Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್ಪಸಂಖ್ಯಾತ ಕೈದಿಗಳ ಬಿಡುಗಡೆಗೆ ಕ್ರಮ:...

ಅಲ್ಪಸಂಖ್ಯಾತ ಕೈದಿಗಳ ಬಿಡುಗಡೆಗೆ ಕ್ರಮ: ಜಿ.ಎ. ಬಾವ

ವಾರ್ತಾಭಾರತಿವಾರ್ತಾಭಾರತಿ16 July 2019 9:46 PM IST
share
ಅಲ್ಪಸಂಖ್ಯಾತ ಕೈದಿಗಳ ಬಿಡುಗಡೆಗೆ ಕ್ರಮ: ಜಿ.ಎ. ಬಾವ

ಮಂಗಳೂರು, ಜು.16: ರಾಜ್ಯದ ಎಲ್ಲ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಕೈದಿಗಳ ಬಿಡುಗಡೆಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಆಯೋಗದ ಅಧ್ಯಕ್ಷ ಜಿ.ಎ.ಬಾವ ತಿಳಿಸಿದ್ದಾರೆ.

ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಮಂಗಳವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರು ಸೇರಿದಂತೆ ಇತರ ಸಮುದಾಯಗಳ ಕೈದಿಗಳ ಬಿಡುಗಡೆಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದು ಕೇವಲ ಒಂದೇ ಬಾರಿ ಜೈಲಿಗೆ ಹೋದವರಿಗೆ ಮಾತ್ರ ಅನ್ವಯಿಸಲಿದೆ. ಒಂದಕ್ಕಿಂತ ಹೆಚ್ಚು ಬಾರಿ ಅಪರಾಧ ಪ್ರಕರಣ ಎದುರಿಸುತ್ತಿರು ವವರಿಗೆ ಅನ್ವಯಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಸಣ್ಣಪುಟ್ಟ ಕಾನೂನುಬಾಹಿರ ಚಟುವಟಿಕೆ ಮಾಡಿದವರು, ‘ಅನುಮಾನಾಸ್ಪದ’ ಎಂದು ಪರಿಗಣಿಸಲ್ಪಟ್ಟವರು, ಸಣ್ಣಪುಟ್ಟ ಕಳವು ಪ್ರಕರಣಗಳಲ್ಲಿ ಅಲ್ಪಸಂಖ್ಯಾತರ ಆರೋಪಿಗಳು ಜೈಲು ಪಾಲಾಗಿರುತ್ತಾರೆ. ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಸಾಮಾನ್ಯವಾಗಿ ಮೂರು ತಿಂಗಳಿಂದ ಆರು ತಿಂಗಳವರೆಗೆ ಶಿಕ್ಷೆ ಪ್ರಕಟಿಸುತ್ತಾರೆ. ಇಂತಹ ಕೈದಿಗಳು ಜಾಮೀನು ಪಡೆದರೂ ಬಡತನದ ಹಿನ್ನೆಲೆಯಲ್ಲಿ ಶೂರಿಟಿ ಪಾವತಿಸಲು ಸಾಧ್ಯವಾಗುತ್ತಿಲ್ಲ. ಮೂರು ತಿಂಗಳು ಜೈಲುಶಿಕ್ಷೆ ಅನುಭವಿಸುವವರು ಎರಡು ವರ್ಷವಾದರೂ ಇನ್ನೂ ಜೈಲಲ್ಲೇ ಇರುತ್ತಾರೆ. ಅಂತಹವರ ಬಿಡುಗಡೆ ಆಯೋಗ ಮುಂದಾಗಲಿದೆ ಎಂದರು.

ರಾಜ್ಯದ ಎಲ್ಲ ಜೈಲುಗಳಿಂದ ಅಲ್ಪಸಂಖ್ಯಾತ ಕೈದಿಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು. ಅಂತಹವರ ಸಂಪೂರ್ಣ ಮಾಹಿತಿಯನ್ನು ಪ್ರತಿ ತಿಂಗಳು ಕಳುಹಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂಥವರ ವಿವರಗಳನ್ನು ವಕೀಲರಿಗೆ ಮತ್ತು ಎನ್‌ಜಿಒಗಳಿಗೆ ನೀಡಿ ಬಿಡುಗಡೆಗೆ ಸಹಾಯ ಮಾಡಲು ಉದ್ದೇಶಿಸಲಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿಯೂ ಆಗಿರುವ ಜಿ.ಎ. ಬಾವ ತಿಳಿಸಿದರು.

ದುರುಪಯೋಗ ಸಾಧ್ಯತೆ: ಸಣ್ಣಪುಟ್ಟ ಅಪರಾಧ ಆರೋಪದ ಹಿನ್ನೆಲೆಯಲ್ಲಿ ಜೈಲುಪಾಲಾಗುವ ಆರೋಪಿಗಳು ಅವಧಿ ಬಳಿಕ ಜೈಲಿನಿಂದ ಹೊರ ಬರಬೇಕು. ಆದರೆ, ಜಾಮೀನು ದೊರೆತರೂ ಶೂರಿಟಿ ಸಿಗದ ಹಿನ್ನೆಲೆಯಲ್ಲಿ ಜೈಲಿನಲ್ಲಿ ಉಳಿದುಕೊಂಡರೆ ಅಪಾಯ ಹೆಚ್ಚು. ಗಂಭೀರ ಪ್ರಕರಣದ ಕೈದಿಗಳು ಇಂತಹವರನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದರು.

ಇತ್ತೀಚೆಗೆ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ಆಯೋಗ ಭೇಟಿ ನೀಡಿತ್ತು. ಜೈಲಿನಲ್ಲಿ ವಿಚಾರಣಾಧೀನ ಹಾಗೂ ಶಿಕ್ಷೆ ಅನುಭವಿಸುತ್ತಿರುವ ಸುಮಾರು ನಾಲ್ಕು ಸಾವಿರ ಕೈದಿಗಳಿದ್ದಾರೆ. ಅವಧಿ ಬಳಿಕವೂ ಜೈಲಿನಿಂದ ಹೊರಬಾರಲು ಸಾಧ್ಯವಾಗದ ವಿಷಯ ತಿಳಿದುಬಂದಿತು. ಬೆಂಗಳೂರು ಕೇಂದ್ರ ಕಾರಾಗೃಹದಲ್ಲೇ ಶೇ.35ರಷ್ಟು ಅಲ್ಪಸಂಖ್ಯಾತರಿದ್ದಾರೆ ಎಂದು ಜಿ.ಎ.ಬಾವ ಹೇಳಿದರು.

ನಗರದ ಹೊರವಲಯದ ನಾಟೆಕಲ್ ವಸತಿ ಶಾಲೆಯಲ್ಲಿ ಅತಿ ಕಡಿಮೆ ಶೇ.58ರಷ್ಟು ಫಲಿತಾಂಶ ಬಂದಿದೆ. ಫಲಿತಾಂಶ ಸುಧಾರಿಸಲು ಕ್ರಮ ಕೈಗೊಳ್ಳುವಂತೆ ಅಲ್ಲಿನ ಶಿಕ್ಷಕರಿಗೆ ಸೂಚಿಸಲಾಗಿದೆ. ಅಲ್ಲದೆ, ಅಲ್ಲಿ 250 ವಿದ್ಯಾರ್ಥಿಗಳಿರಬೇಕಾದಲ್ಲಿ ಕೇವಲ 65 ಮಂದಿ ಮಾತ್ರ ಇದ್ದಾರೆ. ಇದರಿಂದ ಸರಕಾರದ ಸೌಲಭ್ಯ ಅರ್ಹ ಬಡವರಿಗೆ ಸಿಗುತ್ತಿಲ್ಲ. ವಿದ್ಯಾರ್ಥಿಗಳ ಸಂಖ್ಯೆ ಏರಿಕೆ ಮಾಡುವಂತೆಯೂ ಸೂಚಿಸಲಾಗಿದೆ. ಈ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿದ್ದು, ಹೊಸ ಕಟ್ಟಡ ನಿರ್ಮಾಣವಾಗುತ್ತಿದೆ. ಡಿಸೆಂಬರ್‌ನಲ್ಲಿ ಕಾಮಗಾರಿ ಮುಕ್ತಾಯವಾಗುವ ನಿರೀಕ್ಷೆಯಿದೆ ಎಂದರು.

ನಗರದ ಚಿಲಿಂಬಿಯಲ್ಲಿರುವ ಪೋಸ್ಟ್ ಮೆಟ್ರಿಕ್ ವಸತಿ ನಿಲಯದ ಮಕ್ಕಳಿಗೆ ಆರೋಗ್ಯ ಸಂಬಂಧಿ ಏರುಪೇರಾದರೆ ಹತ್ತಿರ ಆಸ್ಪತ್ರೆಗಳಿಲ್ಲದೆ ತೊಂದರೆಯಾಗುತ್ತಿರುವ ಕುರಿತು ದೂರುಗಳು ಬಂದಿವೆ. ಅಲ್ಲಿ ಆಸ್ಪತ್ರೆ ಸವಲತ್ತಿನ ವ್ಯವಸ್ಥೆ ಮಾಡಲಾಗುವುದು ಎಂದು ಜಿ.ಎ. ಬಾವ ತಿಳಿಸಿದರು.

ಸೈಂಟ್ ಜೋಸೆಫ್ ವೃದ್ಧಾಶ್ರಮಕ್ಕೆ ಸೂಕ್ತ ಅನುದಾನ ಬಾರದೆ ಸಮಸ್ಯೆಯಾಗಿದ್ದು, ಅದಕ್ಕೂ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಉಸ್ಮಾನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಫ್ವಾನ್ ಉಪಸ್ಥಿತರಿದ್ದರು.

ವಕ್ಫ್ ಆಸ್ತಿ ಒತ್ತುವರಿ ತೆರವು

ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಗಳು ಅನೇಕ ಕಡೆ ಒತ್ತುವರಿಯಾಗಿವೆ. 1968ರಲ್ಲಿ ವಕ್ಫ್ ಆಸ್ತಿಗಳ ಗೆಜೆಟ್ ನೋಟಿಫಿಕೇಶನ್ ಆಗಿದ್ದು, ಒಮ್ಮೆ ಘೋಷಣೆಯಾದ ವಕ್ಫ್ ಆಸ್ತಿ ಎಂದಿಗೂ ವಕ್ಫ್ ಆಸ್ತಿಯಾಗಿಯೇ ಉಳಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಈ ಹಿನ್ನೆಲೆಯಲ್ಲಿ ಒತ್ತುವರಿಯಾದ ವಕ್ಫ್ ಆಸ್ತಿಗಳನ್ನು ಮರಳಿ ಪಡೆಯಲು ಆಯೋಗದಿಂದ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತಿದೆ. ಮುಂದೆ ಹಂತಹಂತವಾಗಿ ಇಂತಹ ಪ್ರಕರಣಗಳನ್ನು ನಿರ್ವಹಿಸಲಿದ್ದೇವೆ ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವ ಹೇಳಿದರು.

‘ಅಲ್ಪಸಂಖ್ಯಾತರಿಗೆ ಅನ್ಯಾಯ’

ರಾಜ್ಯದ ಎಲ್ಲ ಇಲಾಖೆಗಳಲ್ಲೂ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ. ಆಯಾ ಇಲಾಖೆಗಳಿಂದ ಪ್ರತಿ ತಿಂಗಳು ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದ ಬಳಿಕ ಪರಿಶೀಲನೆ ನಡೆಸಲಾಗುವುದು. ಇಂತಹ ಪ್ರಕರಣಗಳಲ್ಲಿ ಅನ್ಯಾಯವಾಗುತ್ತಿರುವುದು ಸಾಬೀತಾದಲ್ಲಿ ಆಯೋಗ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X