Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ಷಣಾ ಉತ್ಪನ್ನ ರಫ್ತು ಗುರಿ ಮೀರುವ...

ರಕ್ಷಣಾ ಉತ್ಪನ್ನ ರಫ್ತು ಗುರಿ ಮೀರುವ ನಿರೀಕ್ಷೆ: ಅಜಯ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ14 July 2019 11:44 PM IST
share

ಕೋಲ್ಕತಾ, ಜು.14: ಇತ್ತೀಚಿನ ದಿನಗಳಲ್ಲಿ ಸಾಗಣೆಯ ಪ್ರವೃತ್ತಿ ಹೆಚ್ಚುತ್ತಿರುವುದರಿಂದ ರಕ್ಷಣಾ ಉತ್ಪನ್ನಗಳ ರಫ್ತು 2024-25ರ ವೇಳೆಗೆ 35 ಸಾವಿರ ಕೋಟಿ ರೂ.ಗಳ ಗುರಿಯನ್ನು ಮೀರುವ ನಿರೀಕ್ಷೆಯಿದೆ ಎಂದು ರಕ್ಷಣಾ ಉತ್ಪನ್ನ ವಿಭಾಗದ ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ.

ಕಳೆದ ಆರ್ಥಿಕ ವರ್ಷದಲ್ಲಿ ರಕ್ಷಣಾ ಉತ್ಪನ್ನಗಳ ರಫ್ತು 10,700 ಕೋಟಿ ರೂ. ಆಗಿದ್ದರೆ 2019-20ರಲ್ಲಿ 20 ಸಾವಿರ ಕೋಟಿ ರೂ. ಗುರಿ ಹೊಂದಲಾಗಿದೆ. ಈ ಆರ್ಥಿಕ ವರ್ಷದ ಪ್ರಥಮ ತ್ರೈಮಾಸಿಕ ಅವಧಿಯಲ್ಲೇ 5,600 ಕೋಟಿ ರೂ. ಮೊತ್ತದ ರಫ್ತು ದಾಖಲಾಗಿದೆ. 2016-17ರಲ್ಲಿ ಕೇವಲ 1,500 ಕೋಟಿ ರೂ, 2017-18ರಲ್ಲಿ 4,500 ಕೋಟಿ ರೂ.ದಾಖಲಿಸಿದ್ದ ರಫ್ತು ಕಳೆದ ವರ್ಷ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದವರು ಹೇಳಿದ್ದಾರೆ.

ರಕ್ಷಣಾ ಉತ್ಪನ್ನಗಳ ಉತ್ಪಾದನೆಯಲ್ಲಿ ಖಾಸಗಿ ಸಹಭಾಗಿತ್ವವನ್ನು ಉತ್ತೇಜಿಸಲು ಮತ್ತು ಕೋಲ್ಕತಾದ ಭಾರತ್ ಚೇಂಬರ್ ಆಫ್ ಕಾಮರ್ಸ್‌ನಲ್ಲಿ ರಕ್ಷಣಾ ಉತ್ಪಾದನೆಯ ಸೌಲಭ್ಯ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ರಕ್ಷಣಾ ಉತ್ಪನ್ನಗಳ ಉತ್ಪಾದನೆಯಲ್ಲಿ ಖಾಸಗಿ ಕ್ಷೇತ್ರಗಳ ಸಹಭಾಗಿತ್ವಕ್ಕೆ ಉತ್ತೇಜನ ನೀಡಲು ಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈಗಿನ ರಕ್ಷಣಾ ಸಾಮಾಗ್ರಿಗಳ ಉತ್ಪಾದನೆ ನೀತಿಯಲ್ಲಿ ಗಮನಾರ್ಹ ಬದಲಾವಣೆ ಮಾಡಲಾಗಿದೆ. ರಕ್ಷಣಾ ಉತ್ಪನ್ನಗಳ ರಫ್ತು ಎಂಬುದು ದೊಡ್ಡ ಬಂಡೆಕಲ್ಲು ಇದ್ದಂತೆ. ಅದನ್ನು ತಳ್ಳುವುದು ಸುಲಭವಲ್ಲ, ಆದರೆ ಒಮ್ಮೆ ಅದು ಮುಂದಕ್ಕೆ ಸರಿದರೆ ಬಳಿಕ ನಿಧಾನಕ್ಕೆ ವೇಗ ಪಡೆದುಕೊಳ್ಳುತ್ತದೆ ಎಂದವರು ಹೇಳಿದ್ದಾರೆ.

ಕೆಲವು ಸೂಕ್ಷ್ಮ ವಸ್ತುಗಳನ್ನು ಹೊರತುಪಡಿಸಿ ಉಳಿದ ಸುಮಾರು ಶೇ.90ರಷ್ಟು ಉತ್ಪನ್ನಗಳನ್ನು ಸಾಮರ್ಥ್ಯ ಪರಿಶೀಲನೆಗೆ ಒಳಪಡಿಸದಿರಲು ಯುದ್ಧೋಪಕರಣಗಳ ಕಾರ್ಖಾನೆ ಮಂಡಳಿ ನಿರ್ಧರಿಸಿದೆ. ಅಲ್ಲದೆ ಸುಮಾರು 3 ಸಾವಿರ ವಸ್ತುಗಳ ಉತ್ಪಾದನೆಯನ್ನು ಹೊರಗುತ್ತಿಗೆ ನೀಡಲು ನಿರ್ಧರಿಸಲಾಗಿದ್ದು ಇದರಿಂದ ಅತೀ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ದೊರಕಲಿದೆ. ಅಲ್ಲದೆ ರಕ್ಷಣಾ ಉತ್ಪನ್ನಗಳ ಉತ್ಪಾದನೆಗೆ ಸ್ವಯಂ ಆಸಕ್ತಿ ತೋರಿದ ಏಳು ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ ಎಂದು ಕುಮಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X