Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಶಾಸಕನ ಪುತ್ರಿಯ ಪತಿಗೆ ಕೋರ್ಟ್...

ಬಿಜೆಪಿ ಶಾಸಕನ ಪುತ್ರಿಯ ಪತಿಗೆ ಕೋರ್ಟ್ ನಲ್ಲೇ ಹಲ್ಲೆ

ದಲಿತ ಯುವಕನ ವಿವಾಹ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ15 July 2019 11:10 AM IST
share
ಬಿಜೆಪಿ ಶಾಸಕನ ಪುತ್ರಿಯ ಪತಿಗೆ ಕೋರ್ಟ್ ನಲ್ಲೇ ಹಲ್ಲೆ

ಲಕ್ನೊ, ಜು.15: ಅನ್ಯಜಾತಿಯ ವ್ಯಕ್ತಿಯನ್ನು ವಿವಾಹವಾಗಿದ್ದ ಉತ್ತರಪ್ರದೇಶದ ಬಿಜೆಪಿ ಶಾಸಕನ ಪುತ್ರಿಯ ಪತಿಯ ಮೇಲೆ ಅಲಹಾಬಾದ್ ಹೈಕೋರ್ಟ್ ಆವರಣದಲ್ಲಿ ಸೋಮವಾರ ಹಲ್ಲೆ ನಡೆಸಲಾಗಿದೆ.

ವಕೀಲರ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಉತ್ತರಪ್ರದೇಶದ ಬರೇಲಿ ಕ್ಷೇತ್ರದ ಶಾಸಕ ರಾಜೇಶ್ ಮಿಶ್ರಾರ ಪುತ್ರಿ 23 ವರ್ಷದ ಸಾಕ್ಷಿ ಮಿಶ್ರ ಮನೆಯವರ ಇಚ್ಛೆಗೆ ವಿರುದ್ಧವಾಗಿ 29 ವರ್ಷದ ಅಜಿತೇಶ್ ಕುಮಾರ್ ಎಂಬಾತನನ್ನು ಜುಲೈ 4ರಂದು ದೇವಸ್ಥಾನದಲ್ಲಿ ವಿವಾಹವಾಗಿದ್ದಳು. ಬಳಿಕ ತನಗೆ ಹಾಗೂ ಪತಿಗೆ ಜೀವಬೆದರಿಕೆ ಇದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದಳು.

ಅನ್ಯಜಾತಿಯ ವ್ಯಕ್ತಿಯನ್ನು ಮದುವೆಯಾಗಿರುವ ಬಗ್ಗೆ ತಂದೆ ಅಸಮಾಧಾನಗೊಂಡಿದ್ದು, ಅವರು ಹಾಗೂ ಸಹೋದರ ತನ್ನ ಪತಿಗೆ ಜೀವಬೆದರಿಕೆ ಒಡ್ಡಿದ್ದಾರೆ. ಇದರಿಂದ ಹೆದರಿ ತಾವು ತಲೆತಪ್ಪಿಸಿಕೊಂಡಿದ್ದೇವೆ. ಆದರೆ ತಂದೆ ಕಳುಹಿಸಿರುವ ಗೂಂಡಾಗಳು ತಮ್ಮನ್ನು ಬೆನ್ನಟ್ಟಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದಳು.

 “ಪಪ್ಪಾ, ದಯವಿಟ್ಟು ನಮ್ಮಷ್ಟಕ್ಕೇ ನಮ್ಮನ್ನು ಬದುಕಲು ಬಿಡಿ. ನಾನು ಅಜಿತೇಶ್‌ನೊಂದಿಗೆ ಖುಷಿಯಾಗಿ ಸ್ವತಂತ್ರವಾಗಿ ಬದುಕುತ್ತೇನೆ. ಆತನ ಮನೆಯವರೂ ತುಂಬಾ ಒಳ್ಳೆಯವರು. ಅವರು ಪ್ರಾಣಿಗಳಲ್ಲ. ನಿಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಿ. ಒಂದು ವೇಳೆ ಅಜಿತೇಶ್‌ಗೆ ಏನಾದರೂ ಆದರೆ ಅದಕ್ಕೆ ನೀವು, ವಿಕೀ ಭರತೌಲ್ ಮತ್ತು ರಾಜೀವ್ ರಾಣಾ ಜವಾಬ್ದಾರರು” ಎಂದು ವೀಡಿಯೊದಲ್ಲಿ ಹೇಳಿಕೆ ನೀಡಿದ್ದಾರೆ.

 ಈ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಒದಗಿಸಬೇಕೆಂದು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಪತಿಯೊಂದಿಗೆ ಹಾಜರಾಗಿದ್ದರು. ಅರ್ಜಿದಾರರು ಪ್ರಾಪ್ತ ವಯಸ್ಕರಾಗಿರುವುದರಿಂದ ತಮ್ಮ ಬದುಕಿನ ಬಗ್ಗೆ ಸ್ವಂತ ನಿರ್ಧಾರ ಕೈಗೊಳ್ಳಲು ಸಮರ್ಥರಾಗಿದ್ದಾರೆ ಎಂದು ತೀರ್ಪು ನೀಡಿದ ನ್ಯಾಯಾಲಯ, ದಂಪತಿಗೆ ಭದ್ರತೆ ಒದಗಿಸುವಂತೆ ಹಾಗೂ ಇವರ ವಿಷಯದಲ್ಲಿ ಮಧ್ಯಪ್ರವೇಶಿಸದಂತೆ ಶಾಸಕ ರಾಜೇಶ್ ಮಿಶ್ರಾಗೆ ಸೂಚಿಸಿದೆ. ಬಳಿಕ ಕೋರ್ಟ್‌ರೂಂನಿಂದ ಹೊರಬರುತ್ತಿದ್ದಂತೆಯೇ ಅಜಿತೇಶ್ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ವಿಷಯವನ್ನು ದಂಪತಿ ತಕ್ಷಣ ನ್ಯಾಯಾಲಯದ ಗಮನಕ್ಕೆ ತಂದರು. ಆಗ ಪೊಲೀಸ್ ಅಧೀಕ್ಷಕರನ್ನು ನ್ಯಾಯಾಲಯಕ್ಕೆ ಕರೆಸಿಕೊಂಡ ನ್ಯಾಯಾಧೀಶರು, ದಂಪತಿ ತಮಗಿಷ್ಟ ಬಂದೆಡೆ ತೆರಳಲು ಸೂಕ್ತ ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿದರು.

ಜಾತಿಯ ಹಿನ್ನೆಲೆಯಲ್ಲಿ ತಾನು ಮದುವೆಯನ್ನು ವಿರೋಧಿಸಿಲ್ಲ. ಪುತ್ರಿ ಸಾಕ್ಷಿ ಹಾಗೂ ಅಜಿತೇಶ್ ನಡುವಿನ ವಯಸ್ಸಿನ ಅಂತರ ಹಾಗೂ ಅಜಿತೇಶ್‌ಗೆ ಇರುವ ಆದಾಯವನ್ನು ಗಮನಿಸಿ ತಾನು ಪುತ್ರಿಯ ವಿವಾಹವನ್ನು ವಿರೋಧಿಸಿದ್ದೆ ಎಂದು ಶಾಸಕ ರಾಜೇಶ್ ಮಿಶ್ರಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X