Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಇಲಾಖೆಗಳ ಖಾಸಗೀಕರಣದಿಂದ...

ಸರಕಾರಿ ಇಲಾಖೆಗಳ ಖಾಸಗೀಕರಣದಿಂದ ಅನಾನುಕೂಲ: ಜವರಾಯಿಗೌಡ

ವಾರ್ತಾಭಾರತಿವಾರ್ತಾಭಾರತಿ14 July 2019 10:19 PM IST
share

ಬೆಂಗಳೂರು, ಜು.14: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಎಲ್ಲ ಇಲಾಖೆಗಳನ್ನು ಖಾಸಗೀಕರಣ ಮಾಡಲು ಹೊರಟಿರುವುದರಿಂದ ಸಾಕಷ್ಟು ಅನಾನುಕೂಲವಾಗಲಿದೆ ಗ್ರೂಪ್ ಸಿ ಕರ್ನಾಟಕ ವಲಯದ ಅಧ್ಯಕ್ಷ ಜವರಾಯಿಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಖಾಸಗಿ ಹೋಟೇಲ್‌ನಲ್ಲಿ ಅಖಿಲ ಭಾರತ ಅಂಚೆ ನೌಕರರ ಸಂಘ ಆಯೋಜಿಸಿದ್ದ ಪೊಸ್ಟ್‌ಮೆನ್ ಮತ್ತು ಎಂಟಿಎಸ್ ಬೆಂಗಳೂರು ಪೂರ್ವ ವಿಭಾಗ ವಲಯದ 32ನೆ ದ್ವೈವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರೈಲ್ವೆ ಇಲಾಖೆಯಲ್ಲಿ ಈಗ ತೇಜಸ್ ಎಂಬ ಖಾಸಗಿ ರೈಲನ್ನು ಓಡಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಇದರಿಂದ, ಸರಕಾರಿ ನೌಕರರಿಗೆ ತೊಂದರೆ ಆಗಲಿದೆ. ಹೀಗಾಗಿ, ಸರಕಾರಿ ವಲಯವನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.

ಕಾರ್ಮಿಕರ ಪರವಾಗಿ ಇರುವ ಕಾನೂನುಗಳನ್ನು ಕಡಿತಗೊಳಿಸುವ ಹುನ್ನಾರ ನಡೆಯುತ್ತಿದೆ. ಇದರಿಂದ, ಬಂಡವಾಳ ಶಾಹಿಗಳು ಬಲಿಷ್ಠರಾಗುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ತಿಳಿಸಿದರು. 1968ರಲ್ಲಿ ನಡೆದ ಹೋರಾಟದಲ್ಲಿ ಹಲವರು ಕೆಲಸ ಕಳೆದುಕೊಂಡಿದ್ದರು. ಇನ್ನು ಕೆಲವರು ಮೃತಪಟ್ಟರು. ಆದಾದ ಬಳಿಕ 1989ರಲ್ಲಿ ಮತ್ತೆ ಸಂಘಟನೆ ಕಟ್ಟಲಾಯಿತು. ಮುಷ್ಕರ ಅಂದರೆ ಭಯದ ವಾತಾವರಣ ಈಗ ಅಂಚೆ ಇಲಾಖೆಯಲ್ಲಿ ನಿರ್ಮಾಣವಾಗಿದೆ ಎಂದು ಹೇಳಿದರು.

ಕರ್ನಾಟಕ ವಲಯ ಗ್ರೂಪ್ ಸಿ ಮಾಜಿ ವಲಯ ಕಾರ್ಯದರ್ಶಿ ಎಸ್.ಎಸ್.ಮಂಜುನಾಥ್ ಮಾತನಾಡಿ, ನೌಕರರು ಸಂಘಟನೆ ಸ್ಥಾಪನೆ ಹಿಂದಿರುವ ಉದ್ದೇಶವನ್ನು ಅರಿಯಬೇಕು. ತಳಮಟ್ಟದಲ್ಲಿ ಕಟ್ಟಲು ಶ್ರಮಿಸಬೇಕು. ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಸರಕಾರದ ಕಾರ್ಮಿಕ ನೀತಿಗಳ ವಿರುದ್ಧ ದನಿ ಎತ್ತಬೇಕು. ಸಂಘಟನೆ ಕ್ರಿಯಾಶೀಲವಾಗದಿದ್ದಲ್ಲಿ ನೌಕರರು ಸತ್ತಂತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 25 ರೂ.ಭಕ್ಷಿಸು ಪಡೆದವರನ್ನು ವಜಾ ಮಾಡಲಾಗುತ್ತಿದೆ. ಕೋಟಿಗಟ್ಟಲೆ ಹಣವನ್ನು ವಿವಿಧ ಯೋಜನೆಗಳ ಹೆಸರಿನಲ್ಲಿ ನುಂಗಿ ಹಾಕಲಾಗುತ್ತಿದೆ. ಮಾಡಬಾರದ ಅವ್ಯವಹಾರಗಳನ್ನು ಉನ್ನತ ಮಟ್ಟದ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕಾರ್ಯಕ್ರಮದಲ್ಲಿ ಪೋಸ್ಟ್‌ಮನ್ ಮತ್ತು ಎಂಟಿಎಸ್ ಕರ್ನಾಟಕ ವಲಯದ ಅಧ್ಯಕ್ಷ ಬಿ.ವಿಜಯ ನಾಯರಿ, ಪಿ.ಮಲ್ಲಿಕಾರ್ಜುನ್, ಎಚ್.ಆರ್.ಈಶ್ವರಪ್ಪ, ಜಿ.ಜಾನಕಿರಾಂ, ಸೀತಲಕ್ಷ್ಮೀ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X