ಪೃಶ್ಯ, ಅಸ್ಪೃಶ್ಯ ಸೇರಿದಂತೆ ಎಲ್ಲರ ಹಕ್ಕುಗಳನ್ನು ನಾಶ ಮಾಡಲು ಪಣತೊಟ್ಟಿದ್ದಾರೆ. ಹೀಗಾಗಿ, ಎಲ್ಲರೂ ಒಗ್ಗಟ್ಟಿನಿಂದ ಇದರ ವಿರುದ್ಧ ಹೋರಾಡಲು ಸಜ್ಜಾಗಬೇಕೆಂದು ಕರೆ ನೀಡಿದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ಮಾತನಾಡಿ, ಕೇಂದ್ರ ಸರಕಾರ ಜಾರಿಗೆ ತಂದಿರುವ ಶೇ.10 ರಷ್ಟು ಮೀಸಲಾತಿಯಿಂದಾಗಿ ಮೇಲ್ಜಾತಿಗಳ ನಡುವೆ ಶಿಕ್ಷಣ, ಉದ್ಯೋಗದಲ್ಲಿ ಸಮಬಲ, ಪೈಪೋಟಿ ಸಾಧಿಸಲು ಕಷ್ಟವಾಗುತ್ತದೆ. ಹೀಗಾಗಿ, ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಲೇಬೇಕಿದೆ ಎಂದರು.

ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 199 ಜಾತಿ ಹಾಗೂ ಉಪ ಜಾತಿಗಳಿವೆ. ಆದರೆ, ರಾಜ್ಯ ಸರಕಾರ ತಯಾರಿಸಿದ ಒಬಿಸಿ ಪಟ್ಟಿಯಲ್ಲಿ 20 ಜಾತಿ ಮತ್ತು ಉಪ ಜಾತಿಗಳಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಪಟ್ಟಿಗೆ ತಾಳೆಯಾಗುತ್ತಿಲ್ಲ ಎಂದ ಅವರು, ಮೀಸಲಾತಿಯನ್ನು ಜಾತಿಯ ಆಧಾರದಲ್ಲಿ ನೀಡಬಾರದು, ಆರ್ಥಿಕವಾಗಿ ಹಿಂದುಳಿದವರಿಗೆ ನೀಡಬೇಕೆಂದು ಸಂವಿಧಾನದಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ ಎಂದು ಹೇಳಿದರು.

ಮೀಸಲಾತಿ ನೀಡುವ ಸಂದರ್ಭದಲ್ಲಿ ಶೇ.50ರಷ್ಟು ಮೀಸಲಾತಿ ಮೀರಬಾರದು ಎಂದು ಎಂಬ ನಿಯಮವಿದೆ. ಆದರೆ, ಅದು ಉಲ್ಲಂಘನೆಯಾಗುತ್ತಿದೆ ಎಂದ ಅವರು, ಮೇಲ್ವರ್ಗದವರಿಗೆ ಮೀಸಲಾತಿ ನೀಡಬಾರದು ಎಂದೇನಿಲ್ಲ. ಆದರೆ, ಯಾವ ಆಧಾರದಲ್ಲಿ ನೀಡಲಾಗುತ್ತಿದೆ ಎಂಬುದು ಮುಖ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ದೇವರಾಜ ಅರಸು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ನರಸಿಂಹಯ್ಯ, ಬಿ.ಕೆ.ರವಿ.ನಳಿನಾಕ್ಷಿ ಸಣ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X