Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾತಂತ್ರ್ಯಾ ನಂತರ ಇಂತಹ ಸಂಕಷ್ಟದ...

ಸ್ವಾತಂತ್ರ್ಯಾ ನಂತರ ಇಂತಹ ಸಂಕಷ್ಟದ ಕಾಲವನ್ನು ಮುಸ್ಲಿಮರು ಎಂದೂ ಎದುರಿಸಿಲ್ಲ: ಹರ್ಷ ಮಂದರ್

ವಾರ್ತಾಭಾರತಿವಾರ್ತಾಭಾರತಿ14 July 2019 10:26 PM IST
share
ಸ್ವಾತಂತ್ರ್ಯಾ ನಂತರ ಇಂತಹ ಸಂಕಷ್ಟದ ಕಾಲವನ್ನು ಮುಸ್ಲಿಮರು ಎಂದೂ ಎದುರಿಸಿಲ್ಲ: ಹರ್ಷ ಮಂದರ್

ಹೊಸದಿಲ್ಲಿ, ಜು. 14: ಸ್ವಾತಂತ್ರ್ಯ ದೊರೆತ ಬಳಿಕ ಭಾರತೀಯ ಮುಸ್ಲಿಮರು ಇಂತಹ ಸಂಕಷ್ಟದ ಕಾಲವನ್ನು ಎಂದೂ ಎದುರಿಸಿಲ್ಲ ಎಂಬುದು ನನ್ನ ಭಾವನೆ. ಇದು ಭಾರತೀಯ ಮುಸ್ಲಿಮರಿಗೆ ಮಾತ್ರವಲ್ಲ, ಭಾರತದ ಜಾತ್ಯತೀತತೆಯ ಬಗ್ಗೆ ನಂಬಿಕೆ ಇರಿಸಿದ ಎಲ್ಲರಿಗೂ ಬಿಕ್ಕಟ್ಟಿನ ಸಮಯ ಎಂದು ಸಾಮಾಜಿಕ ಹೋರಾಟಗಾರ ಹರ್ಷ ಮಂದರ್ ಹೇಳಿದ್ದಾರೆ.

 ‘‘ಈ ಸಮಸ್ಯೆ ಕುರಿತು ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷ ಕೂಡ ಧ್ವನಿ ಎತ್ತಿಲ್ಲ. 2014ರಲ್ಲಿ ಜನರು ಭರವಸೆಗೆ ಮತ ಹಾಕಿದ್ದರು. ಆದರೆ, ಈ ಭಾರಿ ಪೂರ್ಣ ಪ್ರಕ್ರಿಯೆಯೇ ದ್ವೇಷದಿಂದ ಕೂಡಿತ್ತು’’ ಎಂದು ಅವರು ಹೇಳಿದರು. “ಕಾರವನ್-ಎ-ಮೊಹಬ್ಬತ್‌ನ ಒಂದು ಭಾಗವಾಗಿ ನಾನು ದೇಶಾದ್ಯಂತ ಸಂಚರಿಸುತ್ತಿದ್ದೇನೆ. ಗುಂಪು ಥಳಿತಕ್ಕೊಳಗಾದ ಪ್ರತಿ ಕುಟುಂಬವನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದೇನೆ. ನಾನು ಅವರಲ್ಲಿ ತುಂಬಾ ದುಃಖ, ಪ್ರತ್ಯೇಕತೆಯ ಭಾವ ಹಾಗೂ ಭೀತಿ ನೋಡಿದೆ. ನಮ್ಮ ಸಮಾಜ ಆಳದಿಂದ ಧ್ರುವೀಕರಣಗೊಳ್ಳುತ್ತಿದೆ ಎಂಬುದು ನನ್ನ ಭಾವನೆ ಎಂದು” ಅವರು ತಿಳಿಸಿದರು.

 ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕ ‘ವಿಸಿಬಲ್ ಮುಸ್ಲಿಂ-ಇನ್‌ವಿಸಿಬಲ್ ಸಿಟಿಝನ್: ಅಂಡರ್‌ಸ್ಟಾಂಡ್ ಇಸ್ಲಾಂ ಇನ್ ಇಂಡಿಯನ್ ಡೆಮಾಕ್ರೆಸಿ’ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಮುಸ್ಲಿಮರ ಮೇಲಿನ ಗುಂಪಿನ ಥಳಿತದ ತೀವ್ರ ಕ್ರೂರತೆಯ ಕಡೆಗೆ ಬೆಟ್ಟು ಮಾಡಿದ ಮಂದರ್, ‘‘ಕಣ್ಣುಗಳನ್ನು ಹೊರಗೆ ತೆಗೆಯಲಾಗುತ್ತಿದೆ, ದೇಹವನ್ನು ಛಿದ್ರಗೊಳಿಸಲಾಗುತ್ತಿದೆ. ಇದು ಗುಂಪು ಹತ್ಯೆಗಳ ರೀತಿ. ಇಂತಹ ಹತ್ಯೆಗಳು ವ್ಯಕ್ತಿಯನ್ನು ಜೀವನ ಪೂರ್ತಿ ಜೈಲು ಕಂಬಿಗಳ ಹಿಂದೆ ನಿಲ್ಲಿಸುತ್ತದೆ. ಆದರೆ, ಈಗ ಗುಂಪಿನಿಂದ ಹಲ್ಲೆ-ಹತ್ಯೆ ವೌಲ್ಯಯುತವಾಗಿದೆ. ಹತ್ಯೆಗೈದವರು ಹೀರೋಗಳಾಗುತ್ತಾರೆ.’’ ಎಂದರು.

 ಕಾಂಗ್ರೆಸ್ ಸರಕಾರವಿರುವ ರಾಜಸ್ಥಾನದಲ್ಲಿ ಕೂಡ ಪೊಲೀಸರ ಪಾತ್ರ ಪ್ರಶ್ನಾರ್ಹ. ಸಂತ್ರಸ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ. ಗುಂಪು ಹಲ್ಲೆ ನಡೆದ ಸ್ಥಳಕ್ಕೆ ಕಾಂಗ್ರೆಸ್‌ನ ಒಬ್ಬನೇ ಒಬ್ಬ ರಾಜಕಾರಣಿ ಭೇಟಿ ನೀಡಿ ಕಾಳಜಿ ವ್ಯಕ್ತಪಡಿಸಿರುವುದನ್ನು ನಾನು ನೋಡಿಲ್ಲ. ಯಾವುದೇ ರಾಜಕೀಯ ಪಕ್ಷಗಳು ಕೂಡ ಸಂತ್ರಸ್ತರ ಬಗ್ಗೆ ಕಾಳಜಿ ತೋರಿಸಿಲ್ಲ ಎಂದು ಮಂದರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X