Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರಕ್ಕಾಗಿ ಲಜ್ಜೆಗೆಟ್ಟ ರಾಜಕೀಯ:...

ಅಧಿಕಾರಕ್ಕಾಗಿ ಲಜ್ಜೆಗೆಟ್ಟ ರಾಜಕೀಯ: ಎಸ್‌ಯುಸಿಐ

ವಾರ್ತಾಭಾರತಿವಾರ್ತಾಭಾರತಿ16 July 2019 10:24 PM IST
share

ಬೆಂಗಳೂರು, ಜು. 16: ಭೀಕರ ಸ್ವರೂಪದ ಬರ, ಕುಡಿಯುವ ನೀರಿನ ಸಮಸ್ಯೆ, ಕೃಷಿ ಬಿಕ್ಕಟ್ಟು, ಕಾರ್ಮಿಕರ ಸಮಸ್ಯೆಗಳ ನಿವಾರಣೆಗೆ ಯಾವುದೇ ಕ್ರಮ ಕೈಗೊಳ್ಳದ ಜನವಿರೋಧಿ ಕಾಂಗ್ರೆಸ್-ಜೆಡಿಎಸ್, ಬಿಜೆಪಿ ಅಧಿಕಾರಕ್ಕಾಗಿ ಲಜ್ಜೆಗೆಟ್ಟ ರಾಜಕೀಯದಲ್ಲಿ ತೊಡಗಿವೆ ಎಂದು ಎಸ್‌ಯುಸಿಐ ಆರೋಪಿಸಿದೆ.

ಜನವಿರೋಧಿ ಪಕ್ಷಗಳಿಂದ ನಿರೀಕ್ಷಿಸುವುದು ಏನೂ ಉಳಿದಿಲ್ಲ. ವ್ಯವಸ್ಥೆಯ ರಕ್ಷಕರಾಗಿರುವ ಇವರಿಂದ ಯಾವುದೇ ನಿರೀಕ್ಷೆ, ಭ್ರಮೆಗಳನ್ನು ಉಳಿಸಿಕೊಳ್ಳದೇ, ದುಡಿಯುವ ಜನತೆ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ತಮ್ಮದೇ ಜನಹೋರಾಟಕ್ಕೆ ಬೀದಿಗೆ ಇಳಿಯಬೇಕಿದೆ ಎಂದು ಎಸ್‌ಯುಸಿಐನ ಎಂ.ಎನ್.ಶ್ರೀರಾಮ್ ಕರೆ ನೀಡಿದ್ದಾರೆ.

ಒಂದು ವರ್ಷದಿಂದ ಅಧಿಕಾರದ ಗದ್ದುಗೆಯಲ್ಲಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜನಪರ ಆಡಳಿತದ ಮಾತಿರಲಿ, ಒಂದು ಸರಕಾರ ಅಸ್ತಿತ್ವದಲ್ಲಿದೆಯೆನ್ನುವ ಭಾವನೆಯನ್ನು ಮೂಡಿಸುವಲ್ಲಿಯೂ ವಿಫಲವಾಗಿದೆ. ತಾವು ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಿಲ್ಲ ಎಂದು ಅವರು ದೂರಿದ್ದಾರೆ.

ಇನ್ನು ವಿಪಕ್ಷ ಬಿಜೆಪಿ ‘ಆಪರೇಷನ್ ಕಮಲ’ದ ಮೂಲಕ ಲಜ್ಜೆಗೆಟ್ಟ ಶಾಸಕರ ಖರೀದಿಯ ಸಂತೆಯನ್ನು ಪ್ರಾರಂಭಿಸಿದ್ದರು. ಆರು ಬಾರಿ ಇಂತಹ ಪ್ರಯತ್ನಗಳನ್ನು ಮಾಡಿ ವಿಫಲವಾಗಿದ್ದರೂ, ಏಳನೆ ಬಾರಿಗೆ ಯಶಸ್ವಿಯಾಗಿ ನಿಭಾಯಿಸುವತ್ತ ದಾಪುಗಾಲು ಹಾಕಿದ್ದಾರೆ.

ಸರಕಾರದ ಒಳ ಜಗಳಕ್ಕೂ ನಮಗೂ ಸಂಬಂದವಿಲ್ಲವೆಂದು ಹೇಳುತ್ತಾ, ಅತೃಪ್ತರನ್ನು ಸೆಳೆಯುವ ಅವರ ಪ್ರಯತ್ನ ಗುಟ್ಟಾಗಿಯೇನೂ ಉಳಿದಿಲ್ಲ. ಈಗ 12 ಜನ ಅತೃಪ್ತ ಶಾಸಕರನ್ನು ಮುಂಬೈನಲ್ಲಿ ಹಿಡಿದಿಟ್ಟುಕೊಂಡು ಅಧಿಕಾರದ ಕನಸು ಕಾಣುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X