Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂರಾರು ವರ್ಷಗಳ ತಯಾರಿಯ ಫಲ ಆರೆಸ್ಸೆಸ್...

ನೂರಾರು ವರ್ಷಗಳ ತಯಾರಿಯ ಫಲ ಆರೆಸ್ಸೆಸ್ ಪಡೆಯುತ್ತಿದೆ: ಹರ್ಷ ಮಂದಾರ್

ವಾರ್ತಾಭಾರತಿವಾರ್ತಾಭಾರತಿ16 July 2019 10:38 PM IST
share

ಬೆಂಗಳೂರು, ಜು.16: ನೂರಾರು ವರ್ಷಗಳಿಂದ ಸಂಘಪರಿವಾರ ನಡೆಸಿದ ತಯಾರಿಯ ಪ್ರತಿಫಲವನ್ನು ಇಂದು ತಿನ್ನುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಸೆಂಟರ್ ಫಾರ್ ಇಕ್ವಿಟಿ ಸ್ಟಡೀಸ್‌ನ ನಿರ್ದೇಶಕ ಹರ್ಷ ಮಂದಾರ್ ಹೇಳಿದ್ದಾರೆ.

ಮಂಗಳವಾರ ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಎಸ್‌ಯುಕೆ, ಪಿಯುಸಿಎಲ್, ಮೂವ್‌ಮೆಂಟ್ ಫಾರ್ ಜಸ್ಟೀಸ್ ಸೇರಿದಂತೆ ವಿವಿಧ ಸಂಘಟನೆಗಳ ಜಂಟಿಯಾಗಿ ಆಯೋಜಿಸಿದ್ದ ‘ದೌರ್ಜನ್ಯ ಕೊನೆಗಾಣಿಸುತ್ತಾ, ದ್ವೇಷ ಮುಕ್ತ ಸಮಾಜ ಕಟ್ಟೋಣ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಾರತದಲ್ಲಿ ಒಂದು ಸಮುದಾಯವನ್ನೇ ಗುರಿಯಾಗಿಸಿಕೊಂಡು ನಿರಂತರವಾದ ದೌರ್ಜನ್ಯ, ದಬ್ಬಾಳಿಕೆ ಮಾಡಲಾಗುತ್ತಿದೆ. ಅನ್ಯಾಯ ಮಾಡುವವರಿಗೆ ಅಧಿಕಾರದಲ್ಲಿರುವವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದ ಅವರು, ನೂರಾರು ವರ್ಷಗಳಿಂದ ಸಂಘಪರಿವಾರ, ಆರೆಸ್ಸೆಸ್ ನಡೆಸಿದ ತಯಾರಿಯ ಪ್ರತಿಫಲವೇ ಇದಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಒಂದು ಸಮುದಾಯ ಅಥವಾ ಜನಾಂಗದ ವಿರುದ್ಧವಾಗಿ ಸಾಮೂಹಿಕವಾಗಿ ಅಸೂಯೆ, ದ್ವೇಷವನ್ನು ತುಂಬುವ ಕೆಲಸ ನಡೆಯುತ್ತಿದೆ. ದೊಡ್ಡ ಪ್ರಮಾಣದಲ್ಲಿ ಅದನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದ ಅವರು, ಒಂದು ಕ್ರೂರ ಘಟನೆಯನ್ನು ಕೆಲವು ಕಡೆಗಳಲ್ಲಿ ವಿಡಿಯೋ ಮಾಡಿ ಹಂಚುತ್ತಿದ್ದಾರೆ. ಆದರೂ, ಅವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ಸಂತ್ರಸ್ಥರ ಮೇಲೆಯೇ ಪ್ರಕರಣಗಳು ದಾಖಲಿಸುವ ಅತಿಕ್ರೂರ ಪರಿಸ್ಥಿತಿಯಲ್ಲಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

ನಾವು ಕಾರವನ್ ಎ ಮೊಹಬ್ಬತ್‌ನ ಒಂದು ಭಾಗವಾಗಿ ದೇಶದಾದ್ಯಂತ ಸಂಚಾರ ಮಾಡುತ್ತಿದ್ದೇವೆ. ಗುಂಪು ಥಳಿತಕ್ಕೊಳಗಾದ ಪ್ರತಿ ಕುಟುಂಬವನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದೇನೆ. ನಾನು ಅವರಲ್ಲಿ ತುಂಬಾ ದುಃಖ, ಪ್ರತ್ಯೇಕತೆಯ ಭಾವ ಹಾಗೂ ಭೀತಿಯನ್ನು ನೋಡಿದೆ. ಅದನ್ನು ನೋಡಿದರೆ ನಮ್ಮ ಸಮಾಜ ಆಳದಿಂದ ಧ್ರುವೀಕರಣಗೊಳ್ಳುತ್ತಿದೆ ಎಂಬುದು ನನ್ನ ಭಾವನೆಯಾಗಿದೆ ಎಂದು ಅವರು ತಿಳಿಸಿದರು.

ನಮ್ಮ ಸಮಾಜದಲ್ಲಿ ಶೋಷಿತರ, ದಲಿತರ, ಅಲ್ಪಸಂಖ್ಯಾತರ ಮೇಲೆ ಅತಿಕ್ರೂರವಾಗಿ, ದ್ವೇಷ, ಅಸೂಯೆಯಿಂದ ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಿದ್ದರೂ, ಸಭ್ಯ ಸಮಾಜವು ಮೌನವಾಗಿದೆ. ಮತ್ತೊಂದು ಕಡೆ ಮಾಧ್ಯಮಗಳು ಅನ್ಯಾಯವನ್ನು ತೋರಿಸುವ ಬದಲಿಗೆ, ಅನ್ಯಾಯ ಮಾಡಿದವರನ್ನೇ ತೋರಿಸುವ ಮೂಲಕ ಅವರನ್ನು ಹೀರೋಗಳನ್ನಾಗಿ ಮಾಡುತ್ತಿದ್ದಾರೆ ಎಂದರು.

ದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆಗಳ ವಿರುದ್ಧ ಪ್ರತಿಯೊಬ್ಬರೂ ಜಾಗೃತಗೊಳ್ಳಬೇಕು ಹಾಗೂ ಇವುಗಳ ವಿರುದ್ಧ ಚಳವಳಿಗೆ ಇಳಿದು ನಮ್ಮನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅನ್ಯಾಯದ ವಿರುದ್ಧ ನಡೆಯುತ್ತಿರುವ ಚಳವಳಿಯಲ್ಲಿ ನಾವೇನು ತರುತ್ತಿದ್ದೇವೆ ಎಂಬುದನ್ನು ಹಿಂತಿರುಗಿ ನೋಡಿಕೊಳ್ಳಬೇಕಿದೆ. ಭಯವಿಲ್ಲದ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕ್ಯೂಯಲ್ ಫೌಂಡೇಷನ್‌ನ ಶರಾಬಿ ಅಲಿ, ಆಲ್ ಇಂಡಿಯಾ ಪೀಪಲ್ಸ್ ಫೋರಂನ ವಿದ್ಯಾ ದಿನಕರ್, ಪರ್ಯಾಯ ಕಾನೂನು ವೇದಿಕೆ ಅಪಿತ್ ಉಪಸ್ಥಿತರಿದ್ದರು.

ವಿಶ್ವದ ಅನೇಕ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಜನರೇ ತನ್ನ ಜನಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ. ಅದೇ ರೀತಿ ಅಮೆರಿಕ ಅಧ್ಯಕ್ಷ ಟ್ರಂಪ್, ನಮ್ಮ ದೇಶದ ಪ್ರಧಾನಿ ಮೋದಿ ಆಯ್ಕೆಯಾಗಿದ್ದಾರೆ. ಆದರೆ, ಮೋದಿಯು 2014 ರ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ನೋಡಿ ಜನ ಮತ ಹಾಕಿದ್ದರು. 2019 ರ ಚುನಾವಣೆ ವೇಳೆಗೆ ಒಂದು ಭರವಸೆಯಿಲ್ಲದೆ ಕೇವಲ ದ್ವೇಷದಿಂದಲೇ ಚುನಾವಣೆ ಎದುರಿಸಿ ಗೆದ್ದಿದ್ದಾರೆ. ಇಂದು ಅದು ಅಧಿಕವಾಗಿ, ದಿನದಿಂದ ದಿನಕ್ಕೆ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

-ಹರ್ಷ ಮಂದಾರ್, ಸೆಂಟರ್ ಫಾರ್ ಇಕ್ವಿಟಿ ಸ್ಟಡೀಸ್‌ನ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X