Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಿದರೂ...

ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಿದರೂ ಮೈತ್ರಿ ಸರಕಾರ ಉಳಿಯದು: ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ16 July 2019 8:25 PM IST
share
ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಿದರೂ ಮೈತ್ರಿ ಸರಕಾರ ಉಳಿಯದು: ಬಿಜೆಪಿ

ಬೆಂಗಳೂರು, ಜು. 16: ಶಾಸಕರ ರಾಜೀನಾಮೆ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಿದರೂ ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದ ಹೊರವಲಯದಲ್ಲಿನ ರೆಸಾರ್ಟ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಾಸಕ ಸಿ.ಟಿ.ರವಿ, ಸುಪ್ರೀಂ ಕೋರ್ಟ್‌ನಲ್ಲಿ ವಾದ, ಪ್ರತಿವಾದ ಹಾಗೂ ತೀರ್ಪು ಏನೇ ಇರಲಿ. ಈ ಸರಕಾರ ಉರುಳುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

ವಕೀಲರ ವಾದ-ಪ್ರತಿವಾದ ಸರಕಾರವನ್ನು ಕಾಪಾಡುವುದಿಲ್ಲ. ಜನರ ವಿಶ್ವಾಸ ಕಳೆದುಕೊಂಡಿರುವ ಮೈತ್ರಿ ಸರಕಾರ ಗುರುವಾರ ಸಂಜೆ ಇತಿಹಾಸ ಸೇರುತ್ತದೆ. ಕಾಂಗ್ರೆಸ್ ಈಗಾಗಲೇ ವಿಪಕ್ಷ ಸ್ಥಾನದಲ್ಲಿ ಕೂರಲು ಮಾನಸಿಕವಾಗಿ ಸಿದ್ಧತೆ ನಡೆಸಿದೆ ಎಂದು ಅವರು ತಿಳಿಸಿದರು.

ಕುಡಚಿ ಕ್ಷೇತ್ರದ ಶಾಸಕ ಪಿ.ರಾಜೀವ್ ಮಾತನಾಡಿ, ರಾಜ್ಯದ ಜನತೆ ಸುಪ್ರೀಂ ಕೋರ್ಟ್ ವಿಚಾರಣೆ ಆಲಿಸಿದ್ದಾರೆ. ಶಾಸಕರ ಮೂಲಭೂತ ಹಕ್ಕನ್ನು ಪ್ರತಿಬಂಧಿಸುವ ಹಕ್ಕು ಯಾರಿಗೂ ಇಲ್ಲ. ಶಾಸಕರ ರಾಜೀನಾಮೆ ಹಿಂದೆ ಸ್ವ ಇಚ್ಛೆ ಇದೆಯೋ ಇಲ್ಲವೋ ಅಥವಾ ನೈಜತೆ ಇದೆಯಾ ಎನ್ನುವುದನ್ನಷ್ಟೇ ಪರಿಶೀಲಿಸಲು ಸ್ಪೀಕರ್ ಅಧಿಕಾರ ಹೊಂದಿದ್ದಾರೆ. ಹೀಗಾಗಿ ಸ್ಪೀಕರ್ ಅವರು ಬೇರೆ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ. ಕೋಟ್ಯಂತರ ಜನರ ಆಸೆಯಂತೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಬರುತ್ತದೆ. ನಾಳೆ ಸುಪ್ರೀಂ ಕೋರ್ಟ್ ಇದಕ್ಕೆ ಪೂರಕವಾದ ತೀರ್ಪು ಬರಲಿದೆ ಎಂದು ಅವರು ಹೇಳಿದರು.

ಮೇಲ್ಮನೆ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಮಂದಿ ಶಾಸಕರು ರಾಜೀನಾಮೆ ನೀಡಿದ್ದು, ಸ್ಪೀಕರ್ ಅವರ ರಾಜೀನಾಮೆಯನ್ನು ಕೂಡಲೇ ಅಂಗೀಕರಿಸಬೇಕು. ಸುಪ್ರೀಂ ಕೋರ್ಟ್ ನಾಳೆ ಐತಿಹಾಸಿಕ ತೀರ್ಪು ನೀಡುವ ನಿರೀಕ್ಷೆ ಇದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X